Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮನು ಭಾಕರ್, ಸೌರಭ್‌ಗೆ ಚಿನ್ನದ ಗರಿ

ಮನು ಭಾಕರ್, ಸೌರಭ್‌ಗೆ ಚಿನ್ನದ ಗರಿ

ಐಎಸ್‌ಎಸ್‌ಎಫ್ ವಿಶ್ವಕಪ್ ಟೂರ್ನಿ

ವಾರ್ತಾಭಾರತಿವಾರ್ತಾಭಾರತಿ26 April 2019 12:20 AM IST
share
ಮನು ಭಾಕರ್, ಸೌರಭ್‌ಗೆ ಚಿನ್ನದ ಗರಿ

ಬೀಜಿಂಗ್, ಎ.25: ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್‌ನ ಮೂರನೇ ದಿನವಾದ ಗುರುವಾರ 10 ಮೀ. ಏರ್ ರೈಫಲ್ ಮಿಶ್ರ ತಂಡ ಹಾಗೂ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗಗಳಲ್ಲಿ ಭಾರತ ತಂಡ ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಟೂರ್ನಿಯಲ್ಲಿ ಪದಕದ ಖಾತೆ ತೆರೆದಿದೆ.

ಯುವ ಶೂಟರ್‌ಗಳಾದ ಮನು ಭಾಕರ್ ಹಾಗೂ ಸೌರಭ್ ಚೌಧರಿ 10 ಮೀ. ಏರ್ ಪಿಸ್ತೂಲ್‌ನ ಮಿಶ್ರ ತಂಡ ವಿಭಾಗದಲ್ಲಿ ಚಿನ್ನಕ್ಕೆ ಗುರಿಯಿಟ್ಟರು. ಇದಕ್ಕೂ ಮೊದಲು ಅಂಜುಮ್ ವೌದ್ಗಿಲ್ ಹಾಗೂ ದಿವ್ಯಾಂಶ್ ಸಿಂಗ್ ಪನ್ವಾರ್ 10 ಮೀ. ಏರ್ ರೈಫಲ್‌ನ ಮಿಶ್ರ ಟೀಮ್ ವಿಭಾಗದಲ್ಲಿ ಸ್ವರ್ಣ ಗೆದ್ದು ತಂಡದ ಪದಕ ಖಾತೆ ತೆರೆದಿದ್ದರು.

ನೂತನ ಪದ್ಧತಿಯಂತೆ, ಗರಿಷ್ಠ ಅಂಕ ಗಳಿಸಿದ ಅಗ್ರ ಎರಡು ತಂಡಗಳು ಫೈನಲ್ ಹಣಾಹಣಿ ನಡೆಸಬೇಕಿತ್ತು. ಅದರಂತೆ ಭಾರತದ ಮನು-ಸೌರಭ್ ಜೋಡಿಯು ಚೀನಾದ ಜಿಯಾಂಗ್ ರಾನ್‌ಕ್ಸಿನ್- ಪಾಂಗ್ ವೇ ಜೋಡಿಯನ್ನು 16-6 ಅಂಕಗಳ ಅಂತರದಿಂದ ಮಣಿಸಿತು. ಅರ್ಹತಾ ಸುತ್ತಿನಲ್ಲಿ 482 ಅಂಕ ಗಳಿಸಿ 5ನೇ ಸ್ಥಾನ ಪಡೆದು ಭಾರತದ ಜೋಡಿ ಫೈನಲ್ಸ್ ಪ್ರವೇಶಿಸಿತ್ತು. ಮೊದಲ ಆರು ಸರಣಿಗಳನ್ನು ಗೆದ್ದ ಈ ಜೋಡಿ ಫೈನಲ್‌ನಲ್ಲಿ ಚೀನಿ ಜೋಡಿಗೆ ಮಣ್ಣು ಮುಕ್ಕಿಸಿತು.

ಮನು-ಸೌರಭ್ ಜೋಡಿ 10 ಮೀ. ಏರ್ ಪಿಸ್ತೂಲ್ ಮಿಶ್ರ ತಂಡ ವಿಭಾಗದಲ್ಲಿ ಎರಡನೇ ಬಾರಿ ಬಂಗಾರ ಗೆದ್ದಿದೆ. ಹೊಸದಿಲ್ಲಿಯಲ್ಲಿ ಫೆಬ್ರವರಿಯಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ಬಾರಿಗೆ ಈ ಜೋಡಿ ಚಿನ್ನ ಬಾಚಿಕೊಂಡಿತ್ತು.

ಮೌದ್ಗಿಲ್-ಪನ್ವಾರ್ ಜೋಡಿಗೆ ಸ್ವರ್ಣ

ದಿನದ ಆರಂಭದಲ್ಲಿ ಅಂಜುಮ್ ವೌದ್ಗಿಲ್-ಪನ್ವಾರ್ ಜೋಡಿ ಹೋರಾಟಕಾರಿ 10 ಮೀ. ಏರ್ ರೈಫಲ್ ಮಿಶ್ರ ತಂಡ ವಿಭಾಗದ ಪಂದ್ಯದಲ್ಲಿ ಚೀನಾದ ಇನ್ನೊಂದು ಜೋಡಿ ಲಿಯು ರುಕ್ಸುವಾನ್-ಯಾಂಗ್ ಹಾವೊರಾನ್ ವಿರುದ್ಧ 17-15ರಿಂದ ಜಯದ ನಗೆ ಬೀರಿತು. ವೌದ್ಗಿಲ್-ಪನ್ವಾರ್ ಅರ್ಹತಾ ಸುತ್ತಿನಲ್ಲಿ 522.7 ಅಂಕ ಗಳಿಸಿ 6ನೇ ಸ್ಥಾನದೊಂದಿಗೆ ಫೈನಲ್ಸ್‌ಗೆ ತೆರಳಿತ್ತು. ಫೈನಲ್ ಪಂದ್ಯದಲ್ಲಿ ಒಂದು ಹಂತದಲ್ಲಿ ಈ ಜೋಡಿ 11-13ರಿಂದ ಹಿನ್ನಡೆ ಅನುಭವಿಸಿತ್ತು. ಭಾರತದ ಮತ್ತೊಂದು ಜೋಡಿ ಅಪೂರ್ವಿ ಚಾಂಡೇಲಾ ಹಾಗೂ ದೀಪಕ್ ಕುಮಾರ್ ಅರ್ಹತಾ ಸುತ್ತಿನಲ್ಲಿ 522.8 ಅಂಕ ಗಳಿಸಿ ವೌದ್ಗಿಲ್-ಪನ್ವಾರ್ ಜೋಡಿಗಿಂತ ಹೆಚ್ಚಿನ ಸ್ಥಾನ ಪಡೆದರೂ ಫೈನಲ್‌ನಲ್ಲಿ 6ನೇ ಸ್ಥಾನ ಪಡೆದು ನಿರಾಸೆ ತಂದಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X