Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತನ್ನ ತಂದೆಯ ಕುರಿತು ಪ್ರಜ್ಞಾ ಸಿಂಗ್...

ತನ್ನ ತಂದೆಯ ಕುರಿತು ಪ್ರಜ್ಞಾ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕರ್ಕರೆ ಪುತ್ರಿ ಹೇಳಿದ್ದೇನು?

ಜೂಹಿ ಕರ್ಕರೆಯ ಪ್ರಶ್ನೆಗಳಿಗೆ ಉತ್ತರಿಸುವವರು ಯಾರು?

ವಾರ್ತಾಭಾರತಿವಾರ್ತಾಭಾರತಿ27 April 2019 10:59 PM IST
share
ತನ್ನ ತಂದೆಯ ಕುರಿತು ಪ್ರಜ್ಞಾ ಸಿಂಗ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕರ್ಕರೆ ಪುತ್ರಿ ಹೇಳಿದ್ದೇನು?

ಮುಂಬೈ: ಹುತಾತ್ಮ ಐಪಿಎಸ್ ಅಧಿಕಾರಿ ಹೇಮಂತ್ ಕರ್ಕರೆ ಕುರಿತ ಬಿಜೆಪಿ ಅಭ್ಯರ್ಥಿ ಹಾಗೂ ಮಾಲೆಂಗಾವ್ ಸ್ಫೋಟ ಆರೋಪಿ ಪ್ರಜ್ಞಾ ಸಿಂಗ್ ನೀಡಿದ ವಿವಾದಾತ್ಮಕ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಈ ಬಗ್ಗೆ ಕರ್ಕರೆ ಪುತ್ರಿ ಮಾತನಾಡಿದ್ದಾರೆ.

ಅಮೆರಿಕದಲ್ಲಿ ನೆಲೆಸಿರುವ ಕರ್ಕರೆಯ ಪುತ್ರಿ ಜೂಹಿ ಕರ್ಕರೆ ಹಿಂದಿ ಪತ್ರಿಕೆ ‘ದೈನಿಕ್ ಭಾಸ್ಕರ್’ ಜೊತೆ ಮಾತನಾಡಿದ್ದು, ಕರ್ಕರೆ ಕುರಿತು ಕೀಳುಮಟ್ಟದ ಹೇಳಿಕೆ ನೀಡಿರುವುದನ್ನು ತಾನು ಮತದಾರರ ವಿವೇಚನೆಗೆ ಬಿಟ್ಟಿದ್ದೇನೆ. ಮತದಾರರು ಬಹಳ ಜಾಣರು, ಅವರೇ ಇದಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಹುತಾತ್ಮರ ಬಗ್ಗೆ ಕೀಳುಮಟ್ಟದ ಹೇಳಿಕೆ ನೀಡುವವರ ಯಾವುದೇ ತಂತ್ರ ಮತದಾರರ ಮುಂದೆ ಫಲಿಸದು ಎಂದು ಜೂಹಿ ಕರ್ಕರೆ ಹೇಳಿದ್ದಾರೆ.

ನನ್ನ ತಂದೆಯ ಸಾವಿನ ಬಗ್ಗೆ ಕೆಲವು ರಾಜಕಾರಣಿಗಳು ನೀಚ ಹೇಳಿಕೆಗಳನ್ನು ಚುನಾವಣಾ ಲಾಭಕ್ಕಾಗಿ ನೀಡುತ್ತಿದ್ದಾರೆ. ಇಂತಹ ನೇತಾಗಳಿಗೆ ನಾನು ಏನೂ ಹೇಳಬಯಸುವುದಿಲ್ಲ, ಹೇಳಿದರೆ ಅವರಿಗೆ ಇದು ಮನವರಿಕೆಯೂ ಆಗದು.ಇನ್ನು ಅವರಿಗೆ ಪ್ರತಿಕ್ರಿಯಿಸುವ ಮೂಲಕ ಮಹತ್ವ ನೀಡಲು ನಾನು ಬಯಸುವುದಿಲ್ಲ ಎಂದು ಜೂಹಿ ಪ್ರತಿಕ್ರಿಯಿಸಿದ್ದಾರೆ.

ನನ್ನ ತಂದೆಯ ಬಗ್ಗೆ ಪ್ರಜ್ಞಾಸಿಂಗ್ ನಿಡಿದ್ದ ಹೇಳಿಕೆಯನ್ನು ಕೇಳಿ ನನಗೆ ನನ್ನ ತಾಯಿ ಬರೆದಿದ್ದ ಕವನ ನೆನಪಾಯಿತು. ನನ್ನ ಪತಿ ಹುತಾತ್ಮರಾದ ಬಗ್ಗೆ ನನಗೆ ದುಃಖಯಿದೆ ಆದರೆ ಆ ಕುರಿತು ವಿಷಾದವಿಲ್ಲ. ಅದರ ಬಗ್ಗೆ ಕೆಲವು ಪ್ರಶ್ನೆಗಳು ನನ್ನ ಮನಸ್ಸಿನಲ್ಲಿ ಏಳುತ್ತಿವೆ. ಆದರೆ ಅವುಗಳ ಉತ್ತರ ಸಿಗುತ್ತಿಲ್ಲ ಎಂದು ತಾಯಿ ಕವಿತೆಯಲ್ಲಿ ಬರೆದಿದ್ದರು. ನನ್ನ ತಂದೆ ನಿಧನರಾದಾಗ ಅವರಿಗೆ ಹೀರೋಗಿರಿಯ ಚಪಲವಿತ್ತು ಎಂದು ಹೇಳಿದವರೂ ಇದ್ದರು. ಆದರೆ ಅವರ ದೇಶಭಕ್ತಿಗೆ ಅವರು ಹುತಾತ್ಮರಾಗಿರುವುದೇ ಬಹುದೊಡ್ಡ ಸಾಕ್ಷಿಯಾಗಿದೆ. ಈಗ ಈ ದೇಶಕ್ಕಾಗಿ ಜೀವ ಕೊಟ್ಟವರ ಬಗ್ಗೆ ಇವರು(ಪ್ರಜ್ಞಾ ಸಿಂಗ್) ಮಾತನಾಡುತ್ತಿದ್ದಾರೆ.

ಸಾಪ್ಟ್ ವೇರ್ ಇಂಜಿನಿಯರ್ ಆಗಿರುವ ಜೂಹಿ ಕರ್ಕರೆ ಅಮೆರಿಕಾದ ಬಾಸ್ಟನ್ ನಲ್ಲಿ ತಮ್ಮ ಪತಿ ಹಾಗು ಇಬ್ಬರು ಮಕ್ಕಳೊಂದಿಗೆ ನೆಲೆಸಿದ್ದಾರೆ. ಅವರ ಹಿರಿಯ ಸೋದರ ಹಾಗೂ ಸೋದರಿ ತಂದೆ ಹಾಗು ತಾಯಿಯ ನಿಧನದ ಬಳಿಕ ಸಾರ್ವಜನಿಕರಿಂದ ಅಂತರ ಕಾಯ್ದುಕೊಂಡು ಬದುಕುತ್ತಿದ್ದಾರೆ.

ತಮ್ಮ ತಂದೆಯ ಕೊಲೆಯಾದ ಬಗ್ಗೆ ಇಂದಿಗೂ ಕೇಳಿ ಬರುತ್ತಿರುವ ಪ್ರಶ್ನೆಗಳ ಕುರಿತು ಮಾತನಾಡಿರುವ ಜೂಹಿ, ನನ್ನ ತಂದೆ ಹಾಗು ಅಶೋಕ್ ಕಾಮ್ಟೆ( ಮುಂಬೈ ಭಯೋತ್ಪಾದನಾ ದಾಳಿಯಲ್ಲಿ ನಿಧನರಾದ ಇನ್ನೊಬ್ಬ ಐಪಿಎಸ್ ಅಧಿಕಾರಿ) ಅವರ ಕೊನೆಯ ಫೋನ್ ಕಾಲ್ ಗಳ ವಿವರಗಳು ನನ್ನ ಬಳಿ ಹಾಗು ಕಾಮ್ಟೆ ಅವರ ಪತ್ನಿ ವಿನೀತ ಬಳಿ ಇವೆ. ಕಾಮಾ ಆಸ್ಪತ್ರೆಯ ಮೇಲೆ ಮುತ್ತಿಗೆ ಹಾಕಲು ಸೇನೆಯನ್ನು ಕಳಿಸಬೇಕು ಎಂದು ಕಂಟ್ರೋಲ್ ರೂಮ್ ಗೆ ಹೇಳಿದ್ದರು. ಕಂಟ್ರೋಲ್ ರೂಂನಲ್ಲಿ ನಗರದ ಹೆಚ್ಚುವರಿ ಪೊಲೀಸ್ ಕಮಿಷನರ್ ಇರಬೇಕಾಗಿತ್ತು. ಆದರೆ ಅವರು ಇರಲಿಲ್ಲ. ಈ ಮೂವರು ಅಧಿಕಾರಿಗಳು(ಕರ್ಕರೆ,ಕಾಮ್ಟೆ,ಸಾಲಸ್ಕರ್) ದಾಳಿ ಯೋಜನೆ ಪೂರ್ಣಗೊಳಿಸುವಲ್ಲಿ ನಿಪುಣರಾಗಿದ್ದರು. ಆದರೂ ಹೀಗೆಲ್ಲಾ ಆಗಿ ಹೋಯಿತು. ಇವತ್ತಿಗೂ ಈ ಪ್ರಶ್ನೆ ನನ್ನನ್ನು ಕಾಡುತ್ತಲೇ ಇವೆ ಎಂದು ಜೂಹಿ ಹೇಳಿದ್ದಾರೆ.

ಕೃಪೆ: bhaskar.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X