Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕಂಚಿನ ಪದಕಕ್ಕೆ ವಿನೇಶ್ ಫೋಗಟ್ ತೃಪ್ತಿ

ಕಂಚಿನ ಪದಕಕ್ಕೆ ವಿನೇಶ್ ಫೋಗಟ್ ತೃಪ್ತಿ

ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ26 April 2019 11:57 PM IST
share
ಕಂಚಿನ ಪದಕಕ್ಕೆ ವಿನೇಶ್ ಫೋಗಟ್ ತೃಪ್ತಿ

ಕ್ಸಿಯಾನ್, ಎ.26: ಏಶ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತೆ ವಿನೇಶ್ ಫೋಗಟ್ ಇಲ್ಲಿ ನಡೆಯುತ್ತಿರುವ ಏಶ್ಯನ್ ಕುಸ್ತಿ ಚಾಂಪಿಯನ್‌ಶಿಪ್‌ನ 53 ಕೆಜಿ ವಿಭಾಗದಲ್ಲಿ ಶುಕ್ರವಾರ ಕಂಚಿನ ಪದಕಕ್ಕೆ ತೃಪ್ತಿಪಟ್ಟಿದ್ದಾರೆ.

ಜಕಾರ್ತ ಏಶ್ಯನ್ ಗೇಮ್ಸ್‌ನಲ್ಲಿ 50 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಅವರು ಚಿನ್ನ ಗೆದ್ದಿದ್ದರು. 2020 ಟೋಕಿಯೊ ಒಲಿಂಪಿಕ್ ಸ್ಪರ್ಧೆಗಳಿಗಾಗಿ ತೂಕ ವಿಭಾಗಗಳಲ್ಲಿ ಬದಲಾವಣೆಯಾದ ಬಳಿಕ ಅವರು 53 ಕೆಜಿ ವಿಭಾಗದಲ್ಲಿ ಸ್ಪರ್ಧೆ ನಡೆಸಬೇಕಿದೆ.

ಕಳೆದ ತಿಂಗಳು ಬಲ್ಗೇರಿಯದಲ್ಲಿ ನಡೆದ ಯುಡಬ್ಲುಡಬ್ಲು ಡಾನ್ ಕೊಲೊವ್ ನಿಕೊಲಾ ಪೆಟ್ರಾವ್ ಟೂರ್ನಿಯ 53 ಕೆಜಿ ವಿಭಾಗದಲ್ಲಿ ಅವರು ಸ್ಪರ್ಧಿಸಿ ಬೆಳ್ಳಿ ಪದಕ ಪಡೆದಿದ್ದರು. ಈ ಟೂರ್ನಿಯಲ್ಲಿ ಕಳಪೆ ಪ್ರದರ್ಶನದ ಮೂಲಕವೇ ಪ್ರಥಮ ಸುತ್ತಿನ ಪಂದ್ಯವನ್ನು ವಿನೇಶ್ ಆರಂಭಿಸಿದರು. ಅರ್ಹತಾ ಸುತ್ತಿನಲ್ಲಿ ಗೆದ್ದು ಬಂದ ಜಪಾನ್‌ನ ಮಯು ಮುಕೈಡಾ ವಿರುದ್ಧ 0-10ರಿಂದ ಅವರು ಸೋತರು. ಆದರೆ ಜಪಾನ್‌ನ ಅವರ ಎದುರಾಳಿ ಫೈನಲ್ ತಲುಪಿದ ಕಾರಣ ವಿನೇಶ್‌ಗೆ ರೆಪರೇಜ್ ಸುತ್ತಿನಲ್ಲಿ ಆಡುವ ಅವಕಾಶ ದೊರೆಯಿತು.

ರೆಪರೇಜ್ ಸುತ್ತಿನಲ್ಲಿ ಅವರು ತೈಪೇಯ ಜೊ ಕಿಹ್ ಚ್ಯು ವಿರುದ್ಧ 6-0 ಅಂಕಗಳಿಂದ ಜಯದ ತೋರಣ ಕಟ್ಟಿದರು. ಕಂಚಿನ ಪದಕ ಸುತ್ತಿನ ಪ್ಲೇ ಆಫ್‌ನಲ್ಲಿ ಭಾರತದ ಆಟಗಾರ್ತಿ ಚೀನಾದ ಕಿನ್ಯು ಪಾಂಗ್ ಅವರನ್ನು ಮಣಿಸಿ ಮುನ್ನುಗ್ಗಿದರು. ಮಹಿಳೆಯರ 72 ಕೆಜಿ ವಿಭಾಗದಲ್ಲಿ ಭಾರತದ ಕಿರಣ್ ಅವರು ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಕಝಕಿಸ್ತಾನದ ಝಮೀಲಾ ಬಕ್‌ಬೆರ್ಗೆನೊವಾ ವಿರುದ್ಧ 4-7 ಅಂಕಗಳ ಅಂತರದಿಂದ ಸೋಲುಂಡರು.

ಮತ್ತೊಂದು ಕಂಚು ತಂದ ಸಾಕ್ಷಿ ಮಲಿಕ್

ಒಲಿಂಪಿಕ್ ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್ ಭಾರತಕ್ಕೆ ಮತ್ತೊಂದು ಕಂಚಿನ ಪದಕ ತಂದರು. ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನ ಬೆಳ್ಳಿ ಪದಕ ವಿಜೇತ ಜಪಾನ್‌ನ ಯುಕಾಕೊ ಕವಾಯ್ ವಿರುದ್ಧ ಸಾಕ್ಷಿ ಸೋಲು ಕಂಡರು. ಆದರೆ ಕವಾಯ್ ಫೈನಲ್ ತಲುಪಿದ ಕಾರಣ ಸಾಕ್ಷಿಗೆ ರೆಪರೇಜ್ ಅವಕಾಶ ಲಭಿಸಿತು. ರೇಪರೇಜ್ ಸುತ್ತಿನಲ್ಲಿ ಕೊರಿಯದ ಜಿಯೆ ಚೊಯ್‌ರನ್ನು ಮಣಿಸಿದ ಸಾಕ್ಷಿ, ಆ ಬಳಿಕ ಕಂಚಿನ ಪದಕದ ಪ್ಲೇ ಆಫ್‌ನಲ್ಲಿ ಉತ್ತರ ಕೊರಿಯದ ಹ್ಯೋನ್ ಗ್ಯಾವೊಂಗ್‌ರನ್ನು ಸೋಲಿಸಿ ಪದಕಕ್ಕೆ ಮುತ್ತಿಕ್ಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X