Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೌಹಾರ್ದಯುತ ಸಮ ಸಮಾಜ ಬೇಕು: ಪ್ರೊ.ರಹಮತ್...

ಸೌಹಾರ್ದಯುತ ಸಮ ಸಮಾಜ ಬೇಕು: ಪ್ರೊ.ರಹಮತ್ ತರಿಕೆರೆ

ವಾರ್ತಾಭಾರತಿವಾರ್ತಾಭಾರತಿ26 April 2019 9:55 PM IST
share
ಸೌಹಾರ್ದಯುತ ಸಮ ಸಮಾಜ ಬೇಕು: ಪ್ರೊ.ರಹಮತ್ ತರಿಕೆರೆ

ಬೆಂಗಳೂರು, ಎ.26: ಇಂದಿನ ಕಾಲಘಟ್ಟಕ್ಕೆ ಗಾಂಧಿ ಸೇರಿ ಹಲವು ಕನಸು ಕಂಡಿದ್ದ ಸೌಹಾರ್ದಯುತ ಸಮ ಸಮಾಜವನ್ನು ನಾವು ಕಟ್ಟಬೇಕಾಗಿದೆ ಎಂದು ಹಿರಿಯ ಸಾಹಿತಿ ಪ್ರೊ.ರಹಮತ್ ತರಿಕೆರೆ ಇಂದಿಲ್ಲಿ ಅಭಿಪ್ರಾಯಪಟ್ಟು.

ಶುಕ್ರವಾರ ನಗರದ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಯುವ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ‘ಬಾ ಮತ್ತು ಬಾಪು 150’ ವರ್ಷಚಾರಣೆ ನಿಮಿತ್ತ ಆಯೋಜಿಸಿದ್ದ ‘ರಾಜ್ಯಮಟ್ಟದ ಒಂದು ದಿನದ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ಸಹನೆ ಗಾಂಧೀಜಿ ದೇಶಕ್ಕೆ ನೀಡಿದ ದೊಡ್ಡ ಅಸ್ತ್ರ. ಅದರಲ್ಲೂ ಧಾರ್ಮಿಕ ಸಹನೆ ಅಗತ್ಯವೆಂದು ಕಲಿಸಿದರು. ಇತರರ ಧರ್ಮ, ಸಂಸ್ಕೃತಿ ಗೌರವಿಸುತ್ತಿದ್ದರು. ಗಾಂಧಿ, ಕುವೆಂಪು, ಕಾರಂತರು, ಗೊರೂರು ರಾಮಸ್ವಾಮಿ ಅಯ್ಯಂಗಾರ್, ಪು.ತಿ.ನ ಹೀಗೆ ಪ್ರತಿಯೊಬ್ಬರೂ ಸೌಹಾರ್ದಯುತ ಸಮಸಮಾಜ ಬಯಸಿದ್ದರು. ಆದರೆ, ಇಂದು ಜಾತಿ, ಧರ್ಮ, ಆಹಾರ ಕ್ರಮಕ್ಕಾಗಿ ಬೀದಿ ಬೀದಿಗಳಲ್ಲಿ ಜನರನ್ನು ಕೊಲ್ಲುತ್ತಿದ್ದೇವೆ. ಪ್ರಜಾಪ್ರಭುತ್ವವನ್ನು ರಾಜಕೀಯವಾಗಿ ನೋಡದೆ ಸಾಂಸ್ಕೃತಿಕವಾಗಿ ಧಾರ್ಮಿಕವಾಗಿ ನೋಡಬೇಕು ಎಂದು ನುಡಿದರು.

ಗಾಂಧಿ ಪ್ರಜಾಪ್ರಭುತ್ವವನ್ನು ಅರ್ಥಪೂರ್ಣಗೊಳಿಸಿದರು. ಭಾರತದ ಆತ್ಮ ಇರುವುದೇ ಬಹುತ್ವದಲ್ಲಿ. ದುರ್ಬಲರು, ಅಸಹಾಯಕರ ದನಿಗೆ ದನಿಯಾದಾಗ ಮಾತ್ರ ದೇಶ ಕಟ್ಟಲು ಸಾಧ್ಯ. ಆದರಿಂದು ಬಲಿಷ್ಠರು ಬದುಕಲು ಅನುಕೂಲಕರವಾದ ಆರ್ಥಿಕ ನೀತಿ ಅನುಸರಿಸಲಾಗುತ್ತಿದೆ. ಗಾಂಧಿವಾದಿಗಳೆಲ್ಲ ದೇಶಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡರೆ, ಇಂದು ಮಾರುಕಟ್ಟೆ ಆರ್ಥಿಕತೆ ನೀತಿ ದೇಶವನ್ನೇ ತ್ಯಾಗ ಮಾಡುತ್ತಿದೆ. ಯುದ್ಧ, ಭಾಷೆ, ಭಿನ್ನಮತದಂತಹ ಸಂದಿಗ್ಥ ಪರಿಸ್ಥಿತಿಯಲ್ಲಿ ಪ್ರಜಾಪ್ರಭುತ್ವವನ್ನು ಜೀವಂತವಾಗಿಡಲು ಗಾಂಧಿ ಸದಾ ಕಾಡುತ್ತಾರೆ ಎಂದು ಹೇಳಿದರು.

ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಆಳ್ವಿಕೆಯನ್ನು ರಾಮರಾಜ್ಯ ಎಂದಿದ್ದ ಗಾಂಧೀಜಿ ಬ್ರಿಟಿಷರ ಆಡಳಿತವನ್ನು ರಾಜಕೀಯ ದೃಷ್ಟಿಯಿಂದ ಪರಿಗಣಿಸಲಿಲ್ಲ. ಪಶ್ಚಿಮ ನಾಗರಿಕತೆಯ ವಿರೋಧಿಯಾದ ಅವರು ಯುರೋಪಿಯನ್ ಮನಸ್ಥಿತಿಯುಳ್ಳ ನೆಹರೂ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡಿದರು. ಗಾಂಧೀಜಿ ಸ್ವಾತಂತ್ರ ನಂತರದ ಭಾರತದ ಪ್ರಜಾಪ್ರಭುತ್ವಕ್ಕೆ ಒಂದು ಹೊಸ ಬುನಾದಿ ಹಾಕಿಕೊಟ್ಟರು. ಆದರೆ, ರಾಜಕೀಯ ವ್ಯವಸ್ಥೆಯನ್ನು ಪರಿಹರಿಸಲು ಪ್ರಯತ್ನಿಸಲಿಲ್ಲ ಎಂದು ವಿಶ್ಲೇಷಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X