Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀಲಂಕಾ ಸ್ಫೋಟ: ನೂರಾರು ಜನರ ರಕ್ಷಿಸಲು...

ಶ್ರೀಲಂಕಾ ಸ್ಫೋಟ: ನೂರಾರು ಜನರ ರಕ್ಷಿಸಲು ತನ್ನ ಪ್ರಾಣ ಅರ್ಪಿಸಿದ ‘ಹೀರೊ’ ಬಗ್ಗೆ ನಿಮಗೆಷ್ಟು ಗೊತ್ತು?

ವಾರ್ತಾಭಾರತಿವಾರ್ತಾಭಾರತಿ27 April 2019 10:20 PM IST
share
ಶ್ರೀಲಂಕಾ ಸ್ಫೋಟ: ನೂರಾರು ಜನರ ರಕ್ಷಿಸಲು ತನ್ನ ಪ್ರಾಣ ಅರ್ಪಿಸಿದ ‘ಹೀರೊ’ ಬಗ್ಗೆ ನಿಮಗೆಷ್ಟು ಗೊತ್ತು?

ಬಟ್ಟಿಕಲೋವ (ಶ್ರೀಲಂಕಾ), ಎ. 27: ಈಸ್ಟರ್ ರವಿವಾರದಂದು ಶ್ರೀಲಂಕದ ಬಟ್ಟಿಕಲೋವದಲ್ಲಿರುವ ಝಯನ್ ಇವ್ಯಾಂಜಲಿಕಲ್ ಚರ್ಚ್‌ನಲ್ಲಿ ಆತ್ಮಹತ್ಯಾ ಬಾಂಬರ್‌ನನ್ನು ತಡೆದು ತಾನು ಮೃತಪಟ್ಟ ರಮೇಶ್ ರಾಜು ಈಗ ನಗರದ ಹೀರೋ ಆಗಿದ್ದಾರೆ. ತನ್ನ ಈ ಪರಮ ತ್ಯಾಗದ ಮೂಲಕ ಅವರು ನೂರಾರು ಮಂದಿಯ ಪ್ರಾಣವನ್ನು ಉಳಿಸಿದ್ದಾರೆ.

ಎರಡು ಮಕ್ಕಳ ತಂದೆಯಾಗಿರುವ 40 ವರ್ಷದ ರಾಜು ಆತ್ಮಹತ್ಯಾ ಬಾಂಬರ್‌ನನ್ನು ಚರ್ಚ್‌ನ ಬಾಗಿಲಲ್ಲೇ ತಡೆದು ನಿಲ್ಲಿಸಿದ್ದರು.

ಈ ಸ್ಫೋಟದಲ್ಲಿ ರಾಜು ಸೇರಿದಂತೆ 29 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಪೈಕಿ 14 ಮಂದಿ ಮಕ್ಕಳು.

ಅದೇ ವೇಳೆ, ಚರ್ಚ್‌ನ ಒಳಗಿದ್ದ ಸುಮಾರು 600 ಮಂದಿ ಮಾನವ ಬಾಂಬರ್‌ನ ದಾಳಿಯಿಂದ ಪಾರಾಗಿದ್ದಾರೆ.

‘‘ಬಾಂಬರ್‌ನ ಬಗ್ಗೆ ಸಂಶಯ ಬಂದಾಗ ನನ್ನ ಮಗ ಸುರಕ್ಷಿತ ಸ್ಥಳಕ್ಕೆ ಓಡಿಹೋಗಬಹುದಿತ್ತು ಹಾಗೂ ತನ್ನ ಪ್ರಾಣವನ್ನು ಉಳಿಸಿಕೊಳ್ಳಬಹುದಿತ್ತು. ಆದರೆ, ಹಾಗೆ ಮಾಡುವ ಬದಲು, ಬಾಂಬರ್‌ನನ್ನು ಚರ್ಚ್‌ನ ದ್ವಾರದಲ್ಲೇ ತಡೆದು ನಿಲ್ಲಿಸಲು ಅವನು ಮುಂದಾದನು’’ ಎಂದು ರಾಜು ತಂದೆ ವೇಲುಸಾಮಿ ರಾಜು ಎಎಫ್‌ಪಿ ಸುದ್ದಿ ಸಂಸ್ಥೆಗೆ ಹೇಳಿದರು.

‘‘ಅವನು ತುಂಬಾ ಮಂದಿಯ ಪ್ರಾಣಗಳನ್ನು, ಅದರಲ್ಲೂ ಮುಖ್ಯವಾಗಿ ಅಷ್ಟೊಂದು ಮಕ್ಕಳ ಪ್ರಾಣಗಳನ್ನು ರಕ್ಷಿಸಿದ ಬಗ್ಗೆ ನನಗೆ ಅತೀವ ಅಭಿಮಾನವಿದೆ’’ ಎಂದು ಅವರು ಹೇಳಿದರು.

ಎರಡು ದೊಡ್ಡ ಚೀಲಗಳನ್ನು ಹೊತ್ತಿದ್ದ ಅಪರಿಚಿತ ವ್ಯಕ್ತಿಯೊಬ್ಬ ಚರ್ಚ್‌ನ ಒಳಗೆ ಬರುತ್ತಿದ್ದಾಗ, ಅವನನ್ನು ತಡೆದ ರಾಜು ಚೀಲಗಳನ್ನು ಹೊರಗೆ ಇಡುವಂತೆ ಸೂಚಿಸಿದರು. ವಾದ-ಪ್ರತಿವಾದದ ವೇಳೆ ಬಾಂಬ್ ಸ್ಫೋಟಗೊಂಡಿತು.

ಆ ಸಮಯದಲ್ಲಿ ಹೊರಗಿದ್ದ ಮಕ್ಕಳು ಮತ್ತು ಅವರ ಹೆತ್ತವರು ರಾಜು ಜೊತೆಗೆ ಪ್ರಾಣ ಕಳೆದುಕೊಂಡರು.

ರಾಜು ಅವರ ತಂಗಿ, ಗಂಡ ಮತ್ತು 20 ತಿಂಗಳ ಮಗ ಕೂಡ ಸ್ಫೋಟದಲ್ಲಿ ಮೃತಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X