Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭರದಿಂದ ಸಾಗುತ್ತಿದೆ ಸರಪಾಡಿ ಬಹುಗ್ರಾಮ...

ಭರದಿಂದ ಸಾಗುತ್ತಿದೆ ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ

97 ಜನವಸತಿ ಪ್ರದೇಶಗಳಿಗೆ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ?

ಅಬ್ದುಲ್ ರಹ್ಮಾನ್ ತಲಪಾಡಿಅಬ್ದುಲ್ ರಹ್ಮಾನ್ ತಲಪಾಡಿ25 April 2019 11:44 AM IST
share
ಭರದಿಂದ ಸಾಗುತ್ತಿದೆ ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ

ಬಂಟ್ವಾಳ, ಎ.24: ಮಂಗಳೂರು, ಬಂಟ್ವಾಳ ಸಹಿತ ಮುಖ್ಯ ಪಟ್ಟಣಗಳು ಜಿಲ್ಲೆಯ ಜೀವನದಿ ನೇತ್ರಾವತಿಯನ್ನು ಅವಲಂಬಿಸಿದ್ದರೆ, ಬಂಟ್ವಾಳ ತಾಲೂಕಿನ ಸರಪಾಡಿ ಮತ್ತು ಇತರ ಗ್ರಾಮಗಳಿಗೆ ನೀರು ಪೂರೈಸಲು ಸರಪಾಡಿ ಬಹುಗ್ರಾಮ ಕುಡಿ ಯುವ ನೀರಿನ ಯೋಜನೆಯನ್ನು ಅವಲಂಬಿಸಿದ್ದು, ಇದರ ಕಾಮಗಾರಿಯೂ ಸರಪಾಡಿಯಲ್ಲಿ ಭರದಿಂದ ನಡೆಯುತ್ತಿದೆ. ಮಹತ್ವಾಕಾಂಕ್ಷೆಯ ಬಹುಗ್ರಾಮ ಕುಡಿಯುವ ನೀರಿನ ಸರಬರಾಜು ಯೋಜನೆ ಸರಪಾಡಿಯಲ್ಲಿ ಅನುಷ್ಠಾನಗೊಂಡಿದ್ದು, 32.90 ಕೋ. ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿದೆ. ಇದರಿಂದ ಈ ಭಾಗದ ಜನತೆಯ ಕುಡಿಯುವ ನೀರಿನ ಸಮಸ್ಯೆ ಶಾಶ್ವತವಾಗಿ ಪರಿಹಾರ ಉಂಟಾಗಬಹುದು ಎಂದು ನಿರೀಕ್ಷಿಸಲಾಗಿದೆ.

45 ಸಾವಿರ ಮನೆಗಳಿಗೆ ಶುದ್ಧನೀರು ಪೂರೈಕೆ: ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಪಂ ವ್ಯಾಪ್ತಿಯ ಪೆರ್ಲ-ಬೀಯಪಾದೆಯಲ್ಲಿ ಸರಪಾಡಿ ಮತ್ತು ಇತರ 97 ಜನವಸತಿ ಪ್ರದೇಶ ಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿ ನಡೆಯುತ್ತಿದೆ. ವರ್ಷ ದೊಳಗೆ ಕಾಮಗಾರಿ ಪೂರ್ಣಗೊಳಿಸುವ ಭರವಸೆ ಹೊಂದಿದ್ದು, ಇದರಿಂದ ಈ ಭಾಗದ 45 ಸಾವಿರ ಮನೆಗಳಿಗೆ ಶುದ್ಧನೀರು ಪೂರೈಕೆಯಾಗಲಿದೆ. ಯೋಜನೆ ಅನುಷ್ಠಾನದಿಂದ ಕೊಳವೆ ಬಾವಿಯ ಬಳಕೆ ಕಡಿಮೆಯಾಗಲಿದ್ದು, ಅಂತರ್ಜಲವೂ ವೃದ್ಧಿಯಾಗುತ್ತದೆ. ಆದರೆ ಕುಡಿಯುವ ನೀರನ್ನು ಕೃಷಿಕಾರ್ಯ ಸಹಿತ ಇತರ ಕಾರ್ಯಗಳಿಗೆ ಬಳಸದೇ ಯೋಜನೆಯ ಯಶಸ್ವಿಗೆ ಸಮುದಾಯದ ಸಹಭಾಗಿತ್ವ ಅಗತ್ಯವಾಗಿದೆ ಎಂದು ಇಲಾಖಾ ಎಂಜಿನಿಯರ್‌ನ ಅಭಿಪ್ರಾಯ.

ಸರಪಾಡಿ ಗ್ರಾಪಂ ವ್ಯಾಪ್ತಿಯಲ್ಲಿ ಕೃಷಿಕರೇ ಹೆಚ್ಚಿ ದ್ದುಕೃಷಿ ಚಟುವಟಿಕೆಗಳಿಗೆ ಕೊಳವೆ ಬಾವಿಯನ್ನು ಅವಲಂಬಿಸಿದ್ದಾರೆ. ಕುಡಿಯುವ ನೀರಿಗೆ ಖಾಸಗಿ ಬಾವಿಗಳಿದ್ದರೂ ಹೆಚ್ಚಿನ ಗ್ರಾಮಸ್ಥರು ಸರಕಾರಿ ಸಾರ್ವಜನಿಕ ಕುಡಿಯುವ ನೀರನ್ನೇ ಅವಲಂಬಿಸಿದ್ದಾರೆ. ಬೇಸಿಗೆಯಲ್ಲಿ ಕೊಳವೆ ಬಾವಿಯಲ್ಲಿ ನೀರಿನ ಕೊರತೆ ಯಾಗುವುದರಿಂದ ನೀರಿನ ಸಮಸ್ಯೆ ಉಂಟಾಗುತ್ತದೆ. ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗಿದೆ. ಈಗಾಗಲೇ ಸರಪಾಡಿ ಗ್ರಾಪಂ ವ್ಯಾಪ್ತಿಯ ಅಲ್ಲಿಪಾದೆ ಮೊದಲಾದೆಡೆ ಕೃಷಿ ಹಾಗೂ ಕುಡಿಯುವ ನೀರಿಗೂ ಸಮಸ್ಯೆ ಉಂಟಾಗಿದೆ. ಕೊಳವೆ ಬಾವಿ ಬತ್ತಿಹೋಗಿದೆ. ಸದ್ಯ ನೀರಿನ ಪರ್ಯಾಯ ವ್ಯವಸ್ಥೆಗೆ ಗ್ರಾಪಂ ಮುಂದಾಗಿದೆ. ಈ ನಿಟ್ಟಿನಲ್ಲಿ ಮುಂದಕ್ಕೆ ಯೋಜನೆಯಿಂದ ಶಾಶ್ವತ ಪರಿಹಾರ ದೊರಕಬಹುದಾಗಿದೆ.

ಯಾವ್ಯಾವ ಗ್ರಾಮಗಳು?

ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಪಂ ವ್ಯಾಪ್ತಿಯ ಸರಪಾಡಿ, ದೇವಶ್ಯಮೂಡೂರು, ಉಳಿ, ಬಡಗಕಜೆಕಾರು, ತೆಂಕಕಜೆಕಾರು, ನಾವೂರು, ಮಣಿನಾಲ್ಕೂರು, ಪಿಲಾತಬೆಟ್ಟು, ಕಾವಳಮೂಡೂರು, ದೇವಸ್ಯಪಡೂರು, ಕಾವಳಪಡೂರು, ಕಾಡಬೆಟ್ಟು, ಇರ್ವತ್ತೂರು, ಮೂಡುಪಡುಕೋಡಿ ಹಾಗೂ ಇತರ 97 ಜನವಸತಿ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಇದಾಗಿದೆ. ಮೂರು ಓವರ್ ಹೆಡ್ ಟ್ಯಾಂಕ್‌ಗಳ ಮೂಲಕ ಈ ಭಾಗದ 45 ಸಾವಿರ ಮನೆಗಳಿಗೆ ಶುದ್ಧನೀರು ಪೂರೈಕೆಯ ಗುರಿಯನ್ನು ಹೊಂದಿದೆ.

ಸರಪಾಡಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಜಲ ಸಂಪನ್ಮೂಲಕ್ಕೆ ಪೆರ್ಲ ಬೀಯಪಾದೆಯಲ್ಲಿ ನೇತ್ರಾವತಿ ನದಿ ಮಧ್ಯದಲ್ಲಿ ಜಾಕ್‌ವೆಲ್ ನಿರ್ಮಿಸಿ ನೀರೆತ್ತಲಾಗುವುದು. ಬಳಿಕ ತೆಕ್ಕಿಕಾಡುವಿನ ಶುದ್ಧೀಕರಣ ಘಟಕದಲ್ಲಿ ನೀರು ಶುದ್ಧಗೊಂಡು ಫಲಾನುಭವಿ ಗ್ರಾಮಗಳಿಗೆ ಪೂರೈಸಲಾಗುವುದು. ಎಂಆರ್‌ಪಿಎಲ್ ಅಣೆಕಟ್ಟು ಇರುವ ಕಾರಣ ನೀರಿನ ಸಮಸ್ಯೆಯಾಗದು. ಕಾಮಗಾರಿ ಶೀಘ್ರ ಪೂರ್ಣಗೊಳ್ಳಲಿದೆ.

 ಕೃಷ್ಣ ಮಾನಪ್ಪ, ಕಿರಿಯ ಇಂಜಿನಿಯರ್

share
ಅಬ್ದುಲ್ ರಹ್ಮಾನ್ ತಲಪಾಡಿ
ಅಬ್ದುಲ್ ರಹ್ಮಾನ್ ತಲಪಾಡಿ
Next Story
X