Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಡಿ ಕಾರ್ಮಿಕರಿಗೆ 6000ರೂ. ಮಾಸಿಕ...

ಬೀಡಿ ಕಾರ್ಮಿಕರಿಗೆ 6000ರೂ. ಮಾಸಿಕ ಪಿಂಚಣಿ ನೀಡಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 April 2019 6:22 PM IST
share
ಬೀಡಿ ಕಾರ್ಮಿಕರಿಗೆ 6000ರೂ. ಮಾಸಿಕ ಪಿಂಚಣಿ ನೀಡಲು ಒತ್ತಾಯ

ಉಡುಪಿ, ಎ.27: ಪ್ರಸ್ತುತ ಭವಿಷ್ಯನಿಧಿ ಪಿಂಚಣಿ ಯೋಜನೆಯಲ್ಲಿ ಬೀಡಿ ಕಾರ್ಮಿಕರಿಗೆ 1,000ರೂ. ಮಾಸಿಕ ಪಿಂಚಣಿ ಲಭಿಸುತ್ತಿದ್ದು, ಬೆಲೆ ಏರಿಕೆಯಿಂದ ತತ್ತರಿಸಿರುವ ಕಾರ್ಮಿಕರಿಗೆ ಇದು ಒಂದು ಹೊತ್ತಿನ ಊಟಕ್ಕೂ ಸಾಲದಿರುವುದರಿಂದ ಅವರ ಮಾಸಿಕ ಪಿಂಚಣಿಯನ್ನು 6,000ರೂ.ಗೆ ಏರಿಕೆ ಮಾಡಿ ಜಾರಿಗೊಳಿಸುವಂತೆ ಉಡುಪಿ ತಾಲೂಕು ಬೀಡಿ ಲೇಬರ್ ಯೂನಿಯನ್‌ನ 74ನೇ ವಾರ್ಷಿಕ ಮಹಾಸಭೆ ಕೇಂದ್ರ ಸಕಾರವನ್ನು ಒತ್ತಾಯಿಸಿದೆ.

ಉಡುಪಿ ಹಿಂದಿ ಪ್ರಚಾರ ಸಮಿತಿ ಸಭಾಭವನದಲ್ಲಿ ಸಂಘದ ಅಧ್ಯಕ್ಷೆ ಶಾಂತ ನಾಯಕ್ ಇವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಮಹಾಸಭೆಯಲ್ಲಿ ಪಿಂಚಣಿ ಪರಿಷ್ಕರಣೆ, ಕನಿಷ್ಟ ಕೂಲಿ ರೂಪಾಯಿ 210ರೂ. ಜಾರಿ, ಬಾಕಿ ತುಟ್ಟಿಭತ್ಯೆ ರೂ. 12.75 ಪಾವತಿಗೆ ಒತ್ತಾಯ, ಕೋಟ್ಪಾ ಮತ್ತು ತಂಬಾಕು ನಿಷೇಧ ಕಾಯಿದೆ ಹಿಂತೆಗೆಯಲು ಒತ್ತಾಯ, ಬೀಡಿ ವೆಲ್ಫೇರ್ ಪಂಡ್ ಸೌಲಭ್ಯ ಸಮರ್ಪಕ ಜಾರಿಗೆ ಸರಕಾರವನ್ನು ಒತ್ತಾಯಿಸುವ ಹಲವು ಬೇಡಿಕೆಗಳನ್ನು ಸವಾರ್ನುಮತದಿಂದ ಅಂಗೀಕರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಭಾರತ ಕಮ್ಯುನಿಷ್ಟ್ ಪಕ್ಷದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಮಾತನಾಡಿ, ಪ್ರಸ್ತುತ ಕೇಂದ್ರ ಸರಕಾರ ಕೋಟ್ಪಾ ಕಾಯಿದೆ ಮತ್ತು ತಂಬಾಕು ನಿಷೇದ ಕಾಯ್ದೆ ಜಾರಿಗೆ ತಂದಿರುವ ಪರಿಣಾಮ ಉಭಯ ಜಿಲ್ಲೆಗಳ ಜೀವನಾಡಿಯಂತಿರುವ ಬೀಡಿ ಉದ್ಯಮ ನಶಿಸುವ ಅಂಚಿನಲ್ಲಿದೆ. ಒಂದೆಡೆ ಸರಕಾರ ಈ ಉದ್ಯಮದಿಂದ ಸಾಕಷ್ಟು ತೆರಿಗೆ ಸಂಗ್ರಹಿಸುತ್ತಿದ್ದರೂ, ಕಾರ್ಮಿಕರ ಹಿತರಕ್ಷಣೆಗೆ ಮುಂದಾಗುತ್ತಿಲ್ಲ. ಬದಲಾಗಿ ಕೈಗಾರಿಕೆಗೆ ಮಾರಕವಾದ ಕಾನೂನು ತಂದು ಕೈಗಾರಿಕೆಯನ್ನು ಬಿಕ್ಕಟ್ಟಿಗೆ ಸಿಲುಕಿಸಿದೆ ಎಂದು ಆರೋಪಿಸಿದರು.

ಬೀಡಿ ಕಾರ್ಮಿಕರಿಗೆ ಸಿಗುತ್ತಿರುವ ಕಾನೂನುಬದ್ಧ ಸವಲತ್ತುಗಳನ್ನು ವಂಚಿಸಲು ಸರಕಾರ ಮತ್ತು ಇಲಾಖೆ ಮಾಲಕರಿಗೆ ಸಹಾಯ ಮಾಡುತ್ತಿವೆ. ಸರಕಾರವೇ ರಚಿಸಿದ ಸಮಿತಿಯಲ್ಲಿ ಮಾಲಕರು ಸ್ವತಃ ಒಪ್ಪಿಕೊಂಡು ಮಂಜೂರು ಮಾಡಿರುವ ಮಜೂರಿಯನ್ನು ಜಾರಿಗೊಳಿಸದೇ ಕಾರ್ಮಿಕರಿಗೆ ವಂಚಿಸುವ ಹುನ್ನಾರ ಮುಂದುವರಿದಿರುವುದು ದುರದೃಷ್ಟಕರ ಎಂದು ಟೀಕಿಸಿದರು.

ಎಸ್.ಕೆ. ಬೀಡಿ ವರ್ಕರ್ಸ್‌ ಫೆಡರೇಶನ್ (ಎಐಟಿಯುಸಿ)ನ ಪ್ರಧಾನ ಕಾರ್ಯದರ್ಶಿ ವಿ.ಸೀತಾರಾಂ ಬೇರಿಂಜ ಮಾತನಾಡಿ ಭವಿಷ್ಯನಿಧಿ ಇಲಾಖೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಲು ಕಡ್ಡಾಯಗೊಳಿಸಿರುವುದರಿಂದ ಅವಿದ್ಯಾವಂತ ಬಡ ಕಾರ್ಮಿಕರು ತಾನು ಕಷ್ಟಪಟ್ಟು ದುಡಿದು, ಹಣವನ್ನು ಭವಿಷ್ಯನಿಧಿಯಲ್ಲಿ ಕೂಡಿಟ್ಟು, ಅದನ್ನು ತನಗೆ ಬೇಕಾದಾಗ ವಾಪಾಸು ಪಡೆಯಲು ಪರದಾಡುವ ಪರಿಸ್ಥಿತಿ ಇದೆ. ಈ ಸಮಸ್ಯೆ ಬಗೆಹರಿಸಿ, ಕಾರ್ಮಿಕರ ಕಷ್ಟವನ್ನು ದೂರ ಮಾಡಲು, ಭವಿಷ್ಯನಿಧಿ ಇಲಾಖೆ ಮತ್ತು ಕೇಂದ್ರ ಸರಕಾರ ತಕ್ಷಣ ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿದರು.

ಪಾಣೆಮಂಗಳೂರು ಫಿರ್ಕಾ ಬೀಡಿ ಮತ್ತುಜನರಲ್ ವರ್ಕರ್ಸ್‌ ಯೂನಿಯನ್ ಪ್ರಧಾನ ಕಾರ್ಯದರ್ಶಿ ಸುರೇಶ್ ಕುಮಾರ್, ಅಧ್ಯಕ್ಷೆ ಸರಸ್ವತಿ ಕಡೇಶ್ವಾಲ್ಯ, ದಕ್ಷಿಣ ಕನ್ನಡ ಜಿಲ್ಲಾ ಕಟ್ಟಡ ಮತ್ತು ಕೋರೆ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಎಂ. ಕರುಣಾಕರ, ಎಐಟಿಯುಸಿ ನಾಯಕರಾದ ಬಿ. ಶೇಖರ್, ಸಂಜೀವ ಶೇರಿಗಾರ್, ಸೋಮಪ್ಪಜತ್ತನ್ನ, ಆನಂದ ಪೂಜಾರಿ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಘದ ಕಾರ್ಯದರ್ಶಿ ಶಶಿಕಲ ಗಿರೀಶ್ ಸಂಘದ ವರದಿ ಮಂಡಿಸಿದರು. ಗತವರ್ಷದ ಲೆಕ್ಕಪತ್ರವನ್ನು ಕೋಶಾಧಿಕಾರಿ ಕೆ.ವಿ. ಭಟ್ ಮಂಡಿಸಿದರು. ವರದಿ ಮತ್ತು ಲೆಕ್ಕಪತ್ರದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆದು, ಸರ್ವಾನುಮತದಿಂದ ಅಂಗೀಕರಿಸಿತು. ಖಜಾಂಚಿ ಕೆ.ವಿ. ಭಟ್ಸ್ವಾಗತಿಸಿ, ಕೊನೆಯಲ್ಲಿ ವಂದಿಸಿದರು.

ಸಂಘಕ್ಕೆ ಆಯ್ಕೆ: ಸಭೆಯಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಸುಮಾರು 54 ಜನರಿರುವ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು. ಶಾಂತ ನಾಯಕ್ ಅಧ್ಯಕ್ಷರು, ಸುಮತಿ ಶೆಟ್ಟಿ, ಆನಂದ ಪೂಜಾರಿ, ಅಪ್ಪಿಶೇರಿಗಾರ್ತಿ ಉಪಾಧ್ಯಕ್ಷರು, ಶಶಿಕಲ ಗಿರೀಶ್ ಪ್ರಧಾನ ಕಾರ್ಯದರ್ಶಿ,ಸಂಜೀವ ಶೆಟ್ಟಿಗಾರ್, ವಾರಿಜ ನಾಯ್ಕಿ ಆತ್ರಾಡಿ, ಸುಚಿತ್ರ ಸಹ ಕಾರ್ಯದರ್ಶಿ ಹಾಗೂ ಕೆ.ವಿ.ಭಟ್ ಕೋಶಾಧಿಕಾರಿಯಾಗಿ ಆಯ್ಕೆಗೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X