Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉದ್ದೇಶಪೂರ್ವಕ ಸುಸ್ತಿದಾರರ ಕುರಿತು...

ಉದ್ದೇಶಪೂರ್ವಕ ಸುಸ್ತಿದಾರರ ಕುರಿತು ಮಾಹಿತಿಯನ್ನು ಆರ್‌ಬಿಐ ಬಹಿರಂಗಗೊಳಿಸಲೇಬೇಕು: ಸುಪ್ರೀಂ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ26 April 2019 7:39 PM IST
share
ಉದ್ದೇಶಪೂರ್ವಕ ಸುಸ್ತಿದಾರರ ಕುರಿತು ಮಾಹಿತಿಯನ್ನು ಆರ್‌ಬಿಐ ಬಹಿರಂಗಗೊಳಿಸಲೇಬೇಕು: ಸುಪ್ರೀಂ ಕೋರ್ಟ್

ಹೊಸದಿಲ್ಲಿ,ಎ.26: ಸರ್ವೋಚ್ಚ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪೊಂದರಲ್ಲಿ ಉದ್ದೇಶಪೂರ್ವಕ ಸುಸ್ತಿದಾರರಿಗೆ ಸಂಬಂಧಿಸಿದ ಮಾಹಿತಿಯನ್ನು ಬಹಿರಂಗಗೊಳಿಸಲು ಆರ್‌ಬಿಐ ಕರ್ತವ್ಯಬದ್ಧವಾಗಿದೆ ಎಂದು ಹೇಳಿದೆ. ಆರ್‌ಬಿಐ ಈ ಮಾಹಿತಿಯನ್ನು ಬಹಿರಂಗಗೊಳಿಸದ್ದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು ತನ್ನ ಆದೇಶವನ್ನು ಉಲ್ಲಂಘಿಸಿದರೆ ನ್ಯಾಯಾಂಗ ನಿಂದನೆ ಕ್ರಮವನ್ನು ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿತು.

ಮಾಹಿತಿಯನ್ನು ಬಹಿರಂಗಗೊಳಿಸದಿರುವ ಆರ್‌ಬಿಐ ನೀತಿಯು ತನ್ನ 2015ರ ತೀರ್ಪಿನ ಉಲ್ಲಂಘನೆಯಾಗಿದೆ ಎಂದು ಎತ್ತಿ ಹಿಡಿದ ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಎಂ.ಆರ್.ಶಾ ಅವರ ಪೀಠವು,ಈ ನೀತಿಯನ್ನು ಹಿಂದೆಗೆದುಕೊಳ್ಳುವಂತೆ ಅದಕ್ಕೆ ಆದೇಶಿಸಿತು.

ಮಾಹಿತಿ ಹಕ್ಕು ಕಾಯ್ದೆ(ಆರ್‌ಟಿಐ)ಯಡಿ ಮಾಹಿತಿಯನ್ನು ಬಹಿರಂಗಗೊಳಿಸುವಂತೆ ನ್ಯಾಯಾಲಯದ ನಿರ್ದೇಶವನ್ನು ಪಾಲಿಸದ್ದಕ್ಕಾಗಿ ಆರ್‌ಬಿಐ ಮತ್ತು ಅದರ ಮಾಜಿ ಗವರ್ನರ್ ಉರ್ಜಿತ್ ಪಟೇಲ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮವನ್ನು ಜರುಗಿಸುವಂತೆ ಕೋರಿ ಮಾಹಿತಿ ಹಕ್ಕು ಕಾರ್ಯಕರ್ತರಾದ ಗಿರೀಶ ಮಿತ್ತಲ್ ಮತ್ತು ಸುಭಾಷಚಂದ್ರ ಅಗರವಾಲ್ ಅವರು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು. ಆರ್‌ಬಿಐ ಮತ್ತು ಪಟೇಲ್ ಅವರು ಉದ್ದೇಶಪೂರ್ವಕವಾಗಿ ಸರ್ವೋಚ್ಚ ನ್ಯಾಯಾಲಯದ ತೀರ್ಪಿಗೆ ವಿಧೇಯರಾಗಿಲ್ಲ ಎಂದು ಅವರು ಅರ್ಜಿಗಳಲ್ಲಿ ದೂರಿದ್ದರು.

ಕೆಲವು ಬ್ಯಾಂಕುಗಳ ತಪಾಸಣಾ ವರದಿಗಳ ಕುರಿತು ತಾನು ಕೋರಿದ್ದ ಮಾಹಿತಿಯನ್ನು ಒದಗಿಸಲು ಆರ್‌ಬಿಐ ನಿರಾಕರಿಸಿದೆ ಎಂದು ಮಿತ್ತಲ್ ಹೇಳಿದ್ದರು.

2011,ಎಪ್ರಿಲ್‌ನಿಂದ 2015,ಡಿಸೆಂಬರ್‌ವರೆಗಿನ ಐಸಿಐಸಿಐ ಬ್ಯಾಂಕ್,ಎಕ್ಸಿಸ್ ಬ್ಯಾಂಕ್,ಎಚ್‌ಡಿಎಫ್‌ಸಿ ಬ್ಯಾಂಕ್ ಮತ್ತು ಎಸ್‌ಬಿಐಗಳ ತಪಾಸಣಾ ವರದಿಗಳ ಪ್ರತಿಗಳು ಸೇರಿದಂತೆ ಕೆಲವು ಮಾಹಿತಿಗಳನ್ನು ಕೋರಿ ಮಿತ್ತಲ್ 2015,ಡಿಸೆಂಬರ್‌ನಲ್ಲಿ ಆರ್‌ಟಿಐ ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು.

ಸಹಾರಾ ಗ್ರೂಪ್ ಆಫ್ ಕಂಪನೀಸ್ ಮತ್ತು ಆಗಿನ ಬ್ಯಾಂಕ್ ಆಫ್ ರಾಜಸ್ಥಾನ ಪ್ರಕರಣದಲ್ಲಿ ಆರ್‌ಬಿಐ ಪತ್ತೆ ಹಚ್ಚಿದ ವಿವಿಧ ಅಕ್ರಮಗಳ ಕುರಿತು ಕಡತ ಟಿಪ್ಪಣಿಗಳೊಂದಿಗೆ ಪ್ರಕರಣ ಕಡತಗಳ ಪ್ರತಿಗಳನ್ನೂ ಅವರು ಕೋರಿದ್ದರು.

ಆದರೆ ಜನವರಿ,2016ರಲ್ಲಿ ಮಾಹಿತಿಯನ್ನು ನೀಡಲು ನಿರಾಕರಿಸಿದ್ದ ಆರ್‌ಬಿಐ,ಆರ್‌ಟಿಐ ಕಾಯ್ದೆಯ ಕಲಂ 8(1)(ಇ) ಮತ್ತು ಆರ್‌ಬಿಐ ಕಾಯ್ದೆಯ ಕಲಂ 45ಎನ್‌ಬಿ ಅಡಿ ಇಂತಹ ಮಾಹಿತಿಗಳನ್ನು ಬಹಿರಂಗಗೊಳಿಸಲು ವಿನಾಯಿತಿಯಿದೆ ಎಂದು ತಿಳಿಸಿತ್ತು.

ಸರ್ವೋಚ್ಚ ನ್ಯಾಯಾಲಯವು 2016ರಲ್ಲಿ ಆರ್‌ಟಿಐ ಕಾಯ್ದೆಯಡಿ ಕೋರಲಾಗಿದ್ದ ಇಂತಹುದೇ ಮಾಹಿತಿಯನ್ನು ಬಹಿರಂಗಗೊಳಿಸುವಂತೆ ಆದೇಶಿಸಿದ್ದ ಸಂದರ್ಭದಲ್ಲಿ ಆರ್‌ಬಿಐ ಯಾವುದೇ ಬ್ಯಾಂಕಿನೊಂದಿಗೆ ವಿಶ್ವಸನೀಯ ಸಂಬಂಧವನ್ನು ಹೊಂದಿಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿತ್ತು ಎಂದು ಅರ್ಜಿದಾರರು ವಾದಿಸಿದ್ದರು.

ಆರ್‌ಬಿಐ ಪಾರದರ್ಶಕತೆಯನ್ನು ಪ್ರದರ್ಶಿಸಬೇಕು ಮತ್ತು ವ್ಯಕ್ತಿಗತವಾಗಿ ಬ್ಯಾಂಕುಗಳಿಗೆ ಮುಜುಗರವನ್ನುಂಟು ಮಾಡುವ ಮಾಹಿತಿಗಳನ್ನು ಬಚ್ಚಿಡಬಾರದು ಹಾಗೂ ಆರ್‌ಟಿಐ ಕಾಯ್ದೆಯ ನಿಯಮಗಳನ್ನು ಪಾಲಿಸಲು ಮತ್ತು ಕೋರಿದ ಮಾಹಿತಿಗಳನ್ನು ಬಹಿರಂಗಗೊಳಿಸಲು ಅದು ಕರ್ತವ್ಯಬದ್ಧವಾಗಿದೆ ಎಂದು ಎತ್ತಿ ಹಿಡಿದಿದ್ದ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಆರ್‌ಬಿಐ ಉತ್ತರಗಳು ಸಂಪೂರ್ಣವಾಗಿ ಉಲ್ಲಂಘಿಸಿವೆ ಎಂದೂ ಅರ್ಜಿದಾರರು ವಾದಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X