Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಶಾಂತಿ, ಪ್ರೀತಿ, ಅಹಿಂಸೆಯಿಂದ ಮಾತ್ರ...

‘ಶಾಂತಿ, ಪ್ರೀತಿ, ಅಹಿಂಸೆಯಿಂದ ಮಾತ್ರ ಜಗತ್ತನ್ನು ಜಯಿಸಲು ಸಾಧ್ಯ’

ಶ್ರೀಲಂಕಾ ಭಯೋತ್ಪಾದಕ ದಾಳಿಗೆ ಬಲಿಯಾದವರಿಗೆ ಶೃದ್ದಾಂಜಲಿ ಸಭೆ

ವಾರ್ತಾಭಾರತಿವಾರ್ತಾಭಾರತಿ25 April 2019 8:57 PM IST
share
‘ಶಾಂತಿ, ಪ್ರೀತಿ, ಅಹಿಂಸೆಯಿಂದ ಮಾತ್ರ ಜಗತ್ತನ್ನು ಜಯಿಸಲು ಸಾಧ್ಯ’

ಉಡುಪಿ, ಎ.25: ಶಾಂತಿ, ಪ್ರೀತಿ, ಅಹಿಂಸೆಗಳಿಂದ ಮಾತ್ರ ಜಗತ್ತಿನ ಮಾನವ ಕುಲವನ್ನು ಜಯಿಸಲು ಸಾಧ್ಯವಿದೆ. ಭಯೋತ್ಪಾದನೆ, ಹಿಂಸೆ, ಕ್ರೌರ್ಯ ಗಳಿಂದ ಜಗತ್ತನ್ನು ಜಯಿಸಲು ಸಾಧ್ಯವಿಲ್ಲ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅ.ವಂ. ಡಾ.ಜೆರಾಲ್ಡ್ ಐಸಾಕ್ ಲೋಬೊ ಹೇಳಿದ್ದಾರೆ.

ಶ್ರೀಲಂಕಾದ ಕೊಲಂಬೊ ಸೇರಿದಂತೆ ವಿವಿಧ ನಗರಗಳಲ್ಲಿ ಈಸ್ಟರ್ ಹಬ್ಬದ ದಿನ ಭಯೋತ್ಪಾದಕರ ದಾಳಿಗೆ ಬಲಿಯಾದವರ ಆತ್ಮಗಳಿಗೆ ಸದ್ಗತಿ ಕೋರಿ ಉಡುಪಿ ಶೋಕಮಾತಾ ಇಗರ್ಜಿಯ ಆವರಣದಲ್ಲಿ ಗುರುವಾರ ಸಂಜೆ ಆಯೋಜಿಸಲಾದ ಉಡುಪಿ ಧರ್ಮಪ್ರಾಂತದ ಕ್ರೈಸ್ತ ಬಾಂಧವರ ಮೌನ ಪ್ರಾರ್ಥನೆ ಹಾಗೂ ಮೊಂಬತ್ತಿ ಬೆಳಗಿ ಶೃದ್ದಾಂಜಲಿ ಸಭೆಯಲ್ಲಿ ಅವರು ಮಾತನಾಡುತಿದ್ದರು.

ಎ.21ರಂದು ಜಗತ್ತಿನಾದ್ಯಂತ ಪಾಸ್ಕ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಳ್ಳುವ ಸಮಯದಲ್ಲಿ ಶ್ರೀೀಲಂಕಾದ ಜನತೆಗೆ ಕರಾಳ ದಿನ ವಾಯಿತು. ಶ್ರೀಲಂಕಾದ ಚರ್ಚ್, ಹೋಟೆಲು ಹಾಗೂ ಇನ್ನಿತರ ಕಡೆಗಳಲ್ಲಿ ನಡೆದ 9 ಮಂದಿ ಆತ್ಮಹತ್ಯಾ ದಾಳಿಕೋರರ ದುಷ್ಕೃತ್ಯಕ್ಕೆ ಈಗಾಗಲೇ 359 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇವರಲ್ಲಿ 10 ಮಂದಿ ಭಾರತೀಯರು ಹಾಗೂ ಇವರಲ್ಲಿ ಏಳು ಮಂದಿ ಕರ್ನಾಟಕದವರಿದ್ದಾರೆ. ಈ ಘಟನೆಯಲ್ಲಿ 45ಕ್ಕೂ ಅಧಿಕ ಮುಗ್ದ ಮಕ್ಕಳು ಸಹ ತಮ್ಮದಲ್ಲದ ತಪ್ಪಿಗೆ ಪ್ರಾಣತೆತ್ತು ಅಮರಾದರು ಎಂದು ಬಿಷಪ್ ನುಡಿದರು.

ಈ ಕ್ರೂರ ಕೃತ್ಯವನ್ನು ಇಡೀ ಜಗತ್ತು ಖಂಡಿಸಿದೆ. ಜಗತ್ತನ್ನು, ಬದುಕನ್ನು ಕಟ್ಟುವುದು ಎಷ್ಟು ಕಷ್ಟ ಎಂಬುದನ್ನು, ಬದುಕನ್ನು ನಾಶ ಮಾಡುವವರು ಅರ್ಥ ಮಾಡಿಕೊಂಡರೆ ಉತ್ತಮ. ಭಯೋತ್ಪಾದನೆ, ಹಿಂಸೆ, ದ್ವೇಷ ಹಾಗೂ ಕ್ರೂರಕೃತ್ಯ ಗಳಿಂದ ಜಗತ್ತನ್ನು ನಾಶ ಮಾಡಬಹುದೇ ಹೊರತು, ಜಗತ್ತನ್ನು ಜಯಿಸಲು ಅಸಾಧ್ಯ ಎಂದರು.

ಸಭೆಯಲ್ಲಿ ವಿವಿಧ ಸಭೆಗಳ ಧರ್ಮಗುರುಗಳು ಹಾಗೂ ಕ್ರೈಸ್ತ ಭಾಂಧವರು ಭಾಗವಹಿಸಿ ಮೃತರ ಆತ್ಮಗಳಿಗೆ ಸದ್ಗತಿ ಕೋರಿ ಪ್ರಾರ್ಥಿಸಿದರು. ಸಭೆಯಲ್ಲಿ ಹಾಜರಿದ್ದ ಎಲ್ಲರೂ ಮೊಂಬತ್ತಿಗಳನ್ನು ಬೆಳಗುವುದರ ಮೂಲಕ ಮೃತ ಆತ್ಮಗಳಿಗೆ ಶಾಂತಿಯನ್ನು ಕೋರಿದರು.

ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತದ ಶ್ರೇಷ್ಠ ಗುರು ವಂ. ಡಾ. ಬ್ಯಾಪ್ಟಿಸ್ಟ್ ಮಿನೇಜಸ್, ಸಿಎಸ್‌ಐ ಸಭೆಯ ವಂ. ಸ್ಟೀವನ್ ಸರ್ವೋತ್ತಮ, ವಂ.ನೋಯೆಲ್ ಕರ್ಕಡ, ಉಡುಪಿ ಧರ್ಮಪ್ರಾಂತದ ಧರ್ಮಗುರುಗಳಾದ ವಂ.ವಿಲಿಯಂ ಮಾರ್ಟಿಸ್, ವಂ.ಲಾರೆನ್ಸ್ ಡಿಸೋಜ, ವಂ. ಫರ್ಡಿನಾಂಡ್ ಗೊನ್ಸಾಲ್ವಿಸ್, ವಂ. ಸ್ಟೀವನ್ ಡಿಸೋಜ, ವಂ.ವಿನ್ಸೆಂಟ್ ಕುವೆಲ್ಲೊ, ವಂ. ಫ್ರಾನ್ಸಿಸ್ ಕರ್ನೆಲಿಯೋ, ವಂ.ವಿಜಯ್ ಡಿಸೋಜ, ವಂ.ಜೆರಾಲ್ಡ್ ಸಂದೀಪ್ ಡಿಮೆಲ್ಲೊ, ವಂ.ಆಲ್ಫೋನ್ಸ್ ಡಿಲೀಮಾ, ವಂ.ರೋಯ್ಸನ್ ಫೆರ್ನಾಂಡಿಸ್, ಉಡುಪಿ ಧರ್ಮಪ್ರಾಂತದ ಐಸಿವೈಎಂ ಸಂಘಟನೆಯ ಅಧ್ಯಕ್ಷ ಡಿಯೋನ್ ಡಿಸೋಜಾ, ಮಹಿಳಾ ಸಂಘಟನೆಯ ಜಾನೆಟ್ ಬಾರ್ಬೋಜಾ, ಕೆಥೊಲಿಕ್ ಸಭಾದ ಆಲ್ವಿನ್ ಕ್ವಾಡ್ರಸ್ ಹಾಗೂ ಜಿಲ್ಲಾ ಮುಸ್ಲಿಂ ಒಕ್ಕೂಟದ ಯಾಸಿನ್ ಮಲ್ಪೆ ಹಾಗೂ ಮುಹಮ್ಮದ್ ಮೌಲಾ ಉಪಸ್ಥಿತರಿದ್ದರು.

ಉಡುಪಿ ಧರ್ಮಪ್ರಾಂತದ ಐಸಿವೈಎಮ್ ಸಂಘಟನೆಯ ಅಧ್ಯಕ್ಷ ಡಿಯೋನ್ ಡಿಸೋಜ ಸ್ವಾಗತಿಸಿ, ಧರ್ಮಪ್ರಾಂತದ ಪಾಲನಾ ಪರಿಷತ್ ಕಾರ್ಯದರ್ಶಿ ಆಲ್ಫೋನ್ಸ್ ಡಿಕೋಸ್ತಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X