Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮವಾಗಿ...

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಹಾಕಿದ್ದ ಕೇಬಲ್‌ಗಳ ತೆರವು

ವಾರ್ತಾಭಾರತಿವಾರ್ತಾಭಾರತಿ28 April 2019 8:13 PM IST
share
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಹಾಕಿದ್ದ ಕೇಬಲ್‌ಗಳ ತೆರವು

ಬೆಂಗಳೂರು, ಎ.28: ರಾಜಧಾನಿಯಲ್ಲಿ ಅನಧಿಕೃತವಾಗಿ ಅಳವಡಿಸಲಾದ ಆಪ್ಟಿಕಲ್ ಫೈಬರ್ ಕೇಬಲ್ (ಒಎಫ್‌ಸಿ) ತೆರವುಗೊಳಿಸಲು ಬಿಬಿಎಂಪಿ ಕಾರ್ಯಾಚರಣೆ ಆರಂಭಿಸಿದ್ದು, ವೈಟ್‌ಫೀಲ್ಡ್ ಹಾಗೂ ಬೆಳ್ಳಂದೂರು ಪ್ರದೇಶಗಳಲ್ಲಿ ಅಕ್ರಮವಾಗಿ ಹಾಕಿದ್ದ ಕೇಬಲ್‌ಗಳನ್ನು ತೆಗೆದುಹಾಕಲಾಗಿದೆ.

ವಿದ್ಯುತ್ ಕಂಬಗಳು ಹಾಗೂ ಮರಗಳ ಮೇಲೆ ನೇತಾಡುತ್ತಿದ್ದ ಕೇಬಲ್‌ಗಳಿಂದ ರೋಸಿ ಹೋಗಿದ್ದ ಸಾರ್ವಜನಿಕರು ಬಿಬಿಎಂಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ತಡವಾಗಿ ಎಚ್ಚೆತ್ತ ಅಧಿಕಾರಿಗಳು ಈಗ ಕೇಬಲ್ ತೆಗೆದುಹಾಕುವ ಆಂದೋಲನ ನಡೆಸುತ್ತಿದ್ದಾರೆ. ಬೆಳ್ಳಂದೂರು, ಕಸವನಹಳ್ಳಿ, ಸರ್ಜಾಪುರ, ಹರಳೂರು ರಸ್ತೆ ಬದಿಯ ಕಂಬಗಳಿಗೆ ಕಟ್ಟಿ, ಎಳೆದಿದ್ದ ಅನಧಿಕೃತ ಕೇಬಲ್‌ಗಳನ್ನು ತೆರವುಗೊಳಿಸಿದ್ದಾರೆ. ಸುಮಾರು 20 ಕಿ.ಮೀ.ಉದ್ದದ ರಸ್ತೆಯ ಇಕ್ಕೆಲಗಳಲ್ಲಿ ಜೋತುಬಿದ್ದಿದ್ದ ಕೇಬಲ್‌ಗಳನ್ನು ಕಿತ್ತು ಹಾಕಿದ್ದಾರೆ.

ಆಪರೇಟರ್‌ಗಳ ಆಕ್ರೋಶ: ಪಾಲಿಕೆ ಕ್ರಮಕ್ಕೆ ಅಂತರ್ಜಾಲ ಸೇವಾ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಾಹಿತಿ ತಂತ್ರಜ್ಞಾನ ರಾಜಧಾನಿಯಲ್ಲಿ ಅಂತರ್ಜಾಲ ಸಂಪರ್ಕವೇ ಕಡಿದು ಹೋಗುವ ಸಂಭವವಿದೆ ಎಂದು ಭೀತಿ ವ್ಯಕ್ತಪಡಿಸಿವೆ. ಪಾಲಿಕೆಯ ಈ ನಡೆಯಿಂದ ಟೆಲಿಕಾಂ ಉದ್ದಿಮೆದಾರರು ಹಾಗೂ ಗ್ರಾಹಕರು ಇಬ್ಬರೂ ಸಂಕಷ್ಟ ಅನುಭವಿಸಬೇಕಾಗಿದೆ ಎಂದು ಸೆಲ್ಯುಲರ್ ಆಪರೇಟರ್ಸ್ ಆಫ್ ಇಂಡಿಯಾ ಸಂಘಟನೆ (ಸಿಒಎಐ) ಆತಂಕ ತೋಡಿಕೊಂಡಿದೆ.

ನಗರದ ಸರ್ಜಾಪುರ ರಸ್ತೆ, ವೈಟ್‌ಫೀಲ್ಡ್, ಮಾರತ್ತಹಳ್ಳಿ, ಬೆಳ್ಳಂದೂರು ಪ್ರದೇಶಗಳಲ್ಲಿ ಕೇಬಲ್‌ಗಳನ್ನು ಹೆಚ್ಚಾಗಿ ಕಡಿತ ಮಾಡಲಾಗಿದೆ. ಟೆಲಿಕಾಂ ಹಾಗೂ ಇಂಟರ್‌ನೆಟ್ ಸೇವಾ ಸಂಸ್ಥೆಗಳಿಗೆ ಯಾವುದೇ ಮುನ್ಸೂಚನೆಯನ್ನು ನೀಡಿಲ್ಲ. ಇದರಿಂದ ಜನದಟ್ಟಣೆ ಪ್ರದೇಶದಲ್ಲಿರುವ ಜನರಿಗೆ ಅಡಚಣೆಯಾಗಿದೆ ಎಂದು ಸಿಒಎಐ ಹೇಳಿಕೊಂಡಿದೆ.

ಎಲ್ಲ ಪ್ರದೇಶಗಳಲ್ಲಿ ಅನಿರ್ಬಂಧಿತ ಮತ್ತು ತಡೆರಹಿತ ಟೆಲಿಕಾಂ ಸೇವೆಗಳ ಅಗತ್ಯ ಇರುತ್ತದೆ. ಇಂತಹ ಕ್ರಮಗಳಿಂದ ನಗರದ ಸಂಪರ್ಕ ವ್ಯವಸ್ಥೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದೂ ಹೇಳಿದೆ. ಟೆಲಿಕಾಂ ಉದ್ದಿಮೆಗಳು ರಾಜ್ಯದಲ್ಲಿ ಅಪಾರ ಪ್ರಮಾಣ ಬಂಡವಾಳ ಹೂಡಿವೆ. ಟೆಲಿಫೋನ್, ಮೊಬೈಲ್ ಹಾಗೂ ಇಂಟರ್‌ನೆಟ್ ಸಂಪರ್ಕಕ್ಕಾಗಿ ರಾಜ್ಯದಾದ್ಯಂತ 34,700 ಟವರ್‌ಗಳನ್ನು ಸ್ಥಾಪಿಸಲಾಗಿದೆ. ಸಂಪರ್ಕ ಜಾಲ ನಿರ್ಮಾಣಕ್ಕಾಗಿಯೇ 14,500 ಕೋಟಿ ರೂ. ಬಂಡವಾಳ ಹೂಡಲಾಗಿದೆ. ರಾಜ್ಯದಲ್ಲಿ ವಾರ್ಷಿಕ 10,000 ಕೋಟಿ ರೂ. ವರಮಾನ ಇದರಿಂದ ಬರುತ್ತದೆ. ರಾಜ್ಯದ ಬೊಕ್ಕಸಕ್ಕೂ 1,700 ಕೋಟಿ ರೂ ತೆರಿಗೆ ಹೋಗುತ್ತದೆ. ಬಿಬಿಎಂಪಿ ನಡೆಯಿಂದ ಡಿಜಿಟಲ್ ಆರ್ಥಿಕತೆಗೆ ಪೆಟ್ಟು ಬೀಳಲಿದೆ ಎಂದು ವಿವರಿಸಿದೆ. ನೆಲದಡಿಯಲ್ಲಿ ಹಾಕಲಾಗಿರುವ ಕೇಬಲ್‌ಗಳನ್ನು ಪಾಲಿಕೆ ಅನಧಿಕೃತ ಎಂದು ಭಾವಿಸಿದೆ. ಆದರೆ, ಟೆಲಿಕಾಂ ಸಂಸ್ಥೆಗಳು ಅಗತ್ಯವಾಗಿ ಬೇಕಿದ್ದ ಅನುಮತಿಗಳನ್ನು ಪಡೆದೇ ಕೇಬಲ್ ಹಾಕಿವೆ. ಪಾಲಿಕೆ ಅನುಮತಿ ಇದ್ದರೂ ಪೂರೈಕೆದಾರರ ಮೇಲೆ ನಿರ್ಬಂಧ ಹೇರಿದೆ. ಪಾಲಿಕೆ, ಬೆಸ್ಕಾಂ, ಜಲಮಂಡಳಿ ತಮ್ಮ ಕಾಮಗಾರಿಗಳ ವೇಳೆ ನಾವು ಹಾಕಿರುವ ಕೇಬಲ್‌ಗಳನ್ನು ಕತ್ತರಿಸುತ್ತಾರೆ ಅಥವಾ ತೆರವು ಮಾಡುತ್ತಾರೆ. ಇದರಿಂದ ಡಿಜಿಟಲ್ ಬೆಂಗಳೂರು ಯೋಜನೆಗೆ ಹಿನ್ನಡೆಯಾಗಲಿದೆ ಎಂದು ಹೇಳಿದೆ.

ಯಾವುದೇ ಸೂಚನೆ ನೀಡದೇ ಕೇಬಲ್‌ಗಳನ್ನು ಕಡಿತ ಮಾಡಲಾಗಿದೆ. ಪಾಲಿಕೆಯ ಈ ನಡೆಯಿಂದ ನಮಗೆ ಬೇಸರವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳಿಗೆ ದೂರು ನೀಡಲು ನಿರ್ಧಾರ ಮಾಡಿದ್ದೇವೆ ಎಂದು ಸಿಒಎಐನ ಪ್ರಧಾನ ನಿರ್ದೇಶಕ ರಾಜನ್ ಎಸ್.ಮ್ಯಾಥ್ಯೂ ತಿಳಿಸಿದ್ದಾರೆ. ಒಎಫ್‌ಸಿ ಸಂಬಂಧ ನಗರದಲ್ಲಿ ಯಾವುದೇ ಸಮಗ್ರ ನೀತಿ ಇಲ್ಲದ ಕಾರಣ ಈ ಸಮಸ್ಯೆಗಳು ಉದ್ಭವಿಸಿವೆ. ರಾಜ್ಯ ಸರಕಾರ ಕಟ್ಟುನಿಟ್ಟಿನ ನೀತಿಯನ್ನು ಜಾರಿ ಮಾಡಬೇಕು. ಆಗಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದು ಸಾಧ್ಯ ಎಂದು ಹೇಳಿದ್ದಾರೆ.

ಸಾರ್ವಜನಿಕರಿಗೆ ಖುಷಿ: ಪಾಲಿಕೆ ಅಕ್ರಮ ಕೇಬಲ್ ತೆರವು ಮಾಡುತ್ತಿರು ವುದಕ್ಕೆ ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಹರ್ಷ ವ್ಯಕ್ತಪಡಿಸಿವೆ. ಪಾದಚಾರಿಗಳಿಗೆ ತೊಂದರೆ ಮಾಡದಂತೆ ಟೆಲಿಕಾಂ ಕಂಪನಿಗಳು ಕೇಬಲ್ ಜೋಡಣೆಯ ಸೌಕರ್ಯಗಳನ್ನು ತ್ವರಿತವಾಗಿ ಅಳವಡಿಸಿಕೊಳ್ಳಬೇಕು. ರಸ್ತೆಗಳನ್ನು ಅವೈಜ್ಞಾನಿಕವಾಗಿ ಅಗೆದು ಕೇಬಲ್‌ಗಳನ್ನು ಹಾಕಬಾರದು ಎಂದು ಬೆಳ್ಳಂದೂರು ಅಭಿವೃದ್ಧಿ ವೇದಿಕೆ ಮನವಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X