Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ನಾಟಕಕ್ಕೆ ಇನ್ನೊಂದು ಹೆಸರೇ...

ಕರ್ನಾಟಕಕ್ಕೆ ಇನ್ನೊಂದು ಹೆಸರೇ ರಾಜ್‌ಕುಮಾರ್: ಪ್ರದೀಪ್ ಕುರ್ಡೇಕರ್

ವಾರ್ತಾಭಾರತಿವಾರ್ತಾಭಾರತಿ24 April 2019 8:55 PM IST
share
ಕರ್ನಾಟಕಕ್ಕೆ ಇನ್ನೊಂದು ಹೆಸರೇ ರಾಜ್‌ಕುಮಾರ್: ಪ್ರದೀಪ್ ಕುರ್ಡೇಕರ್

 ಉಡುಪಿ, ಎ.24: ಕರ್ನಾಟಕಕ್ಕೆ ಪರ್ಯಾಯ ಹೆಸರೇ ರಾಜ್‌ಕುಮಾರ್. ಅವರ ಪ್ರೌಢಿಮೆ, ಮೇರು ವ್ಯಕ್ತಿತ್ವ, ಅವರು ಬದುಕು ನಡೆಸಿದ ರೀತಿ ಎಲ್ಲರಿಗೂ ಮಾದರಿ ಎಂದು ಉಡುಪಿ ತಹಶೀಲ್ದಾ್ ಪ್ರದೀಪ್‌ಕುರ್ಡೇಕರ್ ಹೇಳಿದ್ದಾರೆ.

ಬುಧವಾರ ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ವಾರ್ತಾ ಇಲಾಖೆಯ ಸಭಾಂಗಣದಲ್ಲಿ ನಡೆದ ವರನಟ, ಪದ್ಮಭೂಷಣ ಡಾ.ರಾಜ್‌ಕುಮಾರ್ ಜಯಂತಿ ಆಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಡಾ.ರಾಜ್‌ಕುಮಾರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡುತಿದ್ದರು.

ಇಡೀ ಮನೆ ಮಂದಿ ಒಟ್ಟಾಗಿ ಕುಳಿತು ನೋಡಿ ಅನುಭವಿಸುವಂತಹ ಸದಭಿರುಚಿಯ, ಸಾಂಸಾರಿಕ ಚಿತ್ರಗಳಲ್ಲಿ ನಟಿಸಿದ ರಾಜ್‌ಕುಮಾರ್ ಅವರ ಅಭಿನಯ ಮತ್ತು ಅವರು ನಿರ್ವಹಿಸಿದ ಪಾತ್ರಗಳು ಚಿರಸ್ಮರಣಿಯ. ಅವರು ನಟಿಸಿದ ಪೌರಾಣಿಕ ಪಾತ್ರಗಳು ಪರದೆಯ ಮೇಲೆ ಜೀವಂತವೆಂಬಂತೆ ಮೂಡಿಬರುತಿದ್ದವು. ಎಲ್ಲಾ ಬಗೆಯ ಪಾತ್ರಗಳಲ್ಲೂ ನಟಿಸಿದ್ದ ಅವರು, ನಾಡು, ನುಡಿಗಾಗಿ ಕಾವೇರಿ, ಗೋಕಾಕ್ ಚಳವಳಿಯಲ್ಲೂ ಪಾಲ್ಗೊಂಡಿದ್ದರು ಎಂದು ನೆನಪಿಸಿಕೊಂಡರು.

ಡಾ.ರಾಜ್ ಅವರ ಬಹುಕಾಲದ ಒಡನಾಡಿ ಹಾಗೂ ಹಿರಿಯ ಕಲಾವಿದ ರಾದ ಹೇರೂರಿನ ದಯಾನಂದ ಶೆಟ್ಟಿ ಮಾತನಾಡಿ ಡಾ.ರಾಜ್‌ಕುಮಾರ್ ಅವರೊಂದಿಗೆ ಕಳೆದ ನೆನಪುಗಳನ್ನು ಹಂಚಿಕೊಂಡರು. ಉಡುಪಿಗೆ ಭೇಟಿ ನೀಡಿದಾಗೆಲ್ಲಾ ತನ್ನನ್ನು ಹುಡುಕಿಸಿ, ಕರೆದು ಮಾತನಾಡಿದ ಬಗ್ಗೆ, ತನ್ನ ಮನೆ ನಿರ್ಮಾಣಕ್ಕೆ ನೀಡಿದ ಧನ ಸಹಾಯವನ್ನು ಸಹ ಸ್ಮರಿಸಿಕೊಂಡರು.

ಸಿನಿ ಪತ್ರಕರ್ತ ಉದಯಕುಮಾರ್ ಪೈ ಮಾತನಾಡಿ, ಕನ್ನಡ ಚಿತ್ರ ಹೆಚ್ಚು ನಿರ್ಮಾಣವಾಗದ, ಕನ್ನಡ ಚಿತ್ರಗಳಿಗೆ ಥಿಯೇಟರ್ ಸಿಗದ ಕಾಲದಲ್ಲಿ ಹೊಟ್ಟೆಪಾಡಿಗಾಗಿ ರಂಗಭೂಮಿಯಿಂದ ಸಿನಿಮಾಕ್ಕೆ ಬಂದ ರಾಜ್‌ಕುಮಾರ್ ಕನ್ನಡ ಚಿತ್ರರಂಗಕ್ಕೆ ಹೊಸದಿಕ್ಕು ತೋರಿದ್ದಾರೆ. ಆರ್ಥಿಕ ದಾರಿದ್ರದ ನಡುವೆಯೂ ಸೃಜನಶೀಲತೆಯ ಕೊರತೆಯಿರದ ಹಿನ್ನೆಲೆಯಲ್ಲಿ ಅವಕಾಶ ಸಿಕ್ಕರೂ ಬೇರೆ ಭಾಷೆಯ ಸಿನಿಮಾಗೆ ಹೋಗದೆ ನಿರ್ಮಾಪಕರು ಕೊಟ್ಟಷ್ಟೇ ಸ್ವೀಕರಿಸಿದ ರಾಜ್, ಕಷ್ಟಗಳನ್ನು ಬದಿಗೊತ್ತಿ, ವೃತ್ತಿಪರತೆ, ಪ್ರಾಮಾಣಿಕತೆ ಮೆರೆದಿದ್ದು ತಂಡ ಸ್ಛೂರ್ತಿ ಯಿಂದ ಕೆಲಸ ಮಾಡಿದ್ದಾರೆ. ಎನ್‌ಟಿಆರ್, ಎಂಜಿಆರ್ ಸ್ನೇಹಿತರಾಗಿದ್ದರೂ ರಾಜಕೀಯ ಪ್ರವೇಶದ ಬಗ್ಗೆ ಅವರಿಗೆ ಒಲವಿರಲಿಲ್ಲ ಎಂದು ಹೇಳಿದರು.

ಆಕಾಶವಾಣಿ ಕಲಾವಿದ ಗಣೇಶ್ ಗಂಗೊಳ್ಳಿ ಡಾ.ರಾಜ್‌ಕುಮಾರ್ ಚಿತ್ರದ ಹಾಡುಗಳನ್ನು ಹಾಡುವ ಮೂಲಕ ಕಾರ್ಯಕ್ರಮಕ್ಕೆ ಮೆರಗು ನೀಡಿ ದರು. ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ ಸ್ವಾಗತಿಸಿ, ಪ್ರಕಾಶ್ ಸುವರ್ಣ ಕಟಪಾಡಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X