Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಜೆಪಿ ಬಗ್ಗೆ ಮೌನವಾಗಿರುವ ಚು.ಆಯೋಗ...

ಬಿಜೆಪಿ ಬಗ್ಗೆ ಮೌನವಾಗಿರುವ ಚು.ಆಯೋಗ ಜನರನ್ನು ನಿರಾಶೆಗೊಳಿಸಿದೆ: ಚಿದಂಬರಂ

ವಾರ್ತಾಭಾರತಿವಾರ್ತಾಭಾರತಿ28 April 2019 9:16 PM IST
share
ಬಿಜೆಪಿ ಬಗ್ಗೆ ಮೌನವಾಗಿರುವ ಚು.ಆಯೋಗ ಜನರನ್ನು ನಿರಾಶೆಗೊಳಿಸಿದೆ: ಚಿದಂಬರಂ

ಹೊಸದಿಲ್ಲಿ,ಎ.28: ಚುನಾವಣಾ ಆಯೋಗವು ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆಯ ಅತಿರೇಕಗಳಿಗೆ,ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಗಳಿಗೆ ಮತ್ತು ಬಿಜೆಪಿಯು ಮಾಡುತ್ತಿರುವ ಭಾರೀ ವೆಚ್ಚಗಳ ಬಗ್ಗೆ ಮೂಕಪ್ರೇಕ್ಷಕವಾಗಿದೆ ಎಂದು ರವಿವಾರ ಆರೋಪಿಸಿದ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು,ಅದು ಭಾರತದ ಜನರನ್ನು ತೀರ ನಿರಾಶೆಗೊಳಿಸಿದೆ ಎಂದು ಹೇಳಿದರು.

ಬಿಜೆಪಿಯು ರಾಷ್ಟ್ರವಾದವನ್ನು ಚುನಾವಣಾ ವಿಷಯವನ್ನಾಗಿ ಮಾಡಿಕೊಂಡಿರುವುದು ಎನ್‌ ಡಿಎ ಸರಕಾರದ ವೈಫಲ್ಯಗಳನ್ನು ಮುಚ್ಚಿಡುವ ತಂತ್ರವಾಗಿದೆ ಎಂದು ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅವರು ತಿಳಿಸಿದರು.

ಲೋಕಸಭಾ ಚುನಾವಣೆಗಳ ಬಳಿಕ ಯುಪಿಎ ಅಧಿಕಾರಕ್ಕೆ ಬರುವ ಸಾಧ್ಯತೆ,ಕೆಲವು ಪ್ರತಿಪಕ್ಷ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ,ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ಇತ್ತೀಚಿನ ದಾಳಿಗಳು,ಜೊತೆಗೆ ಇತರ ವಿಷಯಗಳ ಕುರಿತು ಪ್ರಶ್ನೆಗಳಿಗೆ ಸಂದರ್ಶನದಲ್ಲಿ ಚಿದಂಬರಂ ಉತ್ತರಿಸಿದರು.

ಪ್ರತಿಯೊಬ್ಬ ಪ್ರತಿಪಕ್ಷ ಅಭ್ಯರ್ಥಿಗಳ ಲೆಕ್ಕಗಳನ್ನು,ಧ್ವಜಖರೀದಿಯಂತಹ ಸಣ್ಣ ಲೆಕ್ಕವನ್ನೂ ಚುನಾವಣಾ ಆಯೋಗವು ಕೇಳುತ್ತಿದೆ. ಅದು ಸಾಂಕೇತಿಕ ವೆಚ್ಚವನ್ನೂ ಅಭ್ಯರ್ಥಿಯ ವೆಚ್ಚದ ಲೆಕ್ಕಕ್ಕೆ ಸೇರಿಸುತ್ತಿದೆ. ಇದೇ ಮಾನದಂಡವನ್ನು ಬಳಸಿದರೆ ಪ್ರತಿಯೊಬ್ಬ ಬಿಜೆಪಿ ಅಭ್ಯರ್ಥಿಯೂ ಚುನಾವಣೆಗೆ ಅನರ್ಹನಾಗುತ್ತಾನೆ ಎಂದರು.

ಬಿಜೆಪಿಯು ರಾಷ್ಟ್ರವಾದವನ್ನು ಚುನಾವಣಾ ಪ್ರಚಾರ ವಿಷಯವನ್ನಾಗಿ ಮಾಡಿಕೊಂಡಿರುವ ಕುರಿತು ಕೇಳಿದಾಗ, ಬಿಜೆಪಿಯು ಅಧಿಕಾರಕ್ಕೆ ಬರುವ ಮುನ್ನ ಭಾರತೀಯರು ರಾಷ್ಟ್ರವಿರೋಧಿಗಳಾಗಿದ್ದರೇ ಎಂದು ಮರುಪ್ರಶ್ನಿಸಿದ ಅವರು,ರಾಷ್ಟ್ರವಾದವು ಅವರ ವೈಫಲ್ಯವನ್ನು ಬಚ್ಚಿಡಲು ಘೋಷಣೆಯಾಗಿದೆ. ಪ್ರತಿಯೊಬ್ಬ ಭಾರತೀಯನೂ ರಾಷ್ಟ್ರಪ್ರೇಮಿಯಾಗಿದ್ದಾನೆ. ಯಾವುದೇ ರಾಷ್ಟ್ರಪ್ರೇಮಿಯನ್ನು ರಾಷ್ಟ್ರವಿರೋಧಿ ಎನ್ನುವಂತಿಲ್ಲ. ಯಾವುದೇ ಅರ್ಥವಿಲ್ಲದಿರುವ ರಾಷ್ಟ್ರವಾದದ ಕಲ್ಪನೆಯನ್ನು ಮಾರಾಟ ಮಾಡುವಂತೆ ಬಿಜೆಪಿ ಮಾಧ್ಯಮಗಳ ತಲೆ ಕೆಡಿಸಿದೆ. ಪ್ರತಿ ಭಾರತೀಯನೂ ಐದು ವರ್ಷಗಳ ಹಿಂದಿಗಿಂತ ಹೆಚ್ಚು ಸುಖಿಯಾಗಿದ್ದಾನೆಯೇ ಎನ್ನುವುದು ಏಕೈಕ ಸುಸಂಗತ ಪ್ರಶ್ನೆಯಾಗಿದೆ. ಇಲ್ಲ ಎಂದು ತಾನು ಹೇಳುತ್ತೇನೆ. ಪ್ರತಿಯೊಬ್ಬ ಭಾರತೀಯನೂ ಭೀತಿಯಲ್ಲಿ ಬದುಕುತ್ತಿದ್ದಾನೆ. ಮಹಿಳೆಯರು,ದಲಿತರು,ಪರಿಶಿಷ್ಟ ಪಂಗಡಗಳು,ಪತ್ರಕರ್ತರು,ಶಿಕ್ಷಣತಜ್ಞರು,ಹೀಗೆ ಎಲ್ಲರೂ ಭೀತಿಯಿಂದಲೇ ಬದುಕುತ್ತಿದ್ದಾರೆ ಎಂದರು.

ಬಿಜೆಪಿ ಅಧಿಕಾರಕ್ಕೆ ಮರಳುವುದಿಲ್ಲ ಎಂದು ತನಗೆ ಸಂಪೂರ್ಣ ವಿಶ್ವಾಸವಿದೆ ಎಂದ ಚಿದಂಬರಂ,ಚುನಾವಣೆಗಳ ಬಳಿಕ ಎಸ್‌ಪಿ,ಬಿಎಸ್‌ಪಿ ಮತ್ತು ತೃಣಮೂಲದಂತಹ ಎಲ್ಲ ಬಿಜೆಪಿಯೇತರ ಪಕ್ಷಗಳು ಸ್ಥಿರ ಸರಕಾರದ ರಚನೆಗೆ ಕಾಂಗ್ರೆಸ್‌ನೊಂದಿಗೆ ಕೈ ಜೋಡಿಸುತ್ತವೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X