Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸಿ: ಕೋಟ...

ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸಿ: ಕೋಟ ಮನವಿ

ವಾರ್ತಾಭಾರತಿವಾರ್ತಾಭಾರತಿ25 April 2019 8:58 PM IST
share

ಉಡುಪಿ, ಎ.25: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯಗೊಂ ಡಿರುವುದರಿಂದ ಚುನಾವಣೆಯ ಸಂದರ್ಭದಲ್ಲಿ ಜಾರಿಗೊಳಿಸಿರುವ ಚುನಾವಣಾ ನೀತಿಸಂಹಿತೆಯನ್ನು ಸಡಿಲಗೊಳಿಸುವಂತೆ ರಾಜ್ಯ ವಿಧಾನ ಪರಿಷತ್‌ನಲ್ಲಿ ವಿಪಕ್ಷದ ನಾಯಕರಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಚುನಾವಣೆ ಎ.23ಕ್ಕೆ ಮುಕ್ತಾಯಗೊಂಡಿದ್ದರೂ, ಜಿಲ್ಲಾಡಳಿತ ಸೇರಿದಂತೆ ಸರಕಾರಿ ಕಚೇರಿಗಳಲ್ಲಿ ಮೇ27ರವರೆಗೆ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುತ್ತದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ಬಜೆಟ್‌ನಲ್ಲಿ ಘೋಷಿಸಿರುವ ಅನೇಕ ಯೋಜನೆಗಳನ್ನು ಕಾರ್ಯಗತಗೊಳಿಸಲು ಅನುವು ಮಾಡಿಕೊಡದಿರುವ ಕಾರಣ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಅದರಲ್ಲೂ ಮುಖ್ಯವಾಗಿ ಬಡವರ ಹಾಗೂ ಗ್ರಾಮೀಣ ಭಾಗದ ಸರಕಾರಿ ಕಾರ್ಯಕ್ರಮಗಳ ಅನುಷ್ಠಾನ ಕುಂಠಿತಗೊಂಡಿದೆ ಎಂದವರು ಹೇಳಿದ್ದಾರೆ.

ಕೇಂದ್ರದ ಬಜೆಟ್‌ನಲ್ಲಿ ಪ್ರಸ್ತಾಪಿಸಿರುವ ಕೃಷಿ ಸಮ್ಮಾನ್ ಯೋಜನೆ ಚಾಲ್ತಿಯಲ್ಲಿರುವಾಗ ಚುನಾವಣಾ ನೀತಿ ಸಂಹಿತೆ ಹೆಸರಿನಲ್ಲಿ ಆನ್‌ಲೈನ್ ಅರ್ಜಿ ಸ್ವೀಕೃತಿಯನ್ನು ತಡೆಹಿಡಿಯಲಾಗಿತ್ತು. ಕರ್ನಾಟಕದಲ್ಲಿ ಎರಡು ಹಂತದ ಚುನಾವಣೆ ಮುಗಿದಿರುವುದರಿಂದ ಅರ್ಜಿ ಸ್ವೀಕೃತಿಯನ್ನು ಪ್ರಾರಂಭಿಸಲು ಕೃಷಿ ಇಲಾಖೆಗೆ ನಿರ್ದೇಶನ ನೀಡುವಂತೆ ಅವರು ಪತ್ರದಲ್ಲಿ ಕೋರಿದ್ದಾರೆ.

ರಾಜ್ಯದಲ್ಲಿ ಕಂದಾಯ ಇಲಾಖೆ ಕಾಯ್ದೆ ಮೂಲಕ ಜಾರಿಯಾಗುತ್ತಿರುವ ಅಕ್ರಮ-ಸಕ್ರಮ ಯೋಜನೆಯ ನಮೂನೆ 57 ಅರ್ಜಿ ಸ್ವೀಕೃತಿಯನ್ನು ಸಹ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸುವ ಮೂಲಕ ಕೂಡಲೇ ಆನ್‌ಲೈನ್ ಅರ್ಜಿ ಸ್ವೀಕೃತಿಯನ್ನು ಪ್ರಾರಂಭಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಬೇಕು ಎಂದು ತಿಳಿಸಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯ ಕ್ರಿಯಾ ಯೋಜನೆಯಲ್ಲಿ ಮಂಜೂರಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಜಿಲ್ಲಾ ಚುನಾವಣಾಧಿಕಾರಿಗಳ ಪೂರ್ವಾನು ಮತಿ ಅಗತ್ಯವಿದ್ದು, ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಮಳೆಗಾಲಕ್ಕೆ ಮುನ್ನವೇ ಹೂಳೆತ್ತುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಾಗೂ ಬಡವರಿಗೆ ಕೂಲಿ ಕೆಲಸ ನೀಡಬೇಕಾಗಿರುವ ಹಿನ್ನೆಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಚುನಾವಣಾ ನೀತಿ ಸಂಹಿತೆ ಯಿಂದ ಸಂಪೂರ್ಣ ರಿಯಾಯಿತಿ ನೀಡುವಂತೆ ಕೋರಿದ್ದಾರೆ.

ಚುನಾವಣಾ ನೀತಿ ಸಂಹಿತೆಯ ಕಾರಣಕ್ಕಾಗಿ ಮುಚ್ಚಿರುವ ಶಾಸಕರು, ಜಿಪಂ ಅಧ್ಯಕ್ಷರ ಕಚೇರಿಗಳನ್ನು ಸಾರ್ವಜನಿಕರ ದೈನಂದಿನ ಭೇಟಿಗೆ ಅನುಕೂಲ ವಾಗು ವಂತೆ ತೆರೆಯಲು ಅವಕಾಶ ನೀಡಲು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡುವಂತೆಯೂ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X