Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿಶಿಷ್ಟ ಪರಿಕಲ್ಪನೆಯೊಂದಿಗೆ ಅಮೇಠಿ,...

ವಿಶಿಷ್ಟ ಪರಿಕಲ್ಪನೆಯೊಂದಿಗೆ ಅಮೇಠಿ, ವಾರಣಾಸಿಯಲ್ಲಿ ಪುತ್ತೂರಿನ ಪತ್ರಿಕಾ ಸಂಪಾದಕರ ಸ್ಪರ್ಧೆ

'ಡೆಲ್ಲಿಯಿಂದ ಹಳ್ಳಿಗೆ ಆಡಳಿತ ಅಲ್ಲ, ಹಳ್ಳಿಯಿಂದ ಡೆಲ್ಲಿಗೆ ಆಡಳಿತ ಆಗಬೇಕು'

ವಾರ್ತಾಭಾರತಿವಾರ್ತಾಭಾರತಿ21 April 2019 11:09 PM IST
share
ವಿಶಿಷ್ಟ ಪರಿಕಲ್ಪನೆಯೊಂದಿಗೆ ಅಮೇಠಿ, ವಾರಣಾಸಿಯಲ್ಲಿ ಪುತ್ತೂರಿನ ಪತ್ರಿಕಾ ಸಂಪಾದಕರ ಸ್ಪರ್ಧೆ

ಪುತ್ತೂರು: ಡೆಲ್ಲಿಯಿಂದ ಹಳ್ಳಿಗೆ ಆಡಳಿತ ಅಲ್ಲ, ಹಳ್ಳಿಯಿಂದ ಡೆಲ್ಲಿಗೆ ಆಡಳಿತ ಆಗಬೇಕು' ಎಂಬ ವಿಶಿಷ್ಟ ಪರಿಕಲ್ಪನೆಯೊಂದಿಗೆ ಪುತ್ತೂರಿನ ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕ ಡಾ.ಯು.ಪಿ. ಶಿವಾನಂದ ಅವರು ಪ್ರಧಾನಿ ಅಭ್ಯರ್ಥಿಗಳೆಂದು ಬಿಂಬಿಸಲಾಗಿರುವ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಿದ್ದರಾಗಿದ್ದಾರೆ.

ಬಲಾತ್ಕಾರದ ಬಂದ್, ಭ್ರಷ್ಟಾಚಾರ, ನೇತ್ರಾವತಿ ನದಿ ತಿರುವು ಯೋಜನೆ ಮತ್ತು ಸಾಮಾಜಿಕ ಜಾಲತಾಣಗಳ ದುರುಪಯೋಗದ ವಿಷಯ ಮತ್ತು ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕಲ್ಪನೆಯ `ಡೆಲ್ಲಿಯಿಂದ ಹಳ್ಳಿಗೆ ಆಡಳಿತ ಅಲ್ಲ, ಹಳ್ಳೆಯಿಂದ ಡೆಲ್ಲಿಗೆ ಆಡಳಿತ ಆಗಬೇಕು' ಎಂಬ ವಿಚಾರವನ್ನು ರಾಷ್ಟ್ರದ ಪ್ರಮುಖ ನಾಯಕರಾದ ನರೇಂದ್ರ ಮೋದಿ ಮತ್ತು ರಾಹುಲ್ ಗಾಂಧಿಯವರಿಗೆ ಮನವರಿಕೆ ಮಾಡುವುದಕ್ಕಾಗಿ ಮತ್ತ ರಾಷ್ಟ್ರ ಮಟ್ಟದಿಂದಲೇ ಈ ವಿಚಾರಗಳು ಅನುಷ್ಠಾನಗೊಳ್ಳಬೇಕೆಂಬ ಕಾರಣಕ್ಕಾಗಿ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಸ್ಪರ್ಧಿಸುವ ಅಮೇಠಿ ಮತ್ತು ನರೇಂದ್ರ ಮೋದಿ ಸ್ಪರ್ಧಿಸುವ ವಾರಣಾಸಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಡಾ.ಯು.ಪಿ. ಶಿವಾನಂದರವರು ಅಮೇಥಿಯಿಂದ ದೆಹಲಿಗೆ ತೆರಳಿದ್ದಾರೆ.

ತನ್ನ ವಿಚಾರಧಾರೆಗಳನ್ನು ರಾಷ್ಟ್ರದ ರಾಜಧಾನಿಯಾದ ದೆಹಲಿಗೂ ತಲುಪಿಸಬೇಕು ಎಂಬ ಕಾರಣಕ್ಕಾಗಿ ಈಗಾಗಲೇ ಶಿವಾನಂದರವರು ದೆಹಲಿಯಲ್ಲಿ ಸಮಾಲೋಚನೆ ನಡೆಸಿದ್ದಾರೆ. 

ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಕೆ ಅಂಗೀಕಾರ: 

ಉತ್ತರಪ್ರದೇಶದ ಅಮೇಠಿ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಡಾ.ಯು.ಪಿ. ಶಿವಾನಂದರವರು ಎಪ್ರಿಲ್ 18ರಂದು ನಾಮಪತ್ರ ಸಲ್ಲಿಸಿದ್ದಾರೆ. ಎ.20ರಂದು ನಾಮಪತ್ರ ಪರಿಶೀಲನೆ ನಡೆದಿದ್ದು, ಅಂಗೀಕಾರಗೊಂಡಿದೆ. 

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಸ್ಪರ್ಧಿಸುತ್ತಿರುವ ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿದಿರುವ ಡಾ.ಯು.ಪಿ. ಶಿವಾನಂದರವರು ಎ.18ರಂದು ಅಮೇಥಿಯ ಗೌರಿಗಂಜ್‍ನಲ್ಲಿರುವ ಚುನಾವಣಾಧಿಕಾರಿ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.

ಅಮೇಠಿ ಲೋಕಸಭಾ ಕ್ಷೇತ್ರದ 10 ಮಂದಿ ಮತದಾರರು ಇವರಿಗೆ ಸೂಚಕರಾಗಿದ್ದರು. ಎ. 20ರಂದು ನಾಮಪತ್ರ ಪರೀಶಿಲನೆ ನಡೆದಿದ್ದು ಯು.ಪಿ. ಶಿವಾನಂದರವರ ನಾಮಪತ್ರ ಸ್ವೀಕೃತಗೊಂಡಿದೆ. ಅಮೇಠಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರದ ಸಚಿವೆ ಸ್ಮೃತಿ ಇರಾನಿ ಸ್ಪರ್ಧಿಸುತ್ತಿದ್ದಾರೆ.

ವಾರಣಾಸಿಯಲ್ಲೂ ಯು.ಪಿ. ಶಿವಾನಂದರಿಂದ ಸ್ಪರ್ಧೆ: 

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಪರ್ಧಿಸುವ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿಯೂ ಡಾ.ಯು.ಪಿ. ಶಿವಾನಂದರವರು ಸ್ಪರ್ಧಿಸ ಲಿದ್ದು ನಾಮಪತ್ರ ಸಲ್ಲಿಕೆಗೆ ಸಿದ್ಧತೆ ನಡೆಸಿದ್ದಾರೆ. ವಾರಣಾಸಿ ಕ್ಷೇತ್ರದಲ್ಲಿ ಮೋದಿಯವರಿಗೆ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ಸಹೋದರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

1985ರಲ್ಲಿ ವಿಧಾನಸಭೆ, 2009ರಲ್ಲಿ ಲೋಕಸಭೆಯಲ್ಲಿ ಸ್ಪರ್ಧೆ:

ಸುಳ್ಯದಲ್ಲಿ ಬಳಕೆದಾರರ ವೇದಿಕೆಯನ್ನು ಸ್ಥಾಪಿಸಿ ಆ ಮೂಲಕ ಸಾಮಾಜಿಕ ಕಾರ್ಯಗಳನ್ನು ನಡೆಸಿಕೊಂಡು ಬಂದ ಡಾ. ಯು.ಪಿ. ಶಿವಾನಂದ ಅವರು ಅಲ್ಲಿ ಭ್ರಷ್ಟಾಚಾರದ ವಿರುದ್ಧ ಮಾಡಿದ ಜನಜಾಗೃತಿಗಾಗಿ ಕೆಲಸ ಮಾಡಿದ್ದರು. ಅದೇ ವಿಚಾರವನ್ನು ಮುಂದಿಟ್ಟು 1985ರಲ್ಲಿ ಅಂದಿನ ರಾಜ್ಯದ ಸಂಭಾವ್ಯ ಮುಖ್ಯಮಂತ್ರಿಗಳಾಗಿದ್ದ ವೀರಪ್ಪ ಮೊಯ್ಲಿ, ಎಸ್. ಬಂಗಾರಪ್ಪ ಮತ್ತು ರಾಮಕೃಷ್ಣ ಹೆಗಡೆ ಅವರ ಕ್ಷೇತ್ರದಲ್ಲಿ ಹಾಗೂ ಪುತ್ತೂರಿನಲ್ಲಿ ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಭ್ರಷ್ಟಾಚಾರದ ಪರಾಕಾಷ್ಟೆಯಲ್ಲಿ ಮುಖ್ಯಮಂತ್ರಿ ಗಳಾದವರಿಗೆ ಮನವರಿಕೆ ಮಾಡುವುದು ಆಗಿನ ಅವರ ಚುನಾವಣಾ ಸ್ಪರ್ಧೆಯ ಉದ್ದೇಶವಾಗಿತ್ತು. 2009ರಲ್ಲಿ ದ.ಕ.ಜಿಲ್ಲೆಯಿಂದ ಲೋಕಸಭೆಗೆ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಆ ಸಂದರ್ಭದಲ್ಲಿಯೂ ಭ್ರಷ್ಟಾಚಾರ, ಬಲತ್ಕಾರದ ಬಂದ್ ಮತ್ತು ಸಾಮಾಜಿಕ ಸಾಮರಸ್ಯದ ಉದ್ದೇಶವನ್ನು ಇಟ್ಟುಕೊಂಡು ಪಕ್ಷೇತರರಾಗಿ ಸ್ಪರ್ಧೆ ನಡೆಸಿದ್ದರು. ಇದೀಗ ಸಂಭಾವ್ಯ ಪ್ರಧಾನ ಮಂತ್ರಿಗಳ ವಿರುದ್ಧ ಸ್ಪರ್ಧಿಸಿ ತನ್ನ ಮನದಿಂಗಿತವನ್ನು ಅವರ ಮುಂದೆ ತೆರೆದಿಡಲು ಮುಂದಾಗಿರುವುದಾಗಿ ತಿಳಿಸಿದ್ದಾರೆ.

ಜನಪರ ಹೋರಾಟಗಾರರಾದ ಸಂಪಾದಕ ಯು.ಪಿ. ಶಿವಾನಂದ 

ಡಾ. ಯು.ಪಿ. ಶಿವಾನಂದರು ವೈದ್ಯರಾಗಿ ರೋಗಗಳಿಗೆ ಔಷಧಿ ನೀಡುವ ಕೆಲಸದಿಂದಲೂ ಸಾಮಾಜಿಕ ಪಿಡುಗುಗಳಿಗೆ ಔಷಧಿ ಮಾಡುವ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ಸುಳ್ಯದಲ್ಲಿ ಬಳಕೆದಾರರ ವೇದಿಕೆಯ ಮೂಲಕ ಹೋರಾಟದ ಬದುಕು ಆರಂಭಿಸಿದ್ದ ಅವರು ಬಳಿಕ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿಯಲ್ಲಿ `ಸುದ್ದಿ ಬಿಡುಗಡೆ' ಎಂಬ ಸ್ಥಳೀಯ ಪತ್ರಿಕೆಯನ್ನು ನಡೆಸಿಕೊಂಡು ಬಂದಿದ್ದಾರೆ.

ಈ ಪತ್ರಿಕೆಗಳನ್ನು ಜನರ ಧ್ವನಿಯಾಗಿ, ಜನರ ಸಮಸ್ಯೆಗಳನ್ನು ಪರಿಹರಿಸುವ ಮತ್ತು ಆಶೋತ್ತರಗಳನ್ನು ಈಡೇರಿಸುವ ಒಂದು ಪ್ರತಿಭಟನಾ ಅಸ್ತ್ರವಾಗಿಯೇ ಬೆಳೆಸಿಕೊಂಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X