Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶ ಇನ್ನೂ ಅಸುರಕ್ಷಿತ, ಮತ ಚಲಾಯಿಸಲು...

ದೇಶ ಇನ್ನೂ ಅಸುರಕ್ಷಿತ, ಮತ ಚಲಾಯಿಸಲು ಮನಸ್ಸಿಲ್ಲ: ನಿರ್ಭಯಾ ಹೆತ್ತವರು

ವಾರ್ತಾಭಾರತಿವಾರ್ತಾಭಾರತಿ25 April 2019 9:54 PM IST
share
ದೇಶ ಇನ್ನೂ ಅಸುರಕ್ಷಿತ, ಮತ ಚಲಾಯಿಸಲು ಮನಸ್ಸಿಲ್ಲ: ನಿರ್ಭಯಾ ಹೆತ್ತವರು

ಹೊಸದಿಲ್ಲಿ,ಎ.25: ದಿಲ್ಲಿಯಲ್ಲಿ ಚುನಾವಣಾ ಪ್ರಚಾರ ಕಾವೇರುತ್ತಿದೆ,ಆದರೆ ಏಳು ವರ್ಷಗಳ ಹಿಂದೆ ಇಡೀ ದೇಶವನ್ನೇ ನಡುಗಿಸಿದ್ದ ಸಾಮೂಹಿಕ ಅತ್ಯಾಚಾರ-ಹತ್ಯೆ ಪ್ರಕರಣದಲ್ಲಿ ತಮ್ಮ ಪುತ್ರಿಯನ್ನು ಕಳೆದುಕೊಂಡಿರುವ ‘ನಿರ್ಭಯಾ’ ಹೆತ್ತವರಿಗೆ ಈ ಬಗ್ಗೆ ಯಾವುದೇ ಆಸಕ್ತಿಯಿದ್ದಂತಿಲ್ಲ. ಈ ಬಾರಿ ಚುನಾವಣೆಯಲ್ಲಿ ಮತ ಚಲಾಯಿಸುವ ಮನಸ್ಸೇ ತಮಗಿಲ್ಲ ಎಂದು ಅವರು ಹೇಳಿದ್ದಾರೆ.

ತಮಗೆ ನ್ಯಾಯದ ಭರವಸೆ ನೀಡುತ್ತಿರುವ ಮತ್ತು ಆ ಬಗ್ಗೆ ಏನನ್ನೂ ಮಾಡದೇ ನಿರ್ಲಿಪ್ತವಾಗಿರುವ ರಾಜಕೀಯ ಪಕ್ಷಗಳಿಂದ ತಾವು ರೋಸಿ ಹೋಗಿದ್ದೇವೆ. ದುಷ್ಕರ್ಮಿಗಳು ಇನ್ನೂ ಬದುಕಿದ್ದಾರೆ, ಹೀಗಾಗಿ ಪಕ್ಷಗಳು ವ್ಯಕ್ತಪಡಿಸಿದ ಸಹಾನುಭೂತಿ ಮತ್ತು ಅವುಗಳ ಭರವಸೆಗಳು ಕೇವಲ ರಾಜಕೀಯ ತಂತ್ರಗಳಾಗಿವೆ ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಬದ್ರಿನಾಥ ಸಿಂಗ್-ಆಶಾ ದೇವಿ ದಂಪತಿ ಹೇಳಿದರು. 2012,ಡಿ.16ರಂದು ರಾತ್ರಿ ದಿಲ್ಲಿಯಲ್ಲಿ ಚಲಿಸುತ್ತಿದ್ದ ಬಸ್‌ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ಕ್ರೂರವಾಗಿ ಹಿಂಸಿಸಲ್ಪಟ್ಟಿದ್ದ ನಿರ್ಭಯಾ 11 ದಿನಗಳ ಬಳಿಕ ಸಿಂಗಾಪುರದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಳು.

ನಗರದ ರಸ್ತೆಗಳು ಇನ್ನೂ ಮಹಿಳೆಯರು ಮತ್ತು ಮಕ್ಕಳಿಗೆ ಅಸುರಕ್ಷಿತವಾಗಿವೆ. ಸಿಸಿಟಿವಿ ಕ್ಯಾಮರಾಗಳನ್ನು ಇನ್ನಷ್ಟೇ ಅಳವಡಿಸಬೇಕಿದೆ. ದೇಶವು ಇನ್ನೂ ಅಸುರಕ್ಷಿತವಾಗಿದೆ. ತಮ್ಮ ಪುತ್ರಿಯರು ಮನೆಗೆ ಮರಳುವವರೆಗೆ ತಾಯಂದಿರು ಕಳವಳ ಪಡುತ್ತಲೇ ಇದ್ದಾರೆ ಎಂದ ಆಶಾ ದೇವಿ,ಜನರು ವ್ಯವಸ್ಥೆಯಲ್ಲಿ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಎಲ್ಲ ಸರಕಾರಗಳು ನಮ್ಮನ್ನು ನಿರಾಶರಾಗಿಸಿವೆ. ಈ ಬಾರಿ ಯಾವುದೇ ಪಕ್ಷಕ್ಕೆ ಮತ ನೀಡುವ ಮನಸ್ಸು ತನಗಿಲ್ಲ. ತನ್ನ ಪುತ್ರಿ ಅಮಾನುಷ ಕೃತ್ಯಕ್ಕೆ ಬಲಿಯಾಗಿ ಏಳು ವರ್ಷಗಳು ಉರುಳಿವೆ. ಆದರೆ ಮರಣ ದಂಡನೆಯ ತೀರ್ಪು ಇನ್ನೂ ಜಾರಿಯಾಗಿಲ್ಲ ಎಂದರು.

ಯಾವುದೂ ಬದಲಾಗಿಲ್ಲ, ಈ ಬಾರಿ ಮತ ಚಲಾಯಿಸುತ್ತೇನೆ ಎಂದು ತಾನು ಅಂದುಕೊಂಡಿಲ್ಲ. ವ್ಯವಸ್ಥೆಯಲ್ಲಿನ ತನ್ನ ನಂಬಿಕೆ ನಶಿಸುತ್ತಿದೆ ಎಂದ ಸಿಂಗ್,ಎಲ್ಲ ಪಕ್ಷಗಳೂ ಮಹಿಳೆಯರ ಘನತೆ ಮತ್ತು ಸಬಲೀಕರಣದ ಬಗ್ಗೆ ಮಾತನಾಡುತ್ತಿವೆ. ಆದರೆ ಅದಕ್ಕಾಗಿ ಯಾವುದೇ ಮಾರ್ಗಸೂಚಿಯನ್ನು ಹೊಂದಿಲ್ಲ ಮತ್ತು ತಮ್ಮ ಭರವಸೆಗಳನ್ನು ಈಡೇರಿಸುವ ಇಚ್ಛಾಶಕ್ತಿಯೂ ಅವುಗಳಿಗೆ ಇಲ್ಲ ಎಂದು ವಿಷಾದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X