Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಗ್ಗದ ಜೀವರಕ್ಷಕ ಔಷಧಗಳ ಮೇಲೆ ಅಮೆರಿಕ...

ಅಗ್ಗದ ಜೀವರಕ್ಷಕ ಔಷಧಗಳ ಮೇಲೆ ಅಮೆರಿಕ ದಾಳಿ: ಭಾರತ ತೀಕ್ಷ್ಣ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ28 April 2019 9:19 AM IST
share
ಅಗ್ಗದ ಜೀವರಕ್ಷಕ ಔಷಧಗಳ ಮೇಲೆ ಅಮೆರಿಕ ದಾಳಿ: ಭಾರತ ತೀಕ್ಷ್ಣ ಪ್ರತಿಕ್ರಿಯೆ

ಹೊಸದಿಲ್ಲಿ, ಎ.28: ಭಾರತ, ಇಡೀ ವಿಶ್ವಕ್ಕೆ ನಕಲಿ ಔಷಧಿಗಳನ್ನು ಪೂರೈಸುವ ಪ್ರಮುಖ ಮೂಲ ಎಂದು ಅಮೆರಿಕದ ವರದಿ ಆಪಾದಿಸಿರುವುದನ್ನು ಭಾರತ ಕಟುವಾಗಿ ಟೀಕಿಸಿದೆ. ಆರೋಗ್ಯಸೇವೆಯನ್ನು ಎಲ್ಲರ ಕೈಗೆಟುಕುವಂತೆ ಮಾಡುವಲ್ಲಿ ಕಡಿಮೆ ವೆಚ್ಚದ ಜೀವರಕ್ಷಕ ಔಷಧಗಳು ಪ್ರಮುಖವಾಗುತ್ತವೆ ಎಂದು ಭಾರತ ಸಮರ್ಥಿಸಿಕೊಂಡಿದೆ.

ಅಮೆರಿಕದ ವ್ಯಾಪಾರ ಪ್ರತಿನಿಧಿಗಳ "ಸ್ಪೆಷಲ್ 301 ರಿಪೋರ್ಟ್"ನಲ್ಲಿ ಜಾಗತಿಕವಾಗಿ ಸರಬರಾಜು ಆಗುವ ನಕಲಿ ಔಷಧಿಗಳ ಮೂಲಕ ಭಾರತ ಹಾಗೂ ಚೀನಾ ಎಂದು ಆಪಾದಿಸಲಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ಮಾರಾಟವಾಗುವ ಶೇಕಡ 20ರಷ್ಟು ಔಷಧಿಗಳು ನಕಲಿ ಎಂದು ವರದಿ ಹೇಳಿತ್ತು.

"ಅಮೆರಿಕ ವ್ಯಾಪಾರ ಪ್ರತಿನಿಧಿಗಳ ವರದಿಯನ್ನು ನಾವು ಬಲವಾಗಿ ಅಲ್ಲಗಳೆಯುತ್ತೇವೆ. ಈ ಹೇಳಿಕೆಗೆ ಆಧಾರ ಮತ್ತು ಯಾವ ವಿಧಾನವನ್ನು ಅನುಸರಿಸಿ ಅಧ್ಯಯನ ಮಾಡಲಾಗಿದೆ ಎನ್ನುವುದು ತಿಳಿಯದು. ಬದಲಾಗಿ ನಾವು ಇದನ್ನು ಅಗ್ಗದ ಜೀವರಕ್ಷಕ ಔಷಧಿಗಳಿಗೆ ವಿರೋಧ ಎಂದು ಪರಿಗಣಿಸುತ್ತೇವೆ. ಸಮೃದ್ಧವಾಗಿ ಬೆಳೆಯುತ್ತಿರುವ ಭಾರತೀಯ ಔಷಧ ಉತ್ಪಾದನೆ ಉದ್ಯಮ ವಿಶ್ವದ ಫಾರ್ಮಸಿಯಾಗಿ ಬೆಳೆಯುತ್ತಿದೆ" ಎಂದು ಆರೋಗ್ಯ ಕಾರ್ಯದರ್ಶಿ ಪ್ರೀತಿ ಸುದಾನ್ ಹೇಳಿಕೆ ನೀಡಿದ್ದಾರೆ.

ಅಮೆರಿಕದ ವ್ಯಾಪಾರಿ ಪಾಲುದಾರ ದೇಶಗಳಲ್ಲಿ ಬೌದ್ಧಿಕ ಆಸ್ತಿಯ ಸಂರಕ್ಷಣೆ ಮತ್ತು ಕಾನೂನು ಜಾರಿ ಕುರಿತ ಯುಎಸ್‌ಟಿಆರ್ ವರದಿಯಲ್ಲಿ ಭಾರತವನ್ನು ಬೌದ್ಧಿಕ ಆಸ್ತಿ ಹಕ್ಕುಗಳ ಉಲ್ಲಂಘನೆಗಾಗಿ ಆದ್ಯತೆಯ ಮೇಲೆ ನಿಗಾ ಇಡಬೇಕಾದ ಪಟ್ಟಿಯಲ್ಲಿ ಇಡಲಾಗಿದೆ.

ಜೀವರಕ್ಷಕ ಔಷಧಿಗಳು ಕಡಿಮೆ ವೆಚ್ಚದ್ದಾಗಿದ್ದರೂ ಗುಣಮಟ್ಟದ ಉತ್ಪನ್ನಗಳು. ಕೇವಲ ಪ್ರಮಾಣಿತ ಫಾರ್ಮಸ್ಯೂಟಿಕಲ್ ಉತ್ಪನ್ನಗಳನ್ನು ಮಾತ್ರ ಇಲ್ಲಿಂದ ರಫ್ತು ಮಾಡಲಾಗುತ್ತದೆ. ಸ್ಥಳೀಯವಾಗಿ ಶೇಕಡ 75ಕ್ಕೂ ಅಧಿಕ ಮಾರಾಟ ಜೀವರಕ್ಷಕ ಔಷಧಿಗಳಿಂದ ಆಗುತ್ತದೆ ಎಂದು ಸುದಾನ್ ಸಮರ್ಥಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X