Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಯಾರ...

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಯಾರ ಕೊರಳಿಗೆ ಬೀಳಲಿದೆ ವಿಜಯಮಾಲೆ ?

ಲಕ್ಷ್ಮೀಶ್ಲಕ್ಷ್ಮೀಶ್21 April 2019 10:21 PM IST
share
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಯಾರ ಕೊರಳಿಗೆ ಬೀಳಲಿದೆ ವಿಜಯಮಾಲೆ ?

ಮಡಿಕೇರಿ,ಎ.21: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮತದಾರರು ನೀಡಿರುವ ಮತದಾನದ ತೀರ್ಪು ಮತಯಂತ್ರಗಳಲ್ಲಿ ಭದ್ರವಾಗಿರುವ ಬೆನ್ನಲ್ಲೇ ವಿಜೇತ ಅಭ್ಯರ್ಥಿ ಯಾರಾಗಬಹುದೆನ್ನುವ ಲೆಕ್ಕಾಚಾರಗಳು ಗರಿಗೆದರಲಾರಂಭಿಸಿದೆ.

ಈ ಕ್ಷೇತ್ರದಲ್ಲಿ 22 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದರೂ ಬಿಜೆಪಿ ಅಭ್ಯರ್ಥಿ ಪ್ರತಾಪಸಿಂಹ ಮತ್ತು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಅವರ ನಡುವೆ ನೇರಾನೇರ ಹಣಾಹಣಿ ನಡೆದಿರುವುದರಿಂದ, ಇವರಿಬ್ಬರಲ್ಲಿ ವಿಜಯಮಾಲೆ ಯಾರ ಕೊರಳಿಗೆ ಬೀಳಬಹುದೆನ್ನುವ ವಿಶ್ಲೇಷಣೆಗಳು ನಡೆಯುತ್ತಿದೆ.

ಜಿಲ್ಲೆಯಲ್ಲಿ 4,40,730 ಮತದಾರರಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2,21,157 ಮತದಾರರು ಹಾಗೂ ವೀರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 2,19,573 ಮತದಾರರಿದ್ದಾರೆ. ಮಡಿಕೇರಿ ಕ್ಷೇತ್ರದಲ್ಲಿ ಶೇ. 76.55 ರಷ್ಟು ಮತ್ತು ವೀರಾಜಪೇಟೆ ಕ್ಷೇತ್ರದಲ್ಲಿ ಶೇ. 72.52 ರಷ್ಟು ಮತದಾನವಾಗಿದೆ. ದೊಡ್ಡ ಸಂಖ್ಯೆಯಲ್ಲಿ ಮತಗಟ್ಟೆಗೆ ಹರಿದು ಬಂದ ಮತದಾರನ ಒಲವು ಯಾರತ್ತ ತಿರುಗಿದೆ ಎನ್ನುವುದನ್ನು ಸ್ಪಷ್ಟಪಡಿಸಿಕೊಳ್ಳಲು ಮೇ 23 ರ ವರೆಗೆ ಕಾಯುವುದು ಅನಿವಾರ್ಯವಾಗಿದೆ.

ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರುಗಳೇ ಇದ್ದು, ಕೊಡಗು ಜಿಲ್ಲೆ ಬಿಜೆಪಿಯ ಭದ್ರಕೊಟೆ ಎನ್ನುವ ಹಣೆಪಟ್ಟಿಯನ್ನು ಹೊತ್ತಿದೆ. ಅದಕ್ಕೆ ತಕ್ಕಂತೆ ಬಿಜೆಪಿ ಪ್ರಮುಖರು ಈ ಬಾರಿ ಲೋಕಸಭೆಯಲ್ಲಿ ‘ಬಿಜೆಪಿಯೇ ಗೆಲುವು ಸಾಧಿಸುತ್ತದೆ’ ಎನ್ನುವ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಅಭ್ಯರ್ಥಿಯ ಹೆಸರನ್ನು ಅಷ್ಟಾಗಿ ಪ್ರಸ್ತಾಪಿಸದೆ ಮೋದಿ, ತಾವರೆ, ದೇಶದ ಭದ್ರತೆಯ ಹೆಸರಿನಲ್ಲಿ ಪ್ರತಾಪ್‍ಸಿಂಹ ಪರ ಮತಯಾಚಿಸಿರುವ ಬಿಜೆಪಿ ತಂತ್ರಗಾರಿಕೆ ಫಲ ನೀಡುವುದೇ ಅಥವಾ ಮೈತ್ರಿ ಮಂತ್ರ ಫಲ ನೀಡುವುದೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಕೂಟ ಅಹಿಂದ ಮತಗಳ ಮೇಲೆ ಹೆಚ್ಚು ವಿಶ್ವಾಸವಿಟ್ಟುಕೊಂಡಿದ್ದು, ಪ್ರತಾಪ್‍ ಸಿಂಹ ಅವರ ವೈಫಲ್ಯಗಳ ಲಾಭವೂ ನಮಗೆ ಆಗಲಿದೆ ಎಂದು ಮೈತ್ರಿ ಪಕ್ಷಗಳ ನಾಯಕರು ಬೀಗುತ್ತಿದ್ದಾರೆ. ಮೈಸೂರು ಕ್ಷೇತ್ರದಲ್ಲಿ ಬಿಜೆಪಿಗೆ ಮತ ಕೊರತೆ ಎದುರಾಗಬಹುದೆನ್ನುವ ಆತಂಕದಲ್ಲಿರುವ ನಾಯಕರು ಆ ಭಾಗದಲ್ಲಿ ಕಳೆದುಕೊಂಡ ಮತಗಳನ್ನು ಸರಿದೂಗಿಸುವ ಶಕ್ತಿ ಕೊಡಗಿನಲ್ಲಿದೆ ಎನ್ನುವ ಧೈರ್ಯವನ್ನೂ ವ್ಯಕ್ತಪಡಿಸುತ್ತಾರೆ. ಅಭ್ಯರ್ಥಿ ಪ್ರತಾಪ್‍ ಸಿಂಹ ಕೂಡ ಈ ಚುನಾವಣೆಯಲ್ಲಿ ಒಂದಷ್ಟು ಹೆಚ್ಚಿನ ಸಮಯವನ್ನು ಕೊಡಗಿಗೆ ಮೀಸಲಿಟ್ಟಿದ್ದಲ್ಲದೆ, ಮತದಾನದ ದಿನವೂ ಮಡಿಕೇರಿಯ ಕೆಲವು ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾರರ ಮನವೊಲಿಸುವ ಪ್ರಯತ್ನ ಮಾಡಿದ್ದರು.

ಬಿಜೆಪಿಯ ಭದ್ರಕೋಟೆಯನ್ನು ಜೆಡಿಎಸ್‍ನೊಂದಿಗಿನ ಮೈತ್ರಿಯ ಮೂಲಕ ಒಡೆದು ವಿಜಯ ಪತಾಕೆ ಹಾರಿಸುವ ಪ್ರಯತ್ನ ಕಾಂಗ್ರೆಸ್‍ನಿಂದಲೂ ನಡೆದಿದೆ. ಇದಕ್ಕೆ ಆರಂಭಿಕ ಹಂತದಲ್ಲಿ ಜೆಡಿಎಸ್‍ನೊಳಗಿನ ಆಂತರಿಕ ಭಿನ್ನಮತ ತೊಡಕಾಗಿ ಕಂಡು ಬಂದಿತ್ತಾದರೂ, ಆ ನಂತರದ ದಿನಗಳಲ್ಲಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆದಿದೆ ಎಂದು ಮುಖಂಡರೂ ಹೇಳಿಕೊಳ್ಳುತ್ತಿದ್ದು, ಇದು ಎಷ್ಟರ ಮಟ್ಟಿಗೆ ಮತವಾಗಿ ಪರಿವರ್ತನೆಯಾಗಿದೆ ಎನ್ನುವುದರ ಮೇಲೆ ವಿಜಯಶಂಕರ್ ಭವಿಷ್ಯ ನಿರ್ಧಾರವಾಗಲಿದೆ.

ಕಳೆದ ಐದು ವರ್ಷಗಳ ಅವಧಿಯಲ್ಲಿ ಸಂಸದ ಪ್ರತಾಪಸಿಂಹ ಅವರ ನಡೆಯ ಬಗ್ಗೆ ಸ್ಥಳೀಯ ಶಾಸಕರಿಂದ ಆಕ್ಷೇಪವೂ ವ್ಯಕ್ತವಾಗಿತ್ತು. ತಮ್ಮ ಪಕ್ಷದ ಕೆಲವು ಮುಖಂಡರೊಂದಿಗೂ ಮನಸ್ತಾಪ ಮಾಡಿಕೊಂಡಿದ್ದರು. ಈ ಎಲ್ಲಾ ಕಾರ್ಮೋಡಗಳು ಒಮ್ಮೆಗೆ ಕರಗಿ ಬಿಜೆಪಿಯ ನಾಗಲೋಟ ಮುಂದುವರಿಯುತ್ತದೆಯೆ ಅಥವಾ ವಿಜಯದ ಹಾದಿಯಲ್ಲಿ ಎಡವಿದೆಯೇ ಎಂಬುವುದನ್ನು ಕಾದು ನೋಡಬೇಕಾಗಿದೆ.

ಈ ಎಲ್ಲಾ ರಾಜಕೀಯ ಬೆಳವಣಿಗೆಗಳ ನಡುವೆ ಪ್ರಸ್ತಾಪಿಸಲ್ಪಟ್ಟಿರುವ ‘ಮೋದಿ ಅಲೆ’ ತಳಮಟ್ಟದಲ್ಲಿ ನಿಜಕ್ಕೂ ಕೆಲಸ ಮಾಡಿದೆಯೇ ಅಥವಾ ಇದೊಂದು ಕೇವಲ ಭ್ರಮೆಯೇ ಎನ್ನುವುದು ಕೂಡ ಮೇ 23 ರಂದು ಸ್ಪಷ್ಟವಾಗಲಿದೆ.

ಕೊಡಗಿನಲ್ಲಿ ಅಧಿಕ ಮತದಾನ
ಕೊಡಗು ಜಿಲ್ಲೆಯಲ್ಲಿ ಅಧಿಕ ಮತದಾನವಾಗಿದ್ದು, ಇದು ಬಿಜೆಪಿಗೆ ಹೆಚ್ಚು ಲಾಭ ತಂದು ಕೊಡಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಶೇ. 69.25 ರಷ್ಟು ಮತದಾನವಾಗಿದ್ದು, ಒಟ್ಟಾರೆ 13,11,930 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 6,64,712 ಮಂದಿ ಪುರುಷರು, 6,47,203 ಮಂದಿ ಮಹಿಳೆಯರಾಗಿದ್ದಾರೆ.

ಇನ್ನು ಮಡಿಕೇರಿಯಲ್ಲಿ 1,69,296 ಮಂದಿ ಮತ ಚಲಾಯಿಸಿದ್ದರೆ, ಇವರಲ್ಲಿ 83,781 ಮಂದಿ ಪುರುಷರು ಹಾಗೂ 85,513 ಮಂದಿ ಮಹಿಳೆಯರಾಗಿದ್ದು, ಇಲ್ಲಿ ಶೇ. 76.55 ರಷ್ಟು ಮತದಾನವಾಗಿ ಮೊದಲ ಸ್ಥಾನದಲ್ಲಿದೆ. ವಿರಾಜಪೇಟೆಯಲ್ಲಿ ಒಟ್ಟು 1,59,227 ಮಂದಿ ಮತದಾನ ಮಾಡಿದ್ದು, ಇವರಲ್ಲಿ 79,753 ಮಂದಿ ಪುರುಷರು ಹಾಗೂ 79,474 ಮಂದಿ ಮಹಿಳೆಯರಾಗಿದ್ದು, ಶೇ 72.52 ರಷ್ಟು ಮತದಾನವಾಗಿದೆ.

ಪಿರಿಯಾಪಟ್ಟಣದಲ್ಲಿ ಒಟ್ಟು 1,44,812 ರಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಿದ್ದು, ಇವರಲ್ಲಿ ಮಂದಿ 74,926 ಪುರುಷರು ಹಾಗೂ 69,886 ಮಹಿಳೆಯರಾಗಿದ್ದು, ಒಟ್ಟು 78.86 ರಷ್ಟು ಮತದಾನವಾಗಿದೆ. ಹುಣಸೂರಿನಲ್ಲಿ ಒಟ್ಟು 1,75,284 ರಷ್ಟು ಮತದಾನವಾಗಿದ್ದು, ಇವರಲ್ಲಿ 90,103 ಮಂದಿ ಪುರುಷರು ಹಾಗೂ 85,181 ಮಂದಿ ಮಹಿಳೆಯರು. ಇಲ್ಲಿ ಒಟ್ಟು 77.24 ರಷ್ಟು ಮತದಾನವಾಗಿದೆ. ಚಾಮುಂಡೇಶ್ವರಿಯಲ್ಲಿ 2,17,026 ರಷ್ಟು ಮತದಾನವಾಗಿದ್ದು, ಇವರಲ್ಲಿ 1,11,178 ಮಂದಿ ಪುರುಷರು ಮತ್ತು 1,05,848 ಮಹಿಳೆಯರು, ಒಟ್ಟು ಶೇ. 71.68 ರಷ್ಟು ಮತದಾನವಾಗಿದೆ.

ಕೃಷ್ಣರಾಜದಲ್ಲಿ 1,46,907 ರಷ್ಟು ಮತದಾನವಾಗಿದ್ದು, ಇವರಲ್ಲಿ 73788 ಮಂದಿ ಪುರುಷರು ಹಾಗೂ 73,119 ಮಹಿಳೆಯರಾಗಿದ್ದಾರೆ. ಒಟ್ಟು ಶೇ. 60.29 ರಷ್ಟು ಮತದಾನವಾಗಿದೆ. ಚಾಮರಾಜದಲ್ಲಿ 1,39,809 ರಷ್ಟು ಮತದಾನವಾಗಿದ್ದು, ಇವರಲ್ಲಿ 71,320 ಮಂದಿ ಪುರುಷರು ಹಾಗೂ 68,488 ಮಂದಿ ಮಹಿಳೆಯರು, ಇಲ್ಲಿ ಒಟ್ಟು ಶೇ.59.93 ರಷ್ಟು ಮತದಾನವಾಗಿದೆ. ಇನ್ನು ನರಸಿಂಹರಾಜದಲ್ಲಿ ಒಟ್ಟು 1,59,569 ರಷ್ಟು ಮತದಾನವಾಗಿದ್ದು, ಇವರಲ್ಲಿ 79,863 ಮಂದಿ ಮಹಿಳೆಯರು ಹಾಗೂ 79,694 ಮಂದಿ ಮಹಿಳೆಯರಾಗಿದ್ದು, ಒಟ್ಟು ಶೇ.60.60 ರಷ್ಟು ಮತದಾನವಾಗಿದೆ.

ಕ್ಷೇತ್ರದಲ್ಲಿ ಒಟ್ಟಾರೆ 18,94,372 ಮಂದಿ ಮತದಾರರಿದ್ದು, ಇವರಲ್ಲಿ 9,44,577 ಮಂದಿ ಪುರುಷರು ಹಾಗೂ 9,49,702 ಮಂದಿ ಮಹಿಳೆಯರಾಗಿದ್ದಾರೆ.

share
ಲಕ್ಷ್ಮೀಶ್
ಲಕ್ಷ್ಮೀಶ್
Next Story
X