Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಂಬತ್ತು ರಾಜ್ಯಗಳಲ್ಲಿ ನಾಲ್ಕನೇ ಹಂತದ...

ಒಂಬತ್ತು ರಾಜ್ಯಗಳಲ್ಲಿ ನಾಲ್ಕನೇ ಹಂತದ ಮತದಾನ ಆರಂಭ

ವಾರ್ತಾಭಾರತಿವಾರ್ತಾಭಾರತಿ29 April 2019 9:12 AM IST
share
ಒಂಬತ್ತು ರಾಜ್ಯಗಳಲ್ಲಿ ನಾಲ್ಕನೇ ಹಂತದ ಮತದಾನ ಆರಂಭ

ಹೊಸದಿಲ್ಲಿ, ಎ.29: ಪ್ರಸಕ್ತ ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಇಂದು ಬೆಳಗ್ಗೆ ಆರಂಭವಾಗಿದ್ದು, ಕೆಲ ತಿಂಗಳುಗಳ ಹಿಂದಷ್ಟೇ ಬಿಜೆಪಿ ಹೀನಾಯ ಸೋಲು ಕಂಡ ರಾಜಸ್ಥಾನ ಹಾಗೂ ಮಧ್ಯಪ್ರದೇಶ ಸೇರಿದಂತೆ ಒಂಬತ್ತು ರಾಜ್ಯಗಳ 72 ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.

ಪಶ್ಚಿಮ ಬಂಗಾಳದ ಕೆಲ ಮತಗಟ್ಟೆಗಳಲ್ಲಿ ಇವಿಎಂ ಸಮಸ್ಯೆಯಿಂದಾಗಿ ಮತದಾನ ವಿಳಂಬವಾಗಿ ಆರಂಭಗೊಂಡಿತ್ತು. ಮುಂಬೈನ ಜಿ.ಡಿ.ಸೋಮಾಲಿ ಶಾಲೆಯ ಮತಗಟ್ಟೆಯಲ್ಲಿ ಉದ್ಯಮಿ ಅನಿಲ್ ಅಂಬಾನಿ ಮತ ಚಲಾಯಿಸಿದರು. ಮುಂಬೈ ದಕ್ಷಿಣ ಕ್ಷೇತ್ರದಲ್ಲಿ ಮುಂಜಾನೆಯೇ ಮತದಾರರು ಅತ್ಯುತ್ಸಾಹದಿಂದ ಮತಗಟ್ಟೆ ಎದುರು ಸಾಲುಗಟ್ಟಿ ನಿಂತಿರುವ ದೃಶ್ಯ ಕಂಡುಬಂದಿದೆ.

ದೇಶದ ವಾಣಿಜ್ಯ ರಾಜಧಾನಿ ಎನಿಸಿದ ಮುಂಬೈ ಮತದಾರರು ಕೂಡಾ ಇಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮಧ್ಯಪ್ರದೇಶದ ಆರು, ರಾಜಸ್ಥಾನದ 13 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ. ಕೆಲ ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಯಿಂದ ಅಧಿಕಾರ ಕಿತ್ತುಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿಗೆ ಈ ಚುನಾವಣೆ ಅಗ್ನಿಪರೀಕ್ಷೆಯಾಗಿದೆ. ಆರು ಕೇಂದ್ರ ಸಚಿವರು ಸೇರಿದಂತೆ ಹಲವು ಮಂದಿ ಗಣ್ಯರು ಈ ಸುತ್ತಿನಲ್ಲಿ ಕಣದಲ್ಲಿದ್ದಾರೆ. ಏಳು ಹಂತಗಳ ಚುನಾವಣಾ ಪ್ರಕ್ರಿಯೆ ಮೇ 19ರಂದು ನಡೆಯಲಿದ್ದು, ಮೇ 23ರಂದು ಎಣಿಕೆ ಕಾರ್ಯ ನಡೆಯಲಿದೆ.

ಮಹಾರಾಷ್ಟ್ರದ 17, ರಾಜಸ್ಥಾನ ಹಾಗೂ ಉತ್ತರ ಪ್ರದೇಶದ ತಲಾ 13, ಪಶ್ಚಿಮ ಬಂಗಾಳದ 8, ಮಧ್ಯಪ್ರದೇಶ ಹಾಗೂ ಒಡಿಶಾದ ತಲಾ 6, ಬಿಹಾರದ 5, ಜಾರ್ಖಂಡ್‌ನ 3 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಕ್ಷೇತ್ರದ ಭಾಗಶಃ ಮತಗಟ್ಟೆಗಳಲ್ಲಿ ಮತದಾನ ಪ್ರಗತಿಯಲ್ಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮಧ್ಯಪ್ರದೇಶ ಹಾಗೂ ರಾಜಸ್ಥಾನದ 54 ಸ್ಥಾನಗಳ ಪೈಕಿ 52ನ್ನು ಗೆದ್ದುಕೊಂಡಿತ್ತು.

ಮುಂಬೈನ ಕ್ಷೇತ್ರಗಳು ದೇಶದ ಗಮನ ಸೆಳೆದಿದ್ದು, ಉತ್ತರ ಕೇಂದ್ರ ಮುಂಬೈನಲ್ಲಿ ಕಾಂಗ್ರೆಸ್‌ನ ಪ್ರಿಯಾ ದತ್ ವಿರುದ್ಧ ಬಿಜೆಪಿಯ ಪೂನಮ್ ಮಹಾಜನ್ ಸೆಣೆಸುತ್ತಿದ್ದಾರೆ. ಬಿಜೆಪಿಯ ಹಾಲಿ ಸಂಸದ ಗೋಪಾಲ್ ಶೆಟ್ಟಿಯವರು ಮುಂಬೈ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಊರ್ಮಿಳಾ ಮಾತೋಂಡ್ಕರ್ ಅವರ ಸವಾಲು ಎದುರಿಸಬೇಕಿದೆ. ಮುಂಬೈ ದಕ್ಷಿಣ ಕ್ಷೇತ್ರದಿಂದ ಶಿವಸೇನೆಯ ಹಾಲಿ ಸಂಸದ ಅರವಿಂದ್ ಸಾವಂತ್ ವಿರುದ್ಧ ಕಾಂಗ್ರೆಸ್ ಮುಖಂಡ ಮಿಲಿಂದ ದೇವೂರ ಕಣದಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X