Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪರಿಹಾರ ಧನ ಅತ್ಯಾಚಾರ ಸಂತ್ರಸ್ತರ...

ಪರಿಹಾರ ಧನ ಅತ್ಯಾಚಾರ ಸಂತ್ರಸ್ತರ ನೆರವಿಗೆ ಬಳಕೆ: ಬಿಲ್ಕಿಸ್ ಬಾನು

“ಸುಪ್ರೀಂ ತೀರ್ಪು ಸಂವಿಧಾನದ ಮೇಲಿಟ್ಟಿದ್ದ ನಂಬಿಕೆ ಹೆಚ್ಚಿಸಿದೆ”

ವಾರ್ತಾಭಾರತಿವಾರ್ತಾಭಾರತಿ25 April 2019 8:35 PM IST
share
ಪರಿಹಾರ ಧನ ಅತ್ಯಾಚಾರ ಸಂತ್ರಸ್ತರ ನೆರವಿಗೆ ಬಳಕೆ: ಬಿಲ್ಕಿಸ್ ಬಾನು

ಹೊಸದಿಲ್ಲಿ, ಎ.25: ಕಳೆದ 17 ವರ್ಷಗಳಿಂದ ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ತಾನು ವಿಶ್ವಾಸವಿರಿಸಿಕೊಂಡಿದ್ದು, ಸುಪ್ರೀಂಕೋರ್ಟ್ ನೀಡಿರುವ ತೀರ್ಪು ನ್ಯಾಯಾಂಗ ವ್ಯವಸ್ಥೆಯ ಮೇಲಿಟ್ಟಿದ್ದ ತನ್ನ ನಂಬಿಕೆಯನ್ನು ಹೆಚ್ಚಿಸಿದೆ ಎಂದು ಬಿಲ್ಕಿಸ್ ಬಾನು ಹೇಳಿದ್ದಾರೆ.

2002ರ ಗುಜರಾತ್ ಹಿಂಸಾಚಾರ ಸಂದರ್ಭ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಬಿಲ್ಕಿಸ್ ಬಾನುಗೆ ಸರಕಾರಿ ಉದ್ಯೋಗ, ವಸತಿ ಮತ್ತು 50 ಲಕ್ಷ ರೂ. ಪರಿಹಾರ ಧನ ನೀಡುವಂತೆ ಸುಪ್ರೀಂಕೋರ್ಟ್ ಗುಜರಾತ್ ಸರಕಾರಕ್ಕೆ ಆದೇಶಿಸಿದೆ. ಇಲ್ಲಿ ತನಗೆ ದೊರೆತ ಪರಿಹಾರ ಧನದ ಮೊತ್ತ ಮುಖ್ಯವಲ್ಲ. ತಾನು ಅನುಭವಿಸಿದ ಯಾತನೆ ನ್ಯಾಯಾಲಯಕ್ಕೆ ಅರ್ಥವಾಗಿದೆ ಎಂಬುದು ಮುಖ್ಯವಾಗಿದೆ ಎಂದು ಬುಧವಾರ ದಿಲ್ಲಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯಲ್ಲಿ ಬಾನು ಹೇಳಿದರು.

ತನಗೆ ದೊರೆತಿರುವ ಪರಿಹಾರ ಧನದ ಒಂದು ಭಾಗವನ್ನು ಬಳಸಿಕೊಂಡು ಅತ್ಯಾಚಾರ ಮತ್ತು ಕೋಮುಗಲಭೆ ಸಂತ್ರಸ್ತರ ನೆರವಿಗೆ ನಿಧಿ ಸಂಗ್ರಹಿಸಲು ಯೋಚಿಸಿದ್ದೇನೆ. ಈ ನಿಧಿಗೆ ಕೋಮುಗಲಭೆಯಲ್ಲಿ ಮೃತಪಟ್ಟ ತನ್ನ ಮೂರು ವರ್ಷದ ಮಗಳು ಸಲೇಹಾರ ಹೆಸರನ್ನು ಇಡಲಾಗುವುದು. “ಮಗಳ ಮೃತದೇಹವೂ ನಮಗೆ ದೊರೆತಿಲ್ಲ. ಅವಳ ಅಂತ್ಯಸಂಸ್ಕಾರ ನಡೆಸಲೂ ನಮ್ಮಿಂದಾಗಲಿಲ್ಲ ಎಂಬ ದುಃಖ ಇಂದಿಗೂ ಬಾಧಿಸುತ್ತಿದೆ. ನ್ಯಾಯಾಲಯದ ತೀರ್ಪಿನಿಂದ ತುಸು ನೆಮ್ಮದಿಯಾಗಿದೆ” ಎಂದು ಹೇಳಿದ್ದಾರೆ.

ಇನ್ನು ಮುಂದೆ ತನ್ನ, ಪತಿಯ ಮತ್ತು ಮಕ್ಕಳ ಜೀವನದ ಬಗ್ಗೆ ಯೋಚಿಸುತ್ತೇನೆ. ಹಿಂಸೆಯ ಸಂತ್ರಸ್ತರ ಪ್ರಕರಣದಲ್ಲಿ ಹೋರಾಟ ನಡೆಸುವ ಉದ್ದೇಶದಿಂದ ಮಗಳು ವಕೀಲೆಯಾಗುವ ಇಚ್ಛೆ ವ್ಯಕ್ತಪಡಿಸಿದ್ದಾಳೆ. ಅವಳ ನಿರ್ಧಾರಕ್ಕೆ ನಮ್ಮ ಸಮ್ಮತಿಯಿದೆ ಎಂದು ಬಿಲ್ಕಿಸ್ ಬಾನು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X