Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ...

ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಹೂಳೆತ್ತುವ ಕಾರ್ಯಾರಂಭ

ವಾರ್ತಾಭಾರತಿವಾರ್ತಾಭಾರತಿ25 April 2019 6:31 PM IST
share
ಶ್ರೀ ಕೃಷ್ಣ ಮಠದ ಮಧ್ವ ಸರೋವರದಲ್ಲಿ ಹೂಳೆತ್ತುವ ಕಾರ್ಯಾರಂಭ

ಉಡುಪಿ, ಎ.25: ಸುಮಾರು 16 ವರ್ಷಗಳ ನಂತರ ಉಡುಪಿ ಶ್ರೀಕೃಷ್ಣ ಮಠದ ಮಧ್ವಸರೋವರದ ಹೂಳುತ್ತುವ ಕಾರ್ಯ ಗುರುವಾರ ಇಲ್ಲಿ ಪ್ರಾರಂಭಗೊಂಡಿದೆ.

16 ವರ್ಷಗಳ ಹಿಂದೆ (2002-04) ಪರ್ಯಾಯ ಪಲಿಮಾರುಶ್ರೀಗಳ ಮೊದಲ ಪರ್ಯಾಯಾವಧಿಯಲ್ಲೇ ಮಧ್ವ ಸರೋವರದ ಹೂಳೆತ್ತುವ ಕಾರ್ಯ ಮಾಡಲಾಗಿತ್ತು. ಆಗ ಮಠದ ಅಭಿಮಾನಿಗಳು ಹಾಗೂ ಸಾರ್ವಜನಿಕರು ಕರಸೇವೆಯ ಮೂಲಕ ಹೂಳೆತ್ತುವ ಕಾರ್ಯ ನಡೆಸಿದ್ದರು. ಇದೀಗ 16 ವರ್ಷಗಳ ನಂತರ ಯಂತ್ರಗಳ ನೆರವಿನಿಂದ ಮತ್ತೆ ಹೂಳೆತ್ತಲಾಗುತ್ತಿದೆ.

ಬುಧವಾರ ಅಪರಾಹ್ನ 2 ರಿಂದ ಗುರುವಾರ ಬೆಳಗ್ಗಿನ ಜಾವದವರೆಗೆ 5 ಪಂಪ್‌ಗಳನ್ನು ಅಳವಡಿಸಿ ಸರೋವರದಲ್ಲಿದ್ದ ನೀರನ್ನು ಖಾಲಿ ಮಾಡಿ, ರಾಜಾಂಗಣ ಹಾಗೂ ಸುತ್ತಲಿನ ಬಾವಿಗಳಿಗೆ ತುಂಬಿಸಲಾಯಿತು. ಮಧ್ವ ಸರೋವರದ ಒಳಗೆ 2 ಸಣ್ಣ ಸರೋವರವಿದ್ದು, ಇದರಲ್ಲಿ ಮುಂಭಾಗದ ಸರೋವರದಲ್ಲಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಗುರುವಾರ ಬೆಳಗ್ಗೆ ಕೃಷ್ಣ ಪೂಜೆ ಸ್ನಾನ ಮಾಡಿದ ಬಳಿಕ ಹೂಳೆತ್ತುವ ಕಾರ್ಯವನ್ನು ಆರಂಭಿಸಲಾಗಿದೆ.

ಶ್ರೀಗಳ ಹಾಗೂ ಇತರರ ದೈನಂದಿನ ಸ್ನಾನಕ್ಕಾಗಿ ಮೊದಲು ಸಣ್ಣ ಸರೋವರದ ಹೂಳೆತ್ತಿ ಶುದ್ಧೀಕರಿಸಲಾಗುತ್ತದೆ. ಇದರಲ್ಲಿ 5 ಅಡಿಯಷ್ಟು ಹೂಳು ತುಂಬಿದೆ ಎಂದು ಹೂಳೆತ್ತುವ ಕೆಲಸ ಮಾಡುತ್ತಿರು ಕಾರ್ಮಿಕರು ಅಭಿಪ್ರಾಯ ಪಟ್ಟಿದ್ದಾರೆ.

2002-2004ರ ತಮ್ಮ ಪ್ರಥಮ ಪರ್ಯಾಯ ಕಾಲದಲ್ಲಿ ಪಲಿಮಾರು ಶ್ರೀಗಳು ಮಧ್ವ ಸರೋವರದ ಕೆಸರು ತೆಗೆದು ಶುದ್ಧೀಕರಿಸಿದ್ದರು. ಇದೀಗ ಎರಡನೇ ಬಾರಿಗೆ ಮಧ್ವ ಸರೋವರವನ್ನು ಸುಮಾರು ಎರಡು ಲಕ್ಷ ರೂ. ವೆಚ್ಚದಲ್ಲಿ ಸ್ವಚ್ಛಗೊಳಸಲಾಗುತ್ತಿದೆ.

ಸುಮಾರು 50 ಸೆಂಟ್ಸ್ ವಿಸ್ತೀರ್ಣದಲ್ಲಿರುವ ಮಧ್ವ ಸರೋವರ ನಗರದ ಅತೀ ದೊಡ್ಡ ಕೆರೆಯಾಗಿದ್ದು, ದಿನದಿಂದ ದಿನಕ್ಕೆ ನೀರು ಬತ್ತುತ್ತಿದೆ. ಬೇಸಿಗೆ ಕಾಲದಲ್ಲಿ ಪ್ರತೀ ವರ್ಷ ಇಲ್ಲಿ ನೀರಿನ ಸಮಸ್ಯೆ ಎದುರಾಗುತ್ತಿದೆ. ಸುಮಾರು ನಾಲ್ಕು ವರ್ಷಗಳ ಹಿಂದೆ ಮೇ ತಿಂಗಳಲ್ಲಿ ಮಧ್ವ ಸರೋವರದಲ್ಲಿ ತೆಪ್ಪೋತ್ಸವಕ್ಕೂ ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಹೂಳೆತ್ತುವ ಕಾರ್ಯ ನಡೆದಿರುವುದರಿಂದ ಈ ವರ್ಷ ಅಂಥ ಸಮಸ್ಯೆ ಎದುಾಗಲಿಕ್ಕಿಲ್ಲ ಎಂಬ ನಿರೀಕ್ಷೆ ಶ್ರೀಗಳದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X