Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಚೆನ್ನೈ ಎದುರು ಆರ್‌ಸಿಬಿಗೆ ರೋಚಕ ಜಯ

ಚೆನ್ನೈ ಎದುರು ಆರ್‌ಸಿಬಿಗೆ ರೋಚಕ ಜಯ

ಸ್ಟೇಯ್ನ, ಉಮೇಶ್‌ಗೆ ತಲಾ 2 ವಿಕೆಟ್

ವಾರ್ತಾಭಾರತಿವಾರ್ತಾಭಾರತಿ22 April 2019 12:21 AM IST
share
ಚೆನ್ನೈ ಎದುರು ಆರ್‌ಸಿಬಿಗೆ ರೋಚಕ ಜಯ

ಬೆಂಗಳೂರು, ಎ.21: ಇಲ್ಲಿಯ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರವಿವಾರ ನಡೆದ 39ನೇ ಐಪಿಎಲ್ ಪಂದ್ಯದಲ್ಲಿ ಆತಿಥೇಯ ಆರ್‌ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್‌ನ್ನು 1 ರನ್‌ನಿಂದ ಮಣಿಸಿದೆ. 162 ರನ್ ಗುರಿ ಬೆನ್ನಟ್ಟಿದ್ದ ಚೆನ್ನೈ ತಂಡ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 160 ರನ್ ಗಳಿಸಲಷ್ಟೇ ಶಕ್ತವಾಯಿತು

ಚೆನ್ನೈ ಪರ ಶೇನ್ ವಾಟ್ಸನ್ (5), ಎಫ್ ಡು ಫ್ಲೆಸಿಸ್ (5) ಹಾಗೂ ಸುರೇಶ್ ರೈನಾ (0) ಭಾರೀ ವೈಫಲ್ಯ ಅನುಭವಿಸಿದರು. ತಂಡದ ಮೊತ್ತ 17 ರನ್ ಆಗುವಷ್ಟರಲ್ಲಿ 3 ವಿಕೆಟ್ ಪತನಗೊಂಡವು. ಆ ಬಳಿಕ ಕೇದಾರ್ ಜಾಧವ್ (9, 9 ಎಸೆತ, 2 ಬೌಂಡರಿ) ಕೂಡ ಶೀಘ್ರ ವಿಕೆಟ್ ಒಪ್ಪಿಸಿದಾಗ ತಂಡದ ಸ್ಥಿತಿ ಚಿಂತಾಜನಕವಾಗಿತ್ತು. ಅಂಬಟಿ ರಾಯುಡು (29, 29 ಎಸೆತ, 2 ಬೌಂಡರಿ, 1 ಸಿಕ್ಸರ್ )ಹಾಗೂ ನಾಯಕ ಎಂ.ಎಸ್.ಧೋನಿ (ಅಜೇಯ 84, 48 ಎಸೆತ, 5 ಬೌಂಡರಿ, 7 ಸಿಕ್ಸರ್) 5ನೇ ವಿಕೆಟ್ ಜೊತೆಯಾಟದಲ್ಲಿ 55 ರನ್ ಸೇರಿಸಿ ಆಸರೆಯಾದರು. ಜಡೇಜ 11 ರನ್ ಗಳಿಸಿದರು. ಬ್ರಾವೊ (5) ವಿಫಲರಾದರು. ಆರ್‌ಸಿಬಿ ಪರ ಸ್ಟೇಯ್ನಾ ಹಾಗೂ ಉಮೇಶ್ ಯಾದವ್ ತಲಾ 2 ವಿಕೆಟ್ ಪಡೆದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ನಡೆಸಿದ ಬೆಂಗಳೂರು ತಂಡ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತ್ತು. ತಂಡದ ಪರ ಬ್ಯಾಟಿಂಗ್ ಆರಂಭಿಸಿದ ಪಾರ್ಥಿವ್ ಪಟೇಲ್ (53, 37 ಎಸೆತ, 2 ಬೌಂಡರಿ, 4 ಸಿಕ್ಸರ್ ) ಹಾಗೂ ನಾಯಕ ವಿರಾಟ್ ಕೊಹ್ಲಿ (9) 11 ರನ್ ಆಗುವಷ್ಟರಲ್ಲಿ ಬೇರ್ಪಟ್ಟರು. ದೀಪಕ್ ಚಹಾರ್ ಅವರು ವಿರಾಟ್‌ಗೆ ಪೆವಿಲಿಯನ್ ಹಾದಿ ತೋರಿಸಿದರು. ಪಾರ್ಥಿವ್ ಹಾಗೂ ಎಬಿ ಡಿವಿಲಿಯರ್ಸ್ (25, 19 ಎಸೆತ, 3 ಬೌಂಡರಿ, 1 ಸಿಕ್ಸರ್) ಎರಡನೇ ವಿಕೆಟ್ ಜೊತೆಯಾಟದಲ್ಲಿ 47 ರನ್ ಸೇರಿಸಿ ತಂಡಕ್ಕೆ ಚೇತರಿಕೆ ನೀಡಿದರು. ವಿಲಿಯರ್ಸ್‌ರನ್ನು ಜಡೇಜಾ ಔಟ್ ಮಾಡಿದರು. ಆ ಬಳಿಕ ಆಕಾಶದೀಪ ನಾಥ್ (24, 20 ಎಸೆತ, 1 ಬೌಂಡರಿ, 1 ಸಿಕ್ಸರ್) ಒಂದಷ್ಟು ಹೊತ್ತು ಚೆನ್ನೈ ಬೌಲರ್‌ಗಳಿಗೆ ಸವಾಲಾದರು. ಮಾರ್ಕಸ್ ಸ್ಟೋನಿಸ್ (14, 13 ಎಸೆತ, 1 ಸಿಕ್ಸರ್) ಹಾಗೂ ಮೊಯಿನ್ ಅಲಿ (26, 16 ಎಸೆತ, 5 ಬೌಂಡರಿ ) ಆರ್‌ಸಿಬಿ ಉತ್ತಮ ಮೊತ್ತ ಜಮೆ ಮಾಡಲು ನೆರವಾದರು.

ಚೆನ್ನೈ ಬೌಲರ್‌ಗಳಾದ ಚಹಾರ್ (25ಕ್ಕೆ 2), ಜಡೇಜಾ (29ಕ್ಕೆ 2) ಹಾಗೂ ಡ್ವೇನ್ ಬ್ರಾವೊ (34ಕ್ಕೆ 2) ತಲಾ 2 ವಿಕೆಟ್ ಪಡೆದು ಉತ್ತಮ ಬೌಲರ್ ಎನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X