Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀಲಂಕಾ ಸ್ಫೋಟ ಹಿನ್ನೆಲೆ: ಚರ್ಚ್...

ಶ್ರೀಲಂಕಾ ಸ್ಫೋಟ ಹಿನ್ನೆಲೆ: ಚರ್ಚ್ ಎದುರು ಒಗ್ಗಟ್ಟಿನ ಸಂದೇಶ ಸಾರಿದ ಮೈಸೂರಿನ ಮುಸ್ಲಿಮರು

ವಾರ್ತಾಭಾರತಿವಾರ್ತಾಭಾರತಿ28 April 2019 12:18 PM IST
share
ಶ್ರೀಲಂಕಾ ಸ್ಫೋಟ ಹಿನ್ನೆಲೆ: ಚರ್ಚ್ ಎದುರು ಒಗ್ಗಟ್ಟಿನ ಸಂದೇಶ ಸಾರಿದ ಮೈಸೂರಿನ ಮುಸ್ಲಿಮರು

ಮೈಸೂರು, ಎ.28: ಶ್ರೀಲಂಕಾದಲ್ಲಿ ಸರಣಿ ಸ್ಫೋಟಗಳ ಹಿನ್ನೆಲೆಯಲ್ಲಿ ನಗರದ ಸೈಂಟ್ ಫಿಲೋಮಿನಾ ಚರ್ಚಿನಲ್ಲಿ ಇಂದು ಬೆಳಗ್ಗೆ ಪ್ರಾರ್ಥನೆಯ ಸಂದರ್ಭ ಮುಸ್ಲಿಮರು ಚರ್ಚ್ ಹೊರಗೆ ನಿಂತು ‘ಕ್ರೈಸ್ತ ಸಮುದಾಯದ ಜೊತೆ ನಾವಿದ್ದೇವೆ’ ಎಂದು ಸಾರಿದರು.

ಶ್ರೀಲಂಕಾದ ಚರ್ಚ್‌ಗಳಲ್ಲಿ ಕಳೆದ ರವಿವಾರ ನಡೆದ ಭಯೋತ್ಪಾದನಾ ದಾಳಿಯಲ್ಲಿ 250ಕ್ಕೂ ಅಧಿಕ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮೈಸೂರಿನ ಸೈಂಟ್ ಫಿಲೋಮಿನಾ ಚರ್ಚ್‌ನಲ್ಲಿ ಬೆಳಗ್ಗೆ ನಡೆದ ಪ್ರಾರ್ಥನೆಯ ಸಂದರ್ಭ ಚರ್ಚ್ ಮುಂಭಾಗದಲ್ಲಿ ಮೈಸೂರು ಜಮಾಅತೆ ಇಸ್ಲಾಮಿ ಹಿಂದ್ ಘಟಕದ ನೇತೃತ್ವದಲ್ಲಿ ಸೇರಿದ ಮುಸ್ಲಿಮರು ಕೃತ್ಯವನ್ನು ಖಂಡಿಸಿದರು. ‘‘ಕ್ರೈಸ್ತ ಸಮುದಾಯದೊಂದಿಗೆ ನಾವಿದ್ದೇವೆ. ನಾವೆಲ್ಲರೂ ಜತೆಯಾಗಿದ್ದೇವೆ, ದ್ವೇಷ ಮೂಡಿಸಿ ನಮ್ಮನ್ನು ಪ್ರತ್ಯೇಕಿಸಲಾಗದು’’ ಎಂಬ ಸಂದೇಶವನ್ನು ಸಾರಿದರು.

ಈ ಸಂದರ್ಭ ಮಾತನಾಡಿದ ಮೈಸೂರು ಜಮಾಅತೆ ಇಸ್ಲಾಮಿ ಹಿಂದ್ ಘಟಕದ ಅಧ್ಯಕ್ಷ ಮುನವ್ವರ್ ಪಾಷಾ, ಈಸ್ಟರ್ ಸಂದರ್ಭ ಶ್ರೀಲಂಕಾದ ಕೊಲಂಬೊದಲ್ಲಿ ಚರ್ಚ್‌ಗಳ ನಡೆದಿರುವ ಬಾಂಬ್ ದಾಳಿಯನ್ನು ಜಮಾಅತೆ ಇಸ್ಲಾಮಿ ಹಿಂದ್ ಸೇರಿದಂತೆ ದೇಶಾದ್ಯಂತದ ಮುಸ್ಲಿಮ್ ಸಮುದಾಯ ಖಂಡಿಸಿದೆ. ‘‘ಭಯೋತ್ಪಾದನೆ ವಿರುದ್ಧ ನಾವೆಲ್ಲರೂ ಒಂದಾಗಿದ್ದೇವೆ’’ ಎಂಬ ಸ್ಪಷ್ಟ ಸಂದೇಶವನ್ನು ಸಾರುವ ಉದ್ದೇಶದಿಂದ ಇಲ್ಲಿ ಸೇರಿದ್ದೇವೆ ಎಂದರು.
ಡಬ್ಲುಪಿಐ ಮೈಸೂರು ಅಧ್ಯಕ್ಷ ಶೈಖ್ ಝಬೀವುಲ್ಲಾ ಮಾತನಾಡಿದರು.

ಮುಸ್ಲಿಮರ ಈ ಏಕತೆಯ ಪ್ರದರ್ಶನವನ್ನು ಕ್ರಿಶ್ಚಿಯನ್ನರು ಶ್ಲಾಘಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಚರ್ಚ್‌ನ ಧರ್ಮಗುರು ಫಾ.ವಿಲಿಯಮ್ಸ್, ಭಯೋತ್ಪಾದನೆಯ ವಿರುದ್ಧ ಮುಸ್ಲಿಮರು ನೀಡಿರುವ ಸಂದೇಶ ಶ್ಲಾಘನೀಯ. ಅದೇರೀತಿ ಏಕತೆಯನ್ನು ಪ್ರದರ್ಶಿಸಿದ್ದಕ್ಕೆ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭ ಟಿ.ಎಸ್.ಅನ್ಸಾರ್ ಉಡುಪಿ, ಪ್ರೊ.ನೂರ್ ಅಹ್ಮದ್ ಖಾನ್, ಖಲೀಲುರ್ರಹ್ಮಾನ್, ಮುಹಮ್ಮದ್ ಅಸ್ಲಮ್, ಫಝಲುರ್ರಹ್ಮಾನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X