Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡ್ಯ ಜನ ಈಗಾಗಲೇ ಫಲಿತಾಂಶ ನೀಡಿದ್ದಾರೆ:...

ಮಂಡ್ಯ ಜನ ಈಗಾಗಲೇ ಫಲಿತಾಂಶ ನೀಡಿದ್ದಾರೆ: ಎನ್.ಚಲುವರಾಯಸ್ವಾಮಿ

ಚಲುವರಾಯಸ್ವಾಮಿ-ಸುಮಲತಾ ಅಂಬರೀಷ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ28 April 2019 9:50 PM IST
share
ಮಂಡ್ಯ ಜನ ಈಗಾಗಲೇ ಫಲಿತಾಂಶ ನೀಡಿದ್ದಾರೆ: ಎನ್.ಚಲುವರಾಯಸ್ವಾಮಿ

ಮಂಡ್ಯ, ಎ.28: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಪ್ರಚಾರದಿಂದ ದೂರ ಉಳಿದು ಸುದ್ದಿಯಾಗಿರುವ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಎನ್.ಚಲುವರಾಯಸ್ವಾಮಿ ರವಿವಾರ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಅವರ ಜತೆ ಕಾಣಿಸಿಕೊಂಡರು.

ನಗರದ ಕನಕಭವನದಲ್ಲಿ ನಡೆದ ಕಾಂಗ್ರೆಸ್ ಮುಖಂಡರೊಬ್ಬರ ಪುತ್ರನ ಮದುವೆಗೆ ಆಗಮಿಸಿದ್ದ ಚಲುವರಾಯಸ್ವಾಮಿ ಮತ್ತು ಸುಮಲತಾ ಅವರು, ಭೇಟಿಯಾಗಿ ಪರಸ್ಪರ ಅಭಿನಂದನೆ ವಿನಿಮಯ ಮಾಡಿಕೊಂಡು ಕೆಲಕಾಲ ಚರ್ಚಿಸಿದರು.

ನಂತರ ಸುದ್ದಿಗಾರರ ಜತೆ ಮಾತನಾಡಿದ ಚಲುವರಾಯಸ್ವಾಮಿ, ಪಕ್ಷೇತರ ಅಭ್ಯರ್ಥಿ ಸ್ವಾಭಿಮಾನದ ಚುನಾವಣೆ ಮಾಡಿದ್ದಾರೆ. ಎಲ್ಲಾ ರಿಪೋರ್ಟ್ ಕೂಡ ನಮ್ಮ ಪರ ಬಂದಿದೆ ಅನ್ನೋದನ್ನೂ ಕೇಳಿದ್ದೀವಿ. ಮಂಡ್ಯ ಜನ ಈಗಾಗಲೇ ತಮ್ಮ ಫಲಿತಾಂಶ ನೀಡಿದ್ದಾರೆ. ಫಲಿತಾಂಶ ಬರೋವರೆಗೂ ಕಾಯುವಂತಹ ತಾಳ್ಮೆ ನಮಗಿದೆ ಎಂದರು.

ಸರಕಾರ ಅಷ್ಟೇ ಅಲ್ಲದೇ, ಸುಮಾರು 15-20 ಮುಖಂಡರಿದ್ದರು. ಮಾಜಿ ಪ್ರಧಾನಿ, ಸಿಎಂ, ಸಿಎಂ ಕುಟುಂಬ ಎಲ್ಲವೂ ಮಂಡ್ಯದಲ್ಲಿ ಇತ್ತು. ಹೀಗಿದ್ದೂ ಅವರಿಗೆ ವಿರುದ್ಧ ರಿಪೋರ್ಟ್ ಬಂದರೆ ಯಾರು ಸಹಿಸುತ್ತಾರೆ ಹೇಳಿ. ಎಲ್ಲವೂ ಮತಯಂತ್ರದ ಒಳಗಡೆ ಇದೆ. ಆದರೆ, ಎಲ್ಲರೂ ಅವರಿಗೆ ಬೇಕಾದಂತೆ ಅಭಿಪ್ರಾಯ ಮೂಡಿಸಿಕೊಳ್ಳೋದು ಸಹಜ ಎಂದು ಅವರು ವ್ಯಂಗ್ಯವಾಡಿದರು.

ನಿಖಿಲ್ ಪರ ಹೆಚ್ಡಿಕೆ ಸೇರಿದಂತೆ ಇಡೀ ಸರಕಾರ ದುಡಿದಿದೆ.  ಸುಮಲತಾ ಪರ ದರ್ಶನ್, ಯಶ್ ಸೇರಿ ಅಸಂಖ್ಯಾತ ಜನ ದುಡಿದಿದ್ದಾರೆ. ಕಾದುನೋಡಿ ಫಲಿತಾಂಶದ ಬಗ್ಗೆ ಮಾತಾಡುತ್ತೇವೆ. ಇಡೀ ದೇಶವೇ ಈ ಚುನಾವಣೆಯನ್ನು ನೋಡಿದೆ. ಹೀಗಾಗಿ ಉತ್ತಮವಾದ ಫಲಿತಾಂಶ ಬಂದರೆ ಅರ್ಥ ಇರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಮಂಡ್ಯ ಫಲಿತಾಂಶ ರಾಜ್ಯ ಸರಕಾರದ ಮೇಲೆ ಪರಿಣಾಮ ಬೀರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ, ಆ ಬಗ್ಗೆ ಫಲಿತಾಂಶ ಬಂದ ಬಳಿಕ ವಿಶ್ಲೇಷಣೆ ಮಾಡುತ್ತೇವೆ. ಸದ್ಯಕ್ಕೆ ಆ ಬಗ್ಗೆ ನಾನೇನೂ ಮಾತಾಡಲ್ಲ ಎಂದರು. ಅವರು ದೊಡ್ಡವರು. ಅವರೇ ತೀರ್ಮಾನ ಮಾಡುತ್ತಾರೆ ಎಂದು ನಿಖಿಲ್ ಸೋತರೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವ ಸಚಿವ ಪುಟ್ಟರಾಜುಗೆ ತಿರುಗೇಟು ನೀಡಿದರು.

ಸುಮಲತಾ ಅವರಿಗೆ ತಾನು ಬೆಂಬಲ ನೀಡಿದ್ದಾರೆನ್ನುವ ವಿಚಾರದ ಬಗ್ಗೆ ಚರ್ಚೆಯಾಗಲಿ, ಅಭ್ಯಂತರವಿಲ್ಲ. ನಮ್ಮ ಪಕ್ಷ, ಮುಖಂಡರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಇಬ್ಬರು ಅಭ್ಯರ್ಥಿಗಳೂ ಬೆಟ್ಟಿಂಗ್ ಬೇಡವೆಂದು ಮನವಿ ಮಾಡಿದ್ದಾರೆ. ಹಾಗಾಗಿ ಬೆಟ್ಟಿಂಗ್ ಕಟ್ಟಿರುವವರು ಹಿಂಪಡೆಯುವುದು ಒಳ್ಳೆಯದು ಎಂದು ಅವರು ಸಲಹೆ ನೀಡಿದರು.

ನನಗೆ ಗೆಲುವಿನ ವಿಶ್ವಾಸವಂತೂ ಇದೆ: ಸುಮಲತಾ

ಸುಮಲತಾ ಅಂಬರೀಷ್ ಮಾತನಾಡಿ, ಒಂದೊಂದು ಸಮೀಕ್ಷೆ ಒಬ್ಬೊಬ್ಬರ ಪರ ಬರುತ್ತಿವೆ. ಸಮೀಕ್ಷೆಗಳನ್ನು ನಾವು ತುಂಬಾ ಸೀರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಏನೇ ಇದ್ದರೂ ಮೇ 23ರವರೆಗೆ ಕಾದು ನೋಡೋಣ. ಸಮೀಕ್ಷೆ ಬಗ್ಗೆ ನಾನು ಡೀಪ್ ಆಗಿ ಯೋಚನೆ ಮಾಡಲ್ಲ. ನನಗೆ ಗೆಲುವಿನ ವಿಶ್ವಾಸ ಅಂತೂ ಇದೆ. ನಾನ್ಯಾವುದೇ ಸರ್ವೇ ಮಾಡಿಸಿಲ್ಲ ಎಂದರು.

ಮದುವೆ ಸಮಾರಂಭದಲ್ಲಿ ಚಲುವರಾಯಸ್ವಾಮಿ ನಾನು ಮುಖಾಮುಖಿಯಾಗಿದ್ದೇವೆ. ಆದರೆ, ರಾಜಕೀಯವಾಗಿ ಏನೂ ಮಾತಾಡಿಲ್ಲ. ಚುನಾವಣೆಗೆ ಮುನ್ನವೂ ಅಷ್ಟು ಡೀಪಾಗಿ ಏನೂ ಚರ್ಚೆ ಮಾಡಿಲ್ಲ. ಚುನಾವಣೆ ಮುಗಿದಿದೆ, ಸ್ವಲ್ಪ ರೆಸ್ಟ್ ಮಾಡಿ ಎಂದು ಸಲಹೆ ನೀಡಿದರು. ಇವಾಗ ನನಗೆ ವಿಶ್ರಾಂತಿ ಸಮಯ. ಚುನಾವಣೆ ಬಗ್ಗೆ ಏನೂ ಮಾತಾಡಲ್ಲ ಎಂದು ಅವರು ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X