Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾವಿನ ಸಮಯದಲ್ಲೂ ನನ್ನ ತಂದೆ ದೇಶದ...

ಸಾವಿನ ಸಮಯದಲ್ಲೂ ನನ್ನ ತಂದೆ ದೇಶದ ರಕ್ಷಣೆಗೆ ಪ್ರಯತ್ನಿಸಿದರು: ಕರ್ಕರೆ ಪುತ್ರಿ

ವಾರ್ತಾಭಾರತಿವಾರ್ತಾಭಾರತಿ28 April 2019 8:21 PM IST
share
ಸಾವಿನ ಸಮಯದಲ್ಲೂ ನನ್ನ ತಂದೆ ದೇಶದ ರಕ್ಷಣೆಗೆ ಪ್ರಯತ್ನಿಸಿದರು: ಕರ್ಕರೆ ಪುತ್ರಿ

ಮುಂಬೈ,ಎ.28: ತನ್ನ ತಂದೆಯ ಬಗ್ಗೆ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಠಾಕೂರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡುವ ಮೂಲಕ ಆಕೆಯ ಮಾತಿಗೆ ಬೆಲೆ ಬರುವಂತೆ ಮಾಡುವುದಿಲ್ಲ ಎಂದು 26/11ರ ಮುಂಬೈ ದಾಳಿಯಲ್ಲಿ ಹುತಾತ್ಮರಾದ ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆಯ ಮಾಜಿ ಮುಖ್ಯಸ್ಥ ಹೇಮಂತ ಕರ್ಕರೆ ಅವರ ಪುತ್ರಿ ಜೂಹಿ ನವರೆ ತಿಳಿಸಿದ್ದಾರೆ.

ತಾನು ಶಾಪ ನೀಡಿದ ಪರಿಣಾಮ ಕರ್ಕರೆ 26/11ರ ದಾಳಿಯಲ್ಲಿ ಮೃತಪಟ್ಟರು ಎಂದು ಪ್ರಜ್ಞಾ ಠಾಕೂರ್ ಹೇಳಿಕೆ ನೀಡಿದ್ದರು. ಆದರೆ ನಂತರ ತನ್ನ ಮಾತನ್ನು ಮಾಧ್ಯಮಗಳು ತಿರುಚಿವೆ ಎಂದು ಹೇಳಿಕೊಂಡಿದ್ದರು.

“ಠಾಕೂರ್ ಅಥವಾ ಆಕೆಯ ಹೇಳಿಕೆಗೆ ಬೆಲೆ ಕೊಡಲು ನಾನು ಬಯಸುವುದಿಲ್ಲ. ನಾನು ಕೇವಲ ಕರ್ಕರೆ ಬಗ್ಗೆ ಮಾತನಾಡಲು ಬಯಸುತ್ತೇನೆ. ಅವರೊಬ್ಬ ಆದರ್ಶ ವ್ಯಕ್ತಿಯಾಗಿದ್ದರು ಮತ್ತು ಅವರ ಹೆಸರನ್ನು ಘನತೆಯಿಂದ ಹೇಳಬೇಕು” ಎಂದು ನವರೆ ತಿಳಿಸಿದ್ದಾರೆ.

“ನನ್ನ ತಂದೆ ಅವರ ಸಮವಸ್ತ್ರವನ್ನು ಪ್ರೀತಿಸುತ್ತಿದ್ದರು ಮತ್ತು ಅದಕ್ಕೆ ತನ್ನ ಸ್ವಂತ ಪರಿವಾರಕ್ಕಿಂತಲೂ ಹೆಚ್ಚಿನ ಮಹತ್ವ ನೀಡುತ್ತಿದ್ದರು. ಯಾವುದೇ ಧರ್ಮ ಯಾರನ್ನೂ ಕೊಲ್ಲಬೇಕೆಂದು ಹೇಳುವುದಿಲ್ಲ. ಸೋಲಿಸಬೇಕಿರುವುದು ಸಿದ್ಧಾಂತವನ್ನು. ಕರ್ಕರೆ ಅವರು ತನ್ನ ಜೀವನದುದ್ದಕ್ಕೂ ಇತರರಿಗೆ ನೆರವಾಗುತ್ತಿದ್ದರು. ಸಾವಿನ ಸಮಯದಲ್ಲೂ ಅವರು ತನ್ನ ನಗರ, ತನ್ನ ದೇಶವನ್ನು ರಕ್ಷಿಸಲು ಪ್ರಯತ್ನಿಸಿದರು. ಎಲ್ಲರೂ ಅದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಎಂದು ನಾನು ಬಯಸುತ್ತೇನೆ” ಎಂದು ನವರೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

2008ರ ಮಾಲೆಗಾಂವ್ ಸ್ಫೋಟ ಆರೋಪಿಯಾಗಿರುವ ಪ್ರಜ್ಞಾ ಠಾಕೂರ್ ಬಿಜೆಪಿಯಿಂದ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಆಕೆಯ ನಾಮಪತ್ರವನ್ನು ಹಿಂದಕ್ಕೆ ಪಡೆದುಕೊಳ್ಳುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗ ಪತ್ರ ಬರೆಯಲಾಗಿದ್ದು ಅದಕ್ಕೆ 71 ಮಾಜಿ ಅಧಿಕಾರಿಗಳು ಸಹಿ ಹಾಕಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X