Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಟಪಾಡಿ ರಾ.ಹೆದ್ದಾರಿ ಜಂಕ್ಷನ್‌ನಲ್ಲಿ...

ಕಟಪಾಡಿ ರಾ.ಹೆದ್ದಾರಿ ಜಂಕ್ಷನ್‌ನಲ್ಲಿ ಐದು ತಾಸು ಟ್ರಾಫಿಕ್ ಜಾಮ್

ಯು ಟರ್ನ್ ಕ್ರಾಸ್ ಬಂದ್: ಪೊಲೀಸರೊಂದಿಗೆ ಸ್ಥಳೀಯರ ವಾಗ್ವಾದ

ವಾರ್ತಾಭಾರತಿವಾರ್ತಾಭಾರತಿ28 April 2019 6:07 PM IST
share
ಕಟಪಾಡಿ ರಾ.ಹೆದ್ದಾರಿ ಜಂಕ್ಷನ್‌ನಲ್ಲಿ ಐದು ತಾಸು ಟ್ರಾಫಿಕ್ ಜಾಮ್

ಕಾಪು, ಎ.28: ರಾಷ್ಟ್ರೀಯ ಹೆದ್ದಾರಿ 66ರ ಕಟಪಾಡಿ ಜಂಕ್ಷನ್‌ನಲ್ಲಿ ಇಂದು ಉಂಟಾದ ಸುಮಾರು ಐದು ತಾಸುಗಳ ಟ್ರಾಫಿಕ್ ಜಾಮ್ ಸುಗಮಗೊಳಿಸಲು ಪೊಲೀಸರು ಜಂಕ್ಷನ್‌ನ ಮುಖ್ಯ ಕ್ರಾಸನ್ನೇ ಬ್ಯಾರಿಕೇಡ್ ಮೂಲಕ ಬಂದ್ ಮಾಡಿದರು. ಇದರಿಂದ ವಾಹನಗಳು ರಸ್ತೆ ದಾಟಲು ಆರು ಕಿ.ಮೀ. ಸುತ್ತಿ ಬಳಸಿ ಬರಬೇಕಾಯಿತು. ಈ ಕ್ರಮದ ವಿರುದ್ಧ ಪೊಲೀಸರು ಹಾಗೂ ಸಾರ್ವಜನಿಕರ ಮಧ್ಯೆ ವಾಗ್ವಾದಗಳು ನಡೆದವು.

ಮಂಗಳೂರು- ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಪ್ರಮುಖ ಜಂಕ್ಷನ್ ಗಳಲ್ಲಿ ಒಂದಾದ ಕಟಪಾಡಿ ಪೇಟೆಯಲ್ಲಿ ಪೂರ್ವಕ್ಕೆ ಸದಾ ವಾಹನ ದಟ್ಟಣೆಯಿಂದ ಕೂಡಿರುವ ಶಿರ್ವ, ಮಣಿಪುರಕ್ಕೆ ಸಾಗುವ ರಸ್ತೆ ಇದ್ದರೆ, ಪಶ್ಚಿಮಕ್ಕೆ ಕಟಪಾಡಿ ಪೇಟೆ, ಬಸ್ ನಿಲ್ದಾಣ, ಮಟ್ಟು, ಪಳ್ಳಿಗುಡ್ಡೆಗೆ ಹೋಗುವ ರಸ್ತೆ ಇದೆ. ಇದರಿಂದಾಗಿ ಈ ಜಂಕ್ಷನ್ ಸದಾ ಟ್ರಾಫಿಕ್ ಕಿರಿಕಿರಿಗೆ ತುತ್ತಾಗುತ್ತಿದೆ.

ಇಂದು ಸಾಕಷ್ಟು ಶುಭ ಕಾರ್ಯ ಇದ್ದ ಕಾರಣ ಬೆಳಗ್ಗೆಯಿಂದ ಕಟಪಾಡಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗಿತ್ತು. ಇದರ ಪರಿಣಾಮ ನಾಲ್ಕು ಕೂಡು ರಸ್ತೆಗಳು ವಾಹನಗಳಿಂದ ಬ್ಲೋಕ್ ಆಗಿ ವಾಹನ ಸಂಚಾರವೇ ಸ್ಥಗಿತ ಗೊಂಡಿತ್ತು. ಬಳಿಕ ಆಗಮಿಸಿದ ಪೊಲೀಸ್ ಸಿಬ್ಬಂದಿ ವಾಹನ ಸಂಚಾರ ಸುಗಮ ಗೊಳಿಸಲು ಹರಸಾಹಸ ಪಟ್ಟರು. ಅವರೊಂದಿಗೆ ಸಾವಜರ್ನಿಕರು ಕೂಡ ಕೈ ಜೋಡಿಸಿದರು.
ಆದರೂ ಸಮಸ್ಯೆ ಬಗೆಹರೆಯದೆ ಮಧ್ಯಾಹ್ನ ಒಂದು ಗಂಟೆಯವರೆಗೂ ಮುಂದುವರೆಯಿತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಕಾಪು ಪೊಲೀಸ್ ವೃತ್ತ ನಿರೀಕ್ಷಕರು ಜಂಕ್ಷನ್‌ನಲ್ಲಿರುವ ಯು ಟರ್ನ್ ಕ್ರಾಸ್‌ನ್ನು ಬ್ಯಾರಿಕೇಡ್ ಮೂಲಕ ಬಂದ್ ಮಾಡಿದರು. ಶಿರ್ವ ರಸ್ತೆಯಿಂದ ಆಗಮಿಸಿದ ವಾಹನಗಳನ್ನು ಮಂಗಳೂರು ಕಡೆ ಹಾಗೂ ಕಟಪಾಡಿ ಬಸ್ ನಿಲ್ದಾಣದಿಂದ ಕ್ರಾಸ್ ಆಗಬೇಕಾದ ವಾಹನಗಳನ್ನು ಉಡುಪಿ ಕಡೆ ಕಳುಹಿಸಿಕೊಡಲಾಯಿತು. ಕೇವಲ ಮಂಗಳೂರು ಮತ್ತು ಉಡುಪಿ ಕಡೆ ಸಾಗುವ ರಸ್ತೆಗಳಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕೊಡಲಾಯಿತು.

ಇದರ ಪರಿಣಾಮ ಶಿರ್ವ ಕಡೆಯಿಂದ ಉಡುಪಿ ಕಡೆ ಮತ್ತು ಕಟಪಾಡಿ ಪೇಟೆಗೆ ಹೋಗಬೇಕಾದ ವಾಹನಗಳು ಮೂರು ಕಿ.ಮೀ. ದೂರದಲ್ಲಿರುವ ಪಾಂಗಾಳ ಸಮೀಪದ ಮೂಡಬೆಟ್ಟು ಯು ಟರ್ನ್‌ವರೆಗೆ ಸಾಗಿ ಮತ್ತೆ ಮೂರು ಕಿ.ಮೀ. ದೂರದ ಕಟಪಾಡಿಗೆ ಬರಬೇಕಾಯಿತು. ಅದೇ ರೀತಿ ಕಟಪಾಡಿ ಪೇಟೆಯಿಂದ ಶಿರ್ವ ರಸ್ತೆಗೆ ಬರಬೇಕಾದವರು ಮೂರು ಕಿ.ಮೀ. ದೂರ ಉದ್ಯಾವರ ಬೈಪಾಸ್‌ನಲ್ಲಿರುವ ಯು ಟರ್ನ್‌ವರೆಗೆ ಸಾಗಿ ಮತ್ತೆ ಮೂರು ಕಿ.ಮೀ. ದೂರದಲ್ಲಿರುವ ಕಟಪಾಡಿಗೆ ಬರಬೇಕಾಯಿತು. ಹೀಗೆ ಕಟಪಾಡಿ ಜಂಕ್ಷನ್‌ನಲ್ಲಿ ರಸ್ತೆ ಕ್ರಾಸ್ ಮಾಡಬೇಕಾದ ವಾಹನಗಳು ಸುಮಾರು ಆರು ಕಿ.ಮೀ ಕ್ರಮಿಸಬೇಕಾಯಿತು.

ಪೊಲೀಸರ ಈ ಕ್ರಮದಿಂದ ಆಕ್ರೋಶಗೊಂಡ ರಿಕ್ಷಾ ಚಾಲಕರು, ಬೈಕ್ ಸವಾರರು ಹಾಗೂ ಸ್ಥಳೀಯರು ಕಾಪು ವೃತ್ತ ನಿರೀಕ್ಷಕರೊಂದಿಗೆ ವಾಗ್ವಾದಕ್ಕೆ ಇಳಿದರು. ‘100 ಮೀಟರ್ ದೂರದ ರಸ್ತೆ ದಾಟಬೇಕಾದರೆ ಆರು ಕಿ.ಮೀ. ದೂರ ಕ್ರಮಿಸಬೇಕಾಗಿದೆ. ಬೆಳಗ್ಗೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿದ್ದರೂ ಒಂದೇ ಒಂದು ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಇರಲಿಲ್ಲ. ಬೆಳಗ್ಗೆಯೇ ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿ ಇರುತ್ತಿದ್ದರೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಸ್ಥಳೀಯರು ದೂರಿದರು.

ಸುಮಾರು ನಾಲ್ಕೈದು ತಾಸುಗಳ ನಂತರ ಟ್ರಾಫಿಕ್ ಜಾಮ್ ಸುಗಮಗೊಂಡು, ಮುಕ್ಕಾಲು ಗಂಟೆಯ ಬಳಿಕ ಪೊಲೀಸರು ಜಂಕ್ಷನ್ ಕ್ರಾಸ್‌ನಲ್ಲಿ ಅಳವಡಿಸಲಾದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಸಿಗ್ನಲ್ ಅಳವಡಿಕೆಗೆ ಒತ್ತಾಯ
ಕಳೆದ ಡಿಸೆಂಬರ್ ತಿಂಗಳಲ್ಲಿ ಈ ಹಿಂದಿನ ಎಸ್ಪಿ ಲಕ್ಷ್ಮಣ್ ನಿಂಬರ್ಗಿ ಇಲ್ಲಿನ ಟ್ರಾಫಿಕ್ ಸಮಸ್ಯೆಯನ್ನು ಅರಿತು ಕಟಪಾಡಿ ಸೇರಿದಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮೂರು ಜಂಕ್ಷನ್‌ಗಳಲ್ಲಿ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದರು. ಆದರೆ ಇಲಾಖೆ ಇದಕ್ಕೆ ಅವಕಾಶ ನೀಡಿಲ್ಲ. ಇದೀಗ ಟ್ರಾಫಿಕ್ ಕಿರಿಕಿರಿ ಅನುಭವಿಸುತ್ತಿರುವ ಸ್ಥಳೀಯರು ಈ ಜಂಕ್ಷನ್‌ಗೆ ಟ್ರಾಫಿಕ್ ಸಿಗ್ನಲ್ ಅಳವಡಿಸಬೇಕು ಮತ್ತು ಶಾಶ್ವತ ಪೊಲೀಸ್ ಸಿಬ್ಬಂದಿಯನ್ನು ನಿಜಿಸಬೇಕು ಎಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X