Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೆಹರು, ಇಂದಿರಾ ಗಾಂಧಿಯ ದೂರದೃಷ್ಟಿಯಿಂದ...

ನೆಹರು, ಇಂದಿರಾ ಗಾಂಧಿಯ ದೂರದೃಷ್ಟಿಯಿಂದ ಸ್ಫೂರ್ತಿ ಪಡೆಯಿರಿ: ಮೋದಿಗೆ ಶಿವಸೇನೆ ಸಲಹೆ

“ಜೆಟ್ ಏರ್‌ವೇಸ್‌ ಉಳಿಸಲು ಕಾಂಗ್ರೆಸ್ ನಾಯಕರನ್ನು ಅನುಸರಿಸಿ”

ವಾರ್ತಾಭಾರತಿವಾರ್ತಾಭಾರತಿ22 April 2019 11:06 PM IST
share
ನೆಹರು, ಇಂದಿರಾ ಗಾಂಧಿಯ ದೂರದೃಷ್ಟಿಯಿಂದ ಸ್ಫೂರ್ತಿ ಪಡೆಯಿರಿ: ಮೋದಿಗೆ ಶಿವಸೇನೆ ಸಲಹೆ

ಮುಂಬೈ,ಎ.22: ತಾತ್ಕಾಲಿಕವಾಗಿ ಸ್ಥಗಿತಗೊಂಡಿರುವ ಜೆಟ್ ಏರ್‌ವೇಸ್‌ನ್ನು ವಹಿಸಿಕೊಳ್ಳುವಂತೆ ಮತ್ತು ಅದರ ಸಿಬ್ಬಂದಿಗಳನ್ನು ಉದ್ಯೋಗ ನಷ್ಟದಿಂದ ರಕ್ಷಿಸುವಂತೆ ಶಿವಸೇನೆಯು ಸೋಮವಾರ ಕೇಂದ್ರ ಸರಕಾರವನ್ನು ಆಗ್ರಹಿಸಿದೆ.

ವಿಮೆ ಮತ್ತು ವಿಮಾನಯಾನ ಸಂಸ್ಥೆಗಳನ್ನು ರಾಷ್ಟ್ರೀಕರಿಸುವ ಮೂಲಕ ಮಾಜಿ ಪ್ರಧಾನಿಗಳಾದ ಜವಾಹರಲಾಲ ನೆಹರು ಮತ್ತು ಇಂದಿರಾ ಗಾಂಧಿ ಅವರು ಪ್ರದರ್ಶಿಸಿದ್ದ ದೂರದೃಷ್ಟಿಯಿಂದ ಸ್ಫೂರ್ತಿ ಪಡೆಯುವಂತೆ ಅದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸೂಚಿಸಿದೆ.

ತನ್ನ ಮುಖವಾಣಿ ‘ಸಾಮನಾ’ದ ಸಂಪಾದಕೀಯದಲ್ಲಿ ಜೆಟ್ ಏರ್‌ವೇಸ್‌ನ ತಾತ್ಕಾಲಿಕ ಮುಚ್ಚುಗಡೆಯ ಪರಿಣಾಮಗಳ ಕುರಿತು ಮಾತನಾಡಿರುವ ಶಿವಸೇನೆಯು,ನಿರುದ್ಯೋಗಿಗಳಾಗಿರುವವರ ಶಾಪವು ‘ಸಾಧ್ವಿ’ಯ ಶಾಪಕ್ಕಿಂತ ಹೆಚ್ಚು ಶಕ್ತಿಶಾಲಿಯಾಗುತ್ತದೆ ಎಂದು ಮಹಾರಾಷ್ಟ್ರ ಎಟಿಎಸ್‌ನ ಮಾಜಿ ಮುಖ್ಯಸ್ಥ ಹೇಮಂತ ಕರ್ಕರೆಯವರ ಸಾವಿನ ಕುರಿತಂತೆ ಬಿಜೆಪಿ ನಾಯಕಿ ‘ಸಾಧ್ವಿ’ ಪ್ರಜ್ಞಾ ಸಿಂಗ್ ಠಾಕೂರ್ ಅವರ ಹೇಳಿಕೆಯನ್ನು ಪರೋಕ್ಷವಾಗಿ ಪ್ರಸ್ತಾಪಿಸಿ ತಿಳಿಸಿದೆ.

ಸರಕಾರವು ಈ ಸ್ಥಿತಿಯನ್ನು ತಪ್ಪಿಸಬಹುದಿತ್ತು ಎಂದಿರುವ ಅದು,ಹೂಡಿಕೆದಾರರು ಜೆಟ್ ಏರ್‌ವೇಸ್‌ನ ಸ್ಥಾಪಕ ಅಧ್ಯಕ್ಷ ನರೇಶ ಗೋಯಲ್ ಅವರ ನಿರ್ಗಮನಕ್ಕೆ ಆಗ್ರಹಿಸಿದ್ದರು ಮತ್ತು ಎಸ್‌ಬಿಐ ವಿಮಾನಯಾನ ಸಂಸ್ಥೆಗೆ ೫೦೦ ಕೋ.ರೂ.ಗಳ ಆರ್ಥಿಕ ನೆರವನ್ನು ನೀಡುತ್ತದೆ ಎನ್ನಲಾಗಿತ್ತು. ಆದರೆ ಗೋಯಲ್ ಅವರು ಸಂಸ್ಥೆಯಿಂದ ನಿರ್ಗಮಿಸಿದ್ದರೂ,೫೦೦ ರೂ.ಗಳನ್ನೂ ಅದರ ಸಿಬ್ಬಂದಿಗಳಿಗೆ ನೀಡಲಾಗಿಲ್ಲ ಎಂದಿದೆ.

ಜೆಟ್ ಏರ್‌ವೇಸ್‌ನ್ನು ಪತನಗೊಳಿಸಲು ತೆರೆಮರೆಯಲ್ಲಿ ಯಾವುದಾದರೂ ಕಾರ್ಪೊರೇಟ್ ಶಕ್ತಿಯ ಕೈವಾಡವಿದೆಯೇ ಎಂಬ ಶಂಕೆಯನ್ನೂ ಶಿವಸೇನೆಯು ವ್ಯಕ್ತಪಡಿಸಿದೆ.                                    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X