Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಜ್ ಯಾತ್ರಿಕರಿಗೆ ನೀಡುವ ಲಸಿಕೆಗಳಿಗಾಗಿ...

ಹಜ್ ಯಾತ್ರಿಕರಿಗೆ ನೀಡುವ ಲಸಿಕೆಗಳಿಗಾಗಿ ಪರದಾಡುತ್ತಿರುವ ಆರೋಗ್ಯ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ21 April 2019 10:33 PM IST
share
ಹಜ್ ಯಾತ್ರಿಕರಿಗೆ ನೀಡುವ ಲಸಿಕೆಗಳಿಗಾಗಿ ಪರದಾಡುತ್ತಿರುವ ಆರೋಗ್ಯ ಸಚಿವಾಲಯ

ಹೊಸದಿಲ್ಲಿ,ಎ.21: ಹಜ್ ಯಾತ್ರಿಗಳಿಗಾಗಿ ಅಗತ್ಯವಾಗಿರುವ ಮೆನಿಂಜೈಟಿಸ್(ಮಿದುಳ್ಪೊರೆಯೂತ) ಲಸಿಕೆಗಳ ಕೊರತೆಯಿಂದಾಗಿ ಆರೋಗ್ಯ ಸಚಿವಾಲಯವು ಪರದಾಡುತ್ತಿದೆ. ಈ ಲಸಿಕೆಗಳನ್ನು ತಯಾರಿಸುತ್ತಿದ್ದ ದೇಶದ ಏಕೈಕ ಕಂಪನಿ ಗಾಝಿಯಾಬಾದ್‌ನ  ಬಯೊಮೆಡ್ ಪ್ರೈ.ಲಿ.ನ ಪೋಲಿಯೊ ಲಸಿಕೆಗಳು ಟೈಪ್-2 ಪೋಲಿಯೋ ವೈರಸ್‌ನಿಂದ  ಕಲುಷಿತಗೊಂಡಿದ್ದು, ಬೆಳಕಿಗೆ ಬಂದ ಬಳಿಕ ಸರಕಾರದ ಆದೇಶದಂತೆ ಎಲ್ಲ ಮಾನವ ಲಸಿಕೆಗಳ ಉತ್ಪಾದನೆಯನ್ನು ಸಂಸ್ಥೆಯು ಕಳೆದ ವರ್ಷದಿಂದ ಸ್ಥಗಿತಗೊಳಿಸಿರುವುದು ಈ ಸ್ಥಿತಿಗೆ ಕಾರಣವಾಗಿದೆ.

ಈ ವರ್ಷದ ಜುಲೈನಲ್ಲಿ ಸುಮಾರು 1.27 ಲಕ್ಷ ಮುಸ್ಲಿಮರು ವಾರ್ಷಿಕ ಹಜ್ ಯಾತ್ರೆಯನ್ನು ಕೈಗೊಳ್ಳುವ ನಿರೀಕ್ಷೆಯಿದ್ದು,ಸಚಿವಾಲಯವು ಕನಿಷ್ಠ 1.47 ಲ.ಡೋಸ್‌ಗಳನ್ನು ವ್ಯವಸ್ಥೆ ಮಾಡಬೇಕಾಗುತ್ತದೆ. ರಾಜ್ಯಗಳಿಗೆ ಸಾಗಾಟದ ವೇಳೆ ಕೆಲವು ಲಸಿಕೆಗಳು ಕ್ಷಮತೆಯನ್ನು ಕಳೆದುಕೊಳ್ಳ್ಳುವುದರಿಂದ ಹೆಚ್ಚುವರಿ ಲಸಿಕೆಗಳನ್ನು ಮೀಸಲಿಡಬೇಕಾಗುತ್ತದೆ.

ಗಾಝಿಯಾಬಾದ್ ಕಂಪನಿಯನ್ನು ನಿಷೇಧಿಸಿರುವ ಹಿನ್ನೆಲೆಯಲ್ಲಿ ಲಸಿಕೆಗಳಿಗಾಗಿ ಪರ್ಯಾಯ ವ್ಯವಸ್ಥೆಗಳತ್ತ ಸಚಿವಾಲಯವು ದೃಷ್ಟಿ ಹಾಯಿಸಿದೆ. ಈ ಲಸಿಕೆಯನ್ನು ಆಮದು ಮಾಡಿಕೊಳ್ಳುತ್ತ್ತಿರುವ ಮುಂಬೈನ ಸನೋಫಿ ಪಾಶ್ಚರ್ ಇಂಡಿಯಾ ಮತ್ತು ಜಿಎಸ್‌ಕೆ ಫಾರ್ಮಾಸ್ಯೂಟಿಕಲ್ಸ್ ಜೊತೆ ಈಗಾಗಲೇ ಅದು ಮಾತುಕತೆಗಳನ್ನು ನಡೆಸುತ್ತಿದೆ.

ಹಜ್ ಮತ್ತು ಉಮ್ರಾ ಯಾತ್ರೆಗಳಿಗಾಗಿ ಸೌದಿ ಅರೇಬಿಯಾಕ್ಕೆ ಹೋಗುವವರು ತಾವು ಹಿಂದಿನ ಮೂರು ವರ್ಷಗಳ ಒಳಗೆ ಅಥವಾ ಸೌದಿಯನ್ನು ಪ್ರವೇಶಿಸುವ ಕನಿಷ್ಠ 10 ದಿನಗಳಿಗೆ ಮೊದಲು ಮೆನಿಂಜೈಟಿಸ್ ಲಸಿಕೆಗಳನ್ನು ತೆಗೆದುಕೊಂಡಿರುವ ಬಗ್ಗೆ ಪ್ರಮಾಣಪತ್ರಗಳನ್ನು ಸಲ್ಲಿಸಬೇಕಾಗುತ್ತದೆ.

ಈ ಮೊದಲು ಬಯೊಮೆಡ್ ಸರಕಾರಕ್ಕೆ ಪ್ರತಿ ಲಸಿಕೆಗೆ 250 ರೂ.ದರದಲ್ಲಿ ಲಸಿಕೆಗಳನ್ನು ಒದಗಿಸುತ್ತಿತ್ತು. ಈಗ ಸರಕಾರವು ಲಸಿಕೆಗಳನ್ನು ಆಮದು ಮಾಡಿಕೊಳ್ಳುತ್ತಿರುವ ಕಂಪನಿಗಳಿಂದ ಖರೀದಿಸಲು ಪ್ರತಿ ಡೋಸ್‌ಗೆ ಸುಮಾರು 1

,500 ರೂ.ಗಳನ್ನು ಕಕ್ಕಬೇಕಾಗುತ್ತದೆ ಎಂದು ಆರೋಗ್ಯ ಸಚಿವಾಲಯದಲ್ಲಿನ ಮೂಲಗಳು ತಿಳಿಸಿದವು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X