Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸ್ಕಾರ್ಫ್ ವಿವಾದ: ಮುಸ್ಲಿಂ ಸಂಘ...

ಸ್ಕಾರ್ಫ್ ವಿವಾದ: ಮುಸ್ಲಿಂ ಸಂಘ ಸಂಸ್ಥೆಗಳ ಮುಖಂಡರ ಸಭೆ

ವಾರ್ತಾಭಾರತಿವಾರ್ತಾಭಾರತಿ28 April 2019 7:58 PM IST
share
ಸ್ಕಾರ್ಫ್ ವಿವಾದ: ಮುಸ್ಲಿಂ ಸಂಘ ಸಂಸ್ಥೆಗಳ ಮುಖಂಡರ ಸಭೆ

ಮಂಗಳೂರು,ಎ.28: ನಗರದ ಪ್ರತಿಷ್ಟಿತ ಕಾಲೇಜೊಂದು ಮತ್ತೆ ಸ್ಕಾರ್ಫ಼್ ವಿವಾದವನ್ನು ಹುಟ್ಟುಹಾಕಿದ ಹಿನ್ನೆಲೆಯಲ್ಲಿ ಈ ಬಗ್ಗೆ ಸಮುದಾಯದ ನಿಲುವನ್ನು ಚರ್ಚಿಸಲು ಮತ್ತು ಇದಕ್ಕೆ ಶಾಶ್ವತ ಪರಿಹಾರವೊಂದನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಮುಸ್ಲಿಂ ಸಂಘ ಸಂಸ್ಥೆಗಳ ಮುಖಂಡರ ಸಭೆಯು ಇತ್ತೀಚೆಗೆ ರಫೀಉದ್ದೀನ್ ಕುದ್ರೋಳಿ ನೇತೃತ್ವದಲ್ಲಿ ನಗರದ ಲುಲು ಸೆಂಟರ್ ನ ದಾರುಲ್ ಇಲ್ಮ್ ನಲ್ಲಿ ನಡೆಯಿತು.

ಸಮುದಾಯದ ಸಂಘ ಸಂಸ್ಥೆಗಳ ಮುಖಂಡರುಗಳು ಭಾಗವಹಿಸಿದ ಈ ಸಭೆಯಲ್ಲಿ ಈ ವಿವಾದದ ಹಿನ್ನೆಲೆ, ಸಮುದಾಯದ ಒಟ್ಟು ಪ್ರತಿಕ್ರಿಯೆ, ಶೈಕ್ಷಣಿಕ ಇಲಾಖೆ ಮತ್ತು ಸರಕಾರದ ನಿರ್ಲಕ್ಷ್ಯ, ಮುಂದಿನ ನಡೆ ಮತ್ತು ಅದರ ಕಾರ್ಯಸೂಚಿ ಮುಂತಾದ ವಿಷಯಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು.

ಸಮುದಾಯದ ಮುಂದಾಳು ಡಾ. ಕೆ.ಎಸ್. ಅಮೀರ್ ತುಂಬೆ, ಉದ್ಯಮಿ ಹಾಗೂ ಕೃಷ್ಣಾಪುರ ಬದ್ರಿಯಾ ಸಮೂಹ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಮುಮ್ತಾಝ್ ಅಲಿ, ದ.ಕ. ಮುಸ್ಲಿಮ್ ಐಕ್ಯತಾ ವೇದಿಕೆಯ ಅಧ್ಯಕ್ಷ ಮುಸ್ತಫ಼ಾ ಕೆಂಪಿ, ಮಾಜಿ ನಗರಸಭಾ ಸದಸ್ಯ ಝಾಕಿರ್ ಹುಸೈನ್ ಉಳ್ಳಾಲ್, ಮಂಗಳೂರು ಸೆಂಟ್ರಲ್ ಕಮಿಟಿ ಮತ್ತು ಮಾಂಸ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಲಿ ಹಸನ್, ಮೂವ್ ಮೆಂಟ್ ಫ಼ಾರ್ ಜಸ್ಟಿಸ್ ನ ಸಮೀರ್ ಶೇಖ್, ಸಾಮಾಜಿಕ ಕಾರ್ಯಕರ್ತ ಇರ್ಶಾದ್ ಯು.ಟಿ. ಉಪ್ಪಿನಂಗಡಿ, ಡೈಮಂಡ್ ಶಾಲೆಯ ಆಡಳಿತಾಧಿಕಾರಿ ಮುಹಮ್ಮದ್ ರಿಝ್ವಾನ್, ಕ್ಯಾಂಪಸ್ ಫ಼್ರಂಟ್ ನ ಶಾಕಿರ್ ಮತ್ತು ಇಮ್ರಾನ್ ಪಿ.ಜೆ. , ಯುನಿವೆಫ಼್ ಕರ್ನಾಟಕದ ಯು,ಕೆ. ಖಾಲಿದ್ ಮತ್ತು ಬಿ.ಎಂ. ಬದ್ರುದ್ದೀನ್ ಈ ಸಂದರ್ಭದಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯ ನಿರ್ಣಯಗಳು:

►ಪದೇ ಪದೇ ಉದ್ಭವಿಸುವ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.

►ಧಾರ್ಮಿಕ ಆಚರಣೆಗಳಲ್ಲಿ ವಿದ್ಯಾಸಂಸ್ಥೆಗಳು ಹಸ್ತಕ್ಷೇಪ ನಡೆಸದಂತೆ ಶಿಕ್ಷಣ ಇಲಾಖೆ ಮತ್ತು ಸರಕಾರವನ್ನು ಒತ್ತಾಯಿಸಬೇಕು.

►ಸಮುದಾಯದ ಜನರಲ್ಲಿ ಮತ್ತು ವಿದ್ಯಾರ್ಥಿನಿಯರಲ್ಲಿ ಇಸ್ಲಾಮೀ ಶಿಷ್ಟಾಚಾರಗಳ ಕುರಿತು ಜಾಗೃತಿ ಮೂಡಿಸಬೇಕು.

►ಈ ನಿಟ್ಟಿನಲ್ಲಿ ಸಮುದಾಯದ ಖಾಝಿಗಳು, ಉಲೆಮಾಗಳು ಮಧ್ಯಪ್ರವೇಶಿಸುವಂತೆ ಮಾಡಿ ಜನಸಾಮಾನ್ಯರಲ್ಲಿ ಭದ್ರತೆಯ ಭಾವನೆ ಮೂಡಿಸಬೇಕು.

►ಈ ರೀತಿ ಇಸ್ಲಾಮೀ ಆಚಾರಗಳನ್ನು ನಿಷೇಧಿಸುವ ನಿರ್ಧಾರ ಕೈಗೊಳ್ಳುವ ವಿದ್ಯಾಸಂಸ್ಥೆಗಳು ಮುಖ್ಯಸ್ಥರನ್ನು ಭೇಟಿ ಮಾಡಿ ಅವರಿಗೆ ಇಸ್ಲಾಮೀ ಶಿಷ್ಟಾಚಾರಗಳ ಮಹತ್ವವನ್ನು ಮನಗಾಣಿಸಬೇಕು.

► ಭಾರತದಲ್ಲಿ ಸಿಖ್ ಮತ್ತು ಕ್ರಿಶ್ಚಿಯನ್ ಸನ್ಯಾಸಿ ಸನ್ಯಾಸಿನಿಯರಿಗೆ ಸಿಗುವ ವಿಶೇಷ ಸೌಲಭ್ಯಗಳು ಸಾಂವಿಧಾನಿಕವಾಗಿ ಮುಸ್ಲಿಮ್ ಪುರುಷ ಮತ್ತು ಮಹಿಳೆಯರಿಗೂ ದೊರಕಬೇಕು.

►ಸಂವಿಧಾನದಲ್ಲಿ ನೀಡಿದ ಧಾರ್ಮಿಕ ಸ್ವಾತಂತ್ರ್ಯವನ್ನು ಅನುಭವಿಸಲು ಮುಕ್ತ ಅವಕಾಶ ದೊರಕಬೇಕು.

►ಸಾಂವಿಧಾನಿಕ ರೀತಿಯಲ್ಲಿ ನಮ್ಮ ಬೇಡಿಕೆಗಳನ್ನು ಪೂರೈಸಲು ಪ್ರಯತ್ನಿಸಬೇಕು.

ಈ ನಿಟ್ಟಿನಲ್ಲಿ ಸಭಾ ಕಾರ್ಯಕ್ರಮವನ್ನು ನಿರ್ವಹಿಸಿದ ರಫೀಉದ್ದೀನ್ ಕುದ್ರೋಳಿಯವರ ಸಲಹೆಯಂತೆ ಮುಸ್ಲಿಮ್ ಡೆವಲಪ್ ಮೆಂಟ್ ಸಮಿತಿ ( ಎಂ.ಡಿ.ಸಿ )ಎಂಬ ಕಾರ್ಯಕಾರಿ ಸಮಿತಿಯೊಂದನ್ನು ರಚಿಸಲಾಯಿತು. 20 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ರಚಿಸಿ ಅದಕ್ಕೆ ಡಾ. ಅಮೀರ್ ತುಂಬೆಯವರನ್ನು ಸಂಚಾಲಕರನ್ನಾಗಿಯೂ ಯು.ಕೆ. ಖಾಲಿದ್ ರವರನ್ನು

ಸಹಸಂಚಾಲಕರನ್ನಾಗಿಯೂ ಸರ್ವಾನುಮತದಿಂದ ನೇಮಿಸಲಾಯಿತು.

ಎಪ್ರಿಲ್ 29 ರ ಸೋಮವಾರ ಬೆಳಿಗ್ಗೆ 10 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆ ಸೇರಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಬೇಕೆಂದು ತೀರ್ಮಾನಿಸಲಾಯಿತು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X