Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಜ್ಞಾ ಠಾಕೂರ್, ಮಸೂದ್‌ಗೆ ಶಾಪ...

ಪ್ರಜ್ಞಾ ಠಾಕೂರ್, ಮಸೂದ್‌ಗೆ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವಿರಲಿಲ್ಲ: ದಿಗ್ವಿಜಯ್ ಸಿಂಗ್ ವ್ಯಂಗ್ಯ

ವಾರ್ತಾಭಾರತಿವಾರ್ತಾಭಾರತಿ28 April 2019 11:56 AM IST
share
ಪ್ರಜ್ಞಾ ಠಾಕೂರ್, ಮಸೂದ್‌ಗೆ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್ ಅಗತ್ಯವಿರಲಿಲ್ಲ: ದಿಗ್ವಿಜಯ್ ಸಿಂಗ್ ವ್ಯಂಗ್ಯ

 ಭೋಪಾಲ್, ಎ.28: ಪಾಕಿಸ್ತಾನ ಮೂಲದ ಉಗ್ರಗಾಮಿ ಸಂಘಟನೆ ಜೈಶ್-ಇ-ಮುಹಮ್ಮದ್‌ನ ಮುಖ್ಯಸ್ಥ ಮಸೂದ್ ಅಝರ್‌ಗೆ  ಪ್ರಜ್ಞಾ ಸಿಂಗ್ ಠಾಕೂರ್ ಶಾಪ ನೀಡಿದ್ದರೆ, ನಿರ್ದಿಷ್ಟ ದಾಳಿ(ಸರ್ಜಿಕಲ್‌ ಸ್ಟ್ರೈಕ್ )ನಡೆಸುವ ಅಗತ್ಯವೇ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಭೋಪಾಲ್ ಸಂಸದೀಯ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ದಿಗ್ವಿಜಯ್ ಸಿಂಗ್ ತನ್ನ ಎದುರಾಳಿ ಬಿಜೆಪಿ ಅಭ್ಯರ್ಥಿಯನ್ನು ವ್ಯಂಗ್ಯವಾಡಿದ್ದಾರೆ.

ತನ್ನ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ದಿಗ್ವಿಜಯ್ ಸಿಂಗ್,‘‘ದೇಶಕ್ಕಾಗಿ ಮಹಾನ್ ತ್ಯಾಗ ಮಾಡಿ ಹುತಾತ್ಮರೆನಿಸಿಕೊಂಡಿರುವ ಭಯೋತ್ಪಾದನೆ ನಿಗ್ರಹ ದಳ(ಎಟಿಎಸ್)ಮುಖ್ಯಸ್ಥ ಹೇಮಂತ್ ಕರ್ಕರೆ ಅವರಿಗೆ ಶಾಪ ನೀಡಿದ್ದಾಗಿ ಪ್ರಜ್ಞಾ ಠಾಕೂರ್ ಹೇಳಿಕೊಂಡಿದ್ದಾರೆ. ಮಸೂದ್ ಅಝರ್‌ಗೂ ಶಾಪ ನೀಡಿದ್ದರೆ ಸರ್ಜಿಕಲ್ ಸ್ಟ್ರೈಕ್  ನಡೆಸುವ ಅಗತ್ಯವೇ ಇರಲಿಲ್ಲ’’ ಎಂದರು.

  ನಾನು ನೀಡಿದ ಶಾಪದಿಂದಾಗಿ ಹೇಮಂತ್ ಕರ್ಕೆರ ಸಾವನ್ನಪ್ಪಿದ್ದಾರೆ ಎಂದು 2008ರ ಮಾಲೆಗಾಂವ್ ಸ್ಫೋಟ ಪ್ರಕರಣದ ಆರೋಪಿ ಠಾಕೂರ್ ಇತ್ತೀಚೆಗೆ ಹೇಳಿಕೆ ನೀಡಿದ್ದು, ಆಕೆಯ ಈ ಹೇಳಿಕೆಯನ್ನು ಎಲ್ಲರೂ ತೀವ್ರವಾಗಿ ಖಂಡಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಸಹಿತ ಬಿಜೆಪಿಯ ಹಲವು ನಾಯಕರು ಭೋಪಾಲ್‌ನಿಂದ ಪ್ರಜ್ಞಾ ಠಾಕೂರ್ ಸ್ಪರ್ಧಿಸುತ್ತಿರುವುದನ್ನು ಸಮರ್ಥಿಸಿಕೊಂಡಿದ್ದರು.

ಪ್ರಧಾನಿ ವಿರುದ್ಧ ಹರಿಹಾಯ್ದ ದಿಗ್ವಿಜಯ್ ಸಿಂಗ್,‘‘ಭಯೋತ್ಪಾದಕರು ನರಕದಲ್ಲಿ ಅಡಗಿ ಕುಳಿತ್ತಿದ್ದರೂ ಅವರನ್ನು ಹುಡುಕಿ ಬೇಟೆಯಾಗುತ್ತೇವೆ ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ದೇಶದಲ್ಲಿ ಪುಲ್ವಾಮ, ಪಠಾಣ್‌ಕೋಟ್ ಹಾಗೂ ಉರಿಯಲ್ಲಿ ಉಗ್ರರ ದಾಳಿ ನಡೆದಾಗ ಪ್ರಧಾನಿ ಎಲ್ಲಿ ಹೋಗಿದ್ದರು ಎಂದು ಕೇಳಲು ಬಯಸುವೆ. ಇಂತಹ ದಾಳಿಗಳನ್ನು ತೊಡೆದುಹಾಕಲು ನಿಮ್ಮಿಂದೇಕೆ ಸಾಧ್ಯವಾಗಲಿಲ್ಲ’’ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X