Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂವಿಧಾನ ಪ್ರತೀ ಗುಡಿಸಲಿಗೂ ತಲುಪಲಿ:...

ಸಂವಿಧಾನ ಪ್ರತೀ ಗುಡಿಸಲಿಗೂ ತಲುಪಲಿ: ಡಾ.ಸಮತಾ ದೇಶಮಾನೆ

ವಾರ್ತಾಭಾರತಿವಾರ್ತಾಭಾರತಿ24 April 2019 9:43 PM IST
share
ಸಂವಿಧಾನ ಪ್ರತೀ ಗುಡಿಸಲಿಗೂ ತಲುಪಲಿ: ಡಾ.ಸಮತಾ ದೇಶಮಾನೆ

ಕೋಲಾರ,ಎ.24: ವಿಶ್ವದ ಜ್ಞಾನದ ಪ್ರತೀಕವಾದ ಬಾಬಾ ಸಾಹೇಬ್ ಅಂಬೇಡ್ಕರ್ ರನ್ನು ನಮ್ಮ ದೇಶದ ಸರ್ಕಾರಗಳು ಅಸ್ಪೃಶ್ಯ ನೆಲೆಯಿಂದಲೇ ಕಂಡಿತೆ ವಿನಃ ಅವರನ್ನು ಒಬ್ಬ ವಿದ್ವಾಂಸರನ್ನಾಗಿ ನೋಡಲಿಲ್ಲ. ಆದರೆ, ವಾಸ್ತವದಲ್ಲಿ ಅಂಬೇಡ್ಕರ್ ವಿಶ್ವಕ್ಕೇ ಜ್ಞಾನದ ಪ್ರತೀಕವಾಗಿದ್ದಾರೆ. ಅವರು ರಚಿಸಿದ ಸಂವಿಧಾನ ಭಾರತದ ದೇಶದ ಪ್ರತಿ ಗುಡಿಲನ್ನು ತಲುಪುವ ಗ್ರಂಥವಾಗಲಿ. ಆ ಮೂಲಕ ಸಾಮಾಜಿಕ ಅಸಮಾನತೆಯ ಕತ್ತಲನ್ನು ತೊರೆಯುವ ಬೆಳಕಾಗಲಿ ಎಂದು ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ಪ್ರಾಧ್ಯಾಪಕಿ, ಚಿಂತಕಿ ಹಾಗೂ ಸಾಹಿತಿ ಡಾ.ಸಮತಾ ಬಿ.ದೇಶಮಾನೆ ಆಶಯ ವ್ಯಕ್ತಪಡಿಸಿದರು. 

ನಗರದ ಹೊರವಲಯದ ಟಮಕದ ಪ್ರದೇಶದಲ್ಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಡಾ ಬಿ.ಆರ್ ಅಂಬೇಡ್ಕರ್ 128 ವರ್ಷದ ಜಯಂತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂಬೇಡ್ಕರ್ ಬಗ್ಗೆ ಮಾತನಾಡುವುದು ಸುಲಭ ಆದರೆ ಅವರ ವಿಚಾರಗಳನ್ನು ಎಷ್ಟರ ಮಟ್ಟಿಗೆ ನಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದೇವೆ ಎಂಬುದು ಮುಖ್ಯವಾಗಿದೆ. ಅಂಬೇಡ್ಕರ್ ಬಾಲ್ಯದ ದಿನಗಳಲ್ಲಿ ಹೇಗೆಲ್ಲ ಕಷ್ಟದ ಜೀವನ ಚರಿತ್ರೆಯನ್ನು ನಡೆಸಿದ್ದಾರೆ ಎಂಬುದರ ಬಗ್ಗೆ ತಮ್ಮ ಮಕ್ಕಳಿಗೆ ಓದುವಂತೆ ಮಾಡಬೇಕಾಗಿದೆ ಎಂದರು.

ವಿಶ್ವದಲ್ಲೇ ಭಾರತ ಅಂದ ತಕ್ಷಣವೇ ಅಂಬೇಡ್ಕರ್ ಚಿಂತನೆಗಳು ಅವರ ಶಿಕ್ಷಣ ಹೋರಾಟಗಳು ಕಣ್ಣು ಮುಂದೆ ಬರುತ್ತವೆ. ದೇಶದಲ್ಲಿ ಎಲ್ಲರೂ ಸಮಾನರು ಎಂಬುದನ್ನು ಅರಿತು ಸಮಾಜದಲ್ಲಿ ಬದುಕಬೇಕು ಎಂದು ಎಲ್ಲರಿಗೂ ನೀರು ಕೊಡಿಸಿದ್ದು, ಮಹಿಳಾ ಪರ ವಿಮೋಚನೆಗೆಗಾಗಿ ಮನುಸ್ಮೃತಿಯನ್ನು ಸುಟ್ಟಿದ್ದು, 1951ರಲ್ಲಿ ಮಹಿಳೆಯರಿಗೆ ಮೀಸಲಾತಿಗಾಗಿ ಮಂಡಿಸಿದ ಹಿಂದೂ ಕೋಡ್ ಬಿಲ್ ಗೆ ಸಂಸತ್ತಿನಲ್ಲಿ ಹಿನ್ನಡೆಯಾದಾಗ ಕಾನೂನು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಅವರಿಗೆ ಮಹಿಳೆಯರ ಪರ ಇದ್ದ ಆಸಕ್ತಿಗೆ ಹಿಡಿದ ಕೈಗನ್ನಡಿ ಎಂದರು.

ಅಂಬೇಡ್ಕರ್ ಮೀಸಲಾತಿಯನ್ನು ತರುವುದರ ಜೊತೆಗೆ ರೈತರ, ಕಾರ್ಮಿಕರ ಮಹಿಳೆಯರ ಪರವಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಕಷ್ಟು ಶ್ರಮವಹಿಸಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಬೆಂಗಳೂರು ಉತ್ತರ ವಿವಿಯ ಕುಲಪತಿ ಪ್ರೊ ಟಿ.ಡಿ ಕೆಂಪರಾಜು, ಯಾವುದೇ ಜಯಂತಿಯನ್ನು ಮಾಡಿದರೂ ವಿಶೇಷವಾದ ಸಂದೇಶಗಳನ್ನು ಯುವಜನತೆಗೆ ತಿಳಿಸಿ ಹೆಚ್ಚಿನ ಸಫಲತೆ ಪಡೆದು ದೇಶದ ಅಭಿವೃದ್ಧಿಗೆ ದಾರಿಯಾಗಬೇಕು. ಶಿಕ್ಷಣ ಸಂಘಟನೆ ಮತ್ತು ಹೋರಾಟ ಒಂದು ಸನ್ನಿವೇಶಕ್ಕೆ ಸೀಮಿತವಾಗೇ ನಿರಂತರವಾಗಿರಬೇಕು ಎಂದರು.

ಬೆಂಗಳೂರು ಉತ್ತರ ವಿವಿಯ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಡಿ ಡೊಮಿನಿಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಅಂಬೇಡ್ಕರ್ ನಡೆಸಿದ ಹೋರಾಟಗಳಿಂದ ನಮ್ಮಂತವರು ಉನ್ನತ ಶಿಕ್ಷಣ ಪಡೆಯುವಂತಾಗಿದೆ. ಅಂಬೇಡ್ಕರ್ ಜಯಂತಿಯನ್ನು ವಿಶ್ವ ಜ್ಞಾನದ ದಿನವಾಗಿ ವಿಶ್ವಸಂಸ್ಥೆ ಘೋಷಿಸಿರುವುದು ಸಮಾಜದಲ್ಲಿ ಗೌರವ ಘನತೆ ಹೆಚ್ಚಿಸುತ್ತದೆ ಎಂದರು.

ವೇದಿಕೆಯಲ್ಲಿ ಬೆಂಗಳೂರು ಉತ್ತರ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ ಕೆ. ಜನಾರ್ದನಂ. ವಿತ್ತಾಧಿಕಾರಿ ಪ್ರೊ ಡಿ.ಕುಮುದ ಇದ್ದು ವಿವಿಯ ಕುಲಸಚಿವ ಪ್ರೊ.ಎಂ.ಎಸ್.ರೆಡ್ಡಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X