Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಂಜಾಬ್ ಸವಾಲು ಮೀರಿದ ರಾಯಲ್ ಚಾಲೆಂಜರ್ಸ್

ಪಂಜಾಬ್ ಸವಾಲು ಮೀರಿದ ರಾಯಲ್ ಚಾಲೆಂಜರ್ಸ್

►ಡಿವಿಲಿಯರ್ಸ್ ಅಬ್ಬರ ►ಉಮೇಶ್‌ಗೆ ಮೂರು ವಿಕೆಟ್

ವಾರ್ತಾಭಾರತಿವಾರ್ತಾಭಾರತಿ25 April 2019 12:05 AM IST
share
ಪಂಜಾಬ್ ಸವಾಲು ಮೀರಿದ ರಾಯಲ್ ಚಾಲೆಂಜರ್ಸ್

ಬೆಂಗಳೂರು, ಎ.24: ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು ತಂಡ ಬುಧವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 42ನೇ ಐಪಿಎಲ್ ಪಂದ್ಯದಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ 17 ರನ್‌ಗಳ ಗೆಲುವು ಕಂಡಿದೆ.

203 ರನ್‌ಗಳ ಗೆಲುವಿನ ಗುರಿ ಬೆನ್ನಟ್ಟಿದ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 185 ರನ್ ಗಳಿಸಿತು.

ಪ್ರವಾಸಿ ತಂಡದ ಪರ ಇನಿಂಗ್ಸ್ ಆರಂಭಿಸಿದ ಲೋಕೇಶ್ ರಾಹುಲ್ (42, 27 ಎಸೆತ, 7 ಬೌಂಡರಿ, 1 ಸಿಕ್ಸರ್ ) ಹಾಗೂ ವಿಂಡೀಸ್ ದೈತ್ಯ ಕ್ರಿಸ್ ಗೇಲ್ (23, 10 ಎಸೆತ, 4 ಬೌಂಡರಿ, 1 ಸಿಕ್ಸರ್) ಮೊದಲ ವಿಕೆಟ್ ಜೊತೆಯಾಟದಲ್ಲಿ 42 ರನ್ ಸೇರಿಸಿದರು. ಹೆಚ್ಚು ಅಬ್ಬರಿಸದ ಗೇಲ್ ವೇಗಿ ಉಮೇಶ್‌ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ರಾಹುಲ್ ಜೊತೆಗೂಡಿದ ಮಾಯಾಂಕ್ ಅಗರ್ವಾಲ್ (35, 21 ಎಸೆತ, 5 ಬೌಂಡರಿ, 1 ಸಿಕ್ಸರ್) ಆರ್‌ಸಿಬಿ ಬೌಲರ್‌ಗಳನ್ನು ಚೆನ್ನಾಗಿ ದಂಡಿಸಿದರು. ಸಿಡಿಯತೊಡಗಿದ್ದ ಅಗರ್ವಾಲ್ ಅವರು ಸ್ಟೋನಿಸ್‌ಗೆ ವಿಕೆಟ್ ಒಪ್ಪಿಸಿದರು. ಆ ಬಳಿಕ ರಾಹುಲ್ ಕೂಡ ಹೆಚ್ಚು ಹೊತ್ತು ನಿಲ್ಲದೆ ಮೊಯಿನ್‌ಗೆ ಬಲಿಯಾದರು. ನಿಕೋಲಸ್ ಪೂರನ್ (46, 28 ಎಸೆತ, 1 ಬೌಂಡರಿ, 5 ಸಿಕ್ಸರ್ ) ಹಾಗೂ ಡೇವಿಡ್ ಮಿಲ್ಲರ್ (24, 25 ಎಸೆತ, 2 ಬೌಂಡರಿ) 4ನೇ ವಿಕೆಟ್ ಜೊತೆಯಾಟದಲ್ಲಿ 68 ರನ್ ಸೇರಿಸಿದರು. ರವಿಚಂದ್ರನ್ ಅಶ್ವಿನ್ (6) ವಿಫಲರಾದರು.

ಆರ್‌ಸಿಬಿ ಪರ ಉಮೇಶ್ ಯಾದವ್ 3 ಹಾಗೂ ನವದೀಪ್ ಸೈನಿ 2 ವಿಕೆಟ್ ಪಡೆದು ಮಿಂಚಿದರು.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆತಿಥೇಯ ತಂಡ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು.

ಬೆಂಗಳೂರು ಪರ ಪಾರ್ಥಿವ್ ಪಟೇಲ್ (43, 24 ಎಸೆತ, 7 ಬೌಂಡರಿ, 2 ಸಿಕ್ಸರ್) ಹಾಗೂ ನಾಯಕ ವಿರಾಟ್ ಕೊಹ್ಲಿ (13, 8 ಎಸೆತ, 2 ಬೌಂಡರಿ ) ಮೊದಲ ವಿಕೆಟ್ ಜೊತೆಯಾಟದಲ್ಲಿ 35 ರನ್ ಸೇರಿಸಿದರು. ಈ ವೇಳೆ ಮುಹಮ್ಮದ್ ಶಮಿ ಎಸೆತದಲ್ಲಿ ಕೊಹ್ಲಿ, ಮಂದೀಪ್ ಸಿಂಗ್‌ಗೆ ಕ್ಯಾಚ್ ನೀಡಿದರು. ಬಿರುಸಿನ ಆಟಕ್ಕಿಳಿದಿದ್ದ ಪಾರ್ಥಿವ್‌ರನ್ನು ಸ್ಪಿನ್ನರ್ ಮುರುಗನ್ ಅಶ್ವಿನ್ ಬಲೆಗೆ ಕೆಡವಿದರು. ಆ ಬಳಿಕ ಎಬಿ ಡಿವಿಲಿಯರ್ಸ್ (ಅಜೇಯ 82, 44 ಎಸೆತ, 3 ಬೌಂಡರಿ, 7 ಸಿಕ್ಸರ್) ಹಾಗೂ ಮೊಯಿನ್ ಅಲಿ (4, 5 ಎಸೆತ, 1 ಬೌಂಡರಿ) ಜೊತೆಯಾಟ ಹೆಚ್ಚು ಹೊತ್ತು ನಡೆಯಲಿಲ್ಲ. ಮೊಯಿನ್‌ರನ್ನು ನಾಯಕ ಆರ್. ಅಶ್ವಿನ್ ಪೆವಿಲಿಯನ್ ದಾರಿ ಹಿಡಿಸಿದರು.

ಅಕ್ಷದೀಪ್ ನಾಥ್ (3, 7 ಎಸೆತ) ಮತ್ತೊಮ್ಮೆ ವಿಫಲರಾದರು. ಡಿವಿಲಿಯರ್ಸ್‌ಗೆ ಮಾರ್ಕಸ್ ಸ್ಟೋನಿಸ್ (ಅಜೇಯ 46, 34 ಎಸೆತ, 2 ಬೌಂಡರಿ, 3 ಸಿಕ್ಸರ್) ಉತ್ತಮ ಸಾಥ್ ನೀಡಿದರು.

ಕೊನೆಯ ಮೂರು ಓವರ್‌ಗಳಲ್ಲಿ ಅಕ್ಷರಶಃ ಅಬ್ಬರಿಸಿದ ಡಿವಿಲಿಯರ್ಸ್ ಹಾಗೂ ಸ್ಟೋನಿಸ್ 64 ರನ್ ಬಾರಿಸಿದರು.

ಅಂಕಿತ್ ರಾಜ್‌ಪೂತ್, ಶಮಿ, ಆರ್.ಅಶ್ವಿನ್ ಹಾಗೂ ಎಂ.ಅಶ್ವಿನ್ ತಲಾ 1 ವಿಕೆಟ್ ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X