Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಿಕ್ಕಮಗಳೂರು ನಗರಕ್ಕೆ ಕಲುಷಿತ ನೀರು...

ಚಿಕ್ಕಮಗಳೂರು ನಗರಕ್ಕೆ ಕಲುಷಿತ ನೀರು ಪೂರೈಕೆ: ನಾಗರಿಕ ಹಕ್ಕು ಹೋರಾಟ ವೇದಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ22 April 2019 11:01 PM IST
share
ಚಿಕ್ಕಮಗಳೂರು ನಗರಕ್ಕೆ ಕಲುಷಿತ ನೀರು ಪೂರೈಕೆ: ನಾಗರಿಕ ಹಕ್ಕು ಹೋರಾಟ ವೇದಿಕೆ ಆರೋಪ

ಚಿಕ್ಕಮಗಳೂರು, ಎ.22: ನಗರಕ್ಕೆ ಸರಬರಾಜಾಗುತ್ತಿರುವ ಕುಡಿಯುವ ನೀರನ್ನು ಶುದ್ಧೀಕರಿಸದೆ ಎಲ್ಲಾ ಬಡಾವಣೆಗಳಿಗೂ ಪೂರೈಸುತ್ತಿರುವುದರಿಂದ ನಾಗರಿಕರು ವಿವಿಧ ರೋಗ ರುಜಿನಗಳಿಗೆ ತುತ್ತಾಗುತ್ತಿದ್ದಾರೆ. ನಗರಸಭೆಯು ನಗರದ ಜನರಿಗೆ ಕಲುಷಿತ ನೀರನ್ನು ಪೂರೈಕೆ ಮಾಡುತ್ತಿದ್ದು, ನಗರಕ್ಕೆ ಶುದ್ಧೀಕರಿಸಿದ ನೀರನ್ನು ಪೂರೈಸಲು ಒತ್ತಾಯಿಸಿ ಎ.24ರಂದು ನಾಗರಿಕ ಹಕ್ಕು ಹೋರಾಟ ವೇದಿಕೆ ವತಿಯಿಂದ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಸಂಚಾಲಕ ವಿಜಯ್‌ಕುಮಾರ್ ತಿಳಿಸಿದ್ದಾರೆ.

ಸೋಮವಾರ ನಗರ ದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು ನಗರದ ಜನತೆ ಕುಡಿಯುವ ನೀರಿಗಾಗಿ ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆಯ ನೀರನ್ನು ಅವಲಂಬಿಸಿದ್ದಾರೆ. ನಗರಸಭೆಯು ನಗರದ ಎಲ್ಲಾ ಬಡಾವಣೆಗಳಿಗೂ ಯಗಚಿ ಹಾಗೂ ಹಿರೇಕೊಳಲೆ ಕೆರೆ ನೀರನ್ನೇ ಸರಬರಾಜು ಮಾಡುತ್ತಿದೆ. ನಗರದಲ್ಲಿ ಶುದ್ಧೀಕರಣ ಘಟಕವಿದ್ದರೂ ನಗರಸಭೆಯು ಈ ನೀರನ್ನು ಘಟಕದಲ್ಲಿ ವೈಜ್ಞಾನಿಕವಾಗಿ, ವ್ಯವಸ್ಥಿತ ರೀತಿಯಲ್ಲಿ ಶುದ್ಧೀಕರಣ ಮಾಡದೆ ನೀರು ಪೂರೈಸುತ್ತಿರುವುದರಿಂದ ನಗರದ ವಿವಿಧ ಬಡಾವಣೆಗಳಿಗೆ ಕಲುಷಿತ ನೀರು ಪೂರೈಕೆಯಾಗುತ್ತಿದೆ ಎಂದು ಆರೋಪಿಸಿದರು.

ಕಲುಷಿತ ನೀರು ಪೂರೈಸುತ್ತಾ ನಗರದ ಜನರ ಆರೋಗ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನಗರಸಭೆ ವಿರುದ್ಧ ಎ.24ರಂದು ಬೆಳಗ್ಗೆ 11ಕ್ಕೆ ಧರಣಿ ಹಮ್ಮಿಕೊಳ್ಳಲಾಗಿದೆ. ನಗರದ ರಾಮನಹಳ್ಳಿಯಲ್ಲಿರುವ ಫಿಲ್ಟರ್‌ಬೆಡ್ ಘಟಕದ ಆವರಣದಲ್ಲೇ ಧರಣಿಗೆ ಚಾಲನೆ ನೀಡಲಾಗುವುದು ಎಂದ ವಿಜಯ್‌ಕುಮಾರ್, ಧರಣಿ ವೇಳೆ ನಗರಕ್ಕೆ ಶುದ್ಧೀಕರಿಸಿದ ನೀರು ಪೂರೈಕೆ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳನ್ನು ಒತ್ತಾಯಿಸಲಾಗುವುದು. ಅಧಿಕಾರಿಗಳು ಧರಣಿ ಸ್ಥಳಕ್ಕೆ ಆಗಮಿಸಿ ಸೂಕ್ತ ಭರವಸೆ ನೀಡುವವರೆಗೂ ಧರಣಿ ಹಿಂಪಡೆಯುವುದಿಲ್ಲ ಎಂದು ಅವರು ತಿಳಿಸಿದರು.

ನಗರಸಭೆಯು ಸದ್ಯ ನಿವಾಸಿಗಳಿಗೆ ಪೂರೈಕೆ ಮಾಡುತ್ತಿರುವ ನೀರು ಕಂದು ಬಣ್ಣದಿಂದ ಕೂಡಿದ್ದು, ಮನೆಗಳಲ್ಲಿ ಸಂಗ್ರಹಿಸಿದ ನೀರು ದುರ್ವಾಸನೆಯಿಂದ ಕೂಡಿದೆ. ಕಸ, ಕಡ್ಡಿಗಳು ನೀರಿನೊಂದಿಗೆ ಮಿಶ್ರಣವಾಗಿ ಬರುತ್ತಿದೆ. ನಗರದಲ್ಲಿ ಯುಜಿಡಿ ಅಪೂರ್ಣ ಕಾಮಗಾರಿಯಿಂದಾಗಿ ಕೊಳಚೆ ನೀರು ಚರಂಡಿಗಳಲ್ಲಿ ಹರಿದು ಯಗಚಿ ಹಳ್ಳದ ಮೂಲಕ ಯಗಚಿ ಡ್ಯಾಂ ಹಾಗೂ ಹಿರೇಕೊಳಲೆ ಕೆರೆ ಸೇರುತ್ತಿದೆ. ಅದೇ ನೀರನ್ನು ನಗರಸಭೆ ಆಡಳಿತ ಚಿಕ್ಕಮಗಳೂರಿನಲ್ಲಿರುವ ಪಿಲ್ಟರ್ ಬೆಡ್‌ನಲ್ಲಿ ಸಂಗ್ರಹಿಸುತ್ತಿದೆ. ಹೀಗೆ ಸಂಗ್ರಹಿಸದ ನೀರನ್ನು ಶುದ್ಧೀಕರಿಸದೆ ಸರಬರಾಜು ಮಾಡುತ್ತಿರುವುದರಿಂದ ನಗರದ ಜನತೆ ಕೊಳಚೆ ನೀರನ್ನು ಕುಡಿದು ಡೆಂಗ್‌ನಂತಹ ಮಾರಕ ರೋಗಗಳಿಗೆ ನಾಗರಿಕರು, ಮಕ್ಕಳು ಬಲಿಯಾಗುತ್ತಿದ್ದಾರೆ ಎಂದು ಹೇಳಿದರು.

ನಗರದಲ್ಲಿರುವ ಪಿಲ್ಟರ್ ಬೆಡ್‌ಅನ್ನು ನಗರಸಭೆ ಕಳೆದ ಅನೇಕ ವರ್ಷಗಳಿಂದ ಸ್ವಚ್ಛ ಮಾಡಿಲ್ಲ. ಆದ್ದರಿಂದ ನಗರದ ಜನರ ಉತ್ತಮ ಆರೋಗ್ಯದ ದೃಷ್ಟಿಯಿಂದ ಶುದ್ಧೀಕರಿಸಿದ ನೀರನ್ನೇ ಸಾರ್ವಜನಿಕರಿಗೆ ಪೂರೈಕೆ ಮಾಡಬೇಕೆಂದು ವಿಜಯ್‌ಕುಮಾರ್ ಒತ್ತಾಯಿಸಿದರು.

ವೇದಿಕೆಯ ಮತ್ತೋರ್ವ ಸಂಚಾಲಕ ಡಾ.ದೊಡ್ಡಮಲ್ಲೇಗೌಡ ಹಾಗೂ ನಿವೃತ್ತ ತಾಲೂಕು ಆರೋಗ್ಯಾಧಿಕಾರಿ ಮಾತನಾಡಿ, ನಗರದ ಸಾರ್ವಜನಿಕರ ಉತ್ತಮ ಆರೋಗ್ಯದ ದೃಷ್ಟಿಯಿಂದ ಈ ಹೋರಾಟ ರೂಪಿಸಲಾಗುತ್ತಿದೆ. ಈ ಹೋರಾಟ ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯ ವಿರುದ್ಧವಲ್ಲ. ಅಶುದ್ಧ ನೀರು ವಿವಿಧ ಕಾಯಿಲೆಗಳ ಮೂಲವಾಗಿದೆ. ನಗರದಲ್ಲಿ ಶುದ್ಧೀಕರಿಸದ ನೀರು ಪೂರೈಕೆ ಮಾಡುತ್ತಿರುವುದರಿಂದ ಶುದ್ಧ ನೀರಿಗಾಗಿ ಎಲ್ಲಾ ನಾಗರಿಕರು ಧ್ವನಿ ಎತ್ತಬೇಕಿದೆ. ಜಿಲ್ಲಾಡಳಿತ, ನಗರಸಭೆ ಹಾಗೂ ಜನಪ್ರತಿನಿಧಿಗಳು ಶುದ್ಧ ನೀರಿನ ಪೂರೈಕೆಗೆ ಶೀಘ್ರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ನಾಗರಿಕರ ಹಕ್ಕು ಹೋರಾಟ ಸಮಿತಿಯ ಇತರ ಸಂಚಾಲಕರಾದ ಚಂದ್ರೇಗೌಡ, ಬಶೀರ್ ಅಹ್ಮದ್, ಪ್ರೇಮ್‌ಕುಮಾರ್, ಮಹೇಶ್, ಕಲೀಲ್, ನಾಗರಾಜು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X