Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ರಮ ಮತದಾನದ ಸಾಧ್ಯತೆ: ಸಂಜಯ್ ಝಾ

ಅಕ್ರಮ ಮತದಾನದ ಸಾಧ್ಯತೆ: ಸಂಜಯ್ ಝಾ

ನೈಲ್ ಪಾಲಿಶ್ ರಿಮೂವರ್‌ನಿಂದ ಶಾಯಿ ಅಳಿಸಿದ ಕಾಂಗ್ರೆಸ್ ನಾಯಕ

ವಾರ್ತಾಭಾರತಿವಾರ್ತಾಭಾರತಿ29 April 2019 10:03 PM IST
share
ಅಕ್ರಮ ಮತದಾನದ ಸಾಧ್ಯತೆ: ಸಂಜಯ್ ಝಾ

ಹೊಸದಿಲ್ಲಿ, ಎ.29: ಮತ ಚಲಾಯಿಸಿದವರ ಬೆರಳಿಗೆ ಮತಗಟ್ಟೆ ಅಧಿಕಾರಿಗಳು ಹಾಕುವ ‘ಅಳಿಸಲಾಗದ ಶಾಯಿ ಗುರುತನ್ನು’ ಸುಲಭವಾಗಿ ಅಳಿಸಬಹುದು. ಆದ್ದರಿಂದ ಚುನಾವಣೆಯಲ್ಲಿ ಅಕ್ರಮ ನಡೆದಿರುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ವಕ್ತಾರ ಸಂಜಯ್ ಝಾ ಹೇಳಿದ್ದಾರೆ.

ನೈಲ್ ಪಾಲಿಶ್ ರಿಮೂವರ್‌ನಿಂದ ಶಾಯಿ ಗುರುತನ್ನು ತೆಗೆಯಲು ಸಾಧ್ಯವಿದೆ. ಕರ್ನಾಟಕದ ಮೈಸೂರಿನಲ್ಲಿರುವ ಕಂಪೆನಿಯೊಂದು ತಯಾರಿಸುವ ಈ ಶಾಯಿಯ ಗುರುತು ಮತದಾನ ಮಾಡಿದ ಕನಿಷ್ಟ ಒಂದು ವಾರದವರೆಗೆ ಉಳಿಯಬೇಕು. ಆದರೆ ಈ ಬಾರಿಯ ಚುನಾವಣೆಗೆ ಬಳಸಿರುವ ಶಾಯಿಯನ್ನು ಮತದಾನ ಮಾಡಿದ ತಕ್ಷಣ ನೈಲ್ ಪಾಲಿಶ್ ರಿಮೂವರ್ ಬಳಸಿ ಅಳಿಸಬಹುದು ಎಂದು ಝಾ ಹೇಳಿದ್ದಾರೆ.

ಸೋಮವಾರ ಬೆಳಿಗ್ಗೆ 9:52ಕ್ಕೆ ಮತದಾನ ಹಾಕಿದ ಗುರುತಾಗಿ ಎಡಗೈಯ ಬೆರಳಿಗೆ ಶಾಯಿ ಗುರುತು ಹಾಕಿಕೊಂಡಿರುವ ಫೋಟೋವನ್ನು ಟ್ವಿಟರ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ಬಳಿಕ ಸುಮಾರು ಒಂದು ಗಂಟೆಯ ಬಳಿಕ, ಬೆಳಿಗ್ಗೆ 10:38ಕ್ಕೆ ಕೈ ಬೆರಳಿನಲ್ಲಿದ್ದ ಶಾಯಿ ಗುರುತನ್ನು ತೆಗೆದು ಹಾಕಿರುವ ಫೋಟೊವನ್ನು ಝಾ ಪೋಸ್ಟ್ ಮಾಡಿದ್ದಾರೆ. ಶಾಯಿ ಗುರುತಿನ ಬಗ್ಗೆ ಎಪ್ರಿಲ್ 11ರಂದು ನಡೆದ ಪ್ರಥಮ ಹಂತದ ಮತದಾನದ ಸಂದರ್ಭವೂ ಹಲವರು ದೂರು ನೀಡಿದ್ದರು. ಸುಲಭದಲ್ಲಿ ಅಳಿಸಬಹುದಾದ ಶಾಯಿ ಗುರುತು ಎಂಬ ಟಿಪ್ಪಣಿಯೊಂದಿಗೆ ತಮ್ಮ ಹೇಳಿಕೆಯನ್ನು ನೋಯ್ಡಾ ಮೂಲದ ಪತ್ರಕರ್ತೆ ರಿತು ಕಪೂರ್ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದು ಇದನ್ನು ಚುನಾವಣಾ ಆಯೋಗದ ಅಧಿಕೃತ ವಕ್ತಾರೆ ಶೆಫಾಲಿ ಶರಣ್‌ಗೆ ಟ್ಯಾಗ್ ಮಾಡಿದ್ದರು.

ಎಪ್ರಿಲ್ 18ರಂದು ನಡೆದ ದ್ವಿತೀಯ ಹಂತದ ಮತದಾನದ ಸಂದರ್ಭವೂ ಬೆಂಗಳೂರಿನಲ್ಲಿ ಇದೇ ರೀತಿಯ ದೂರು ವ್ಯಕ್ತವಾಗಿತ್ತು. ಓರ್ವ ಪೌರರು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಶಾಯಿ ಗುರುತನ್ನು ಸುಲಭದಲ್ಲಿ ಅಳಿಸಬಹುದಾಗಿದೆ ಎಂದು ತಿಳಿಸಿದ್ದರು. ಈ ಆಕ್ಷೇಪಗಳಿಗೆ ಉತ್ತರಿಸಿದ್ದ ಉಪಚುನಾವಣಾ ಆಯುಕ್ತ ಚಂದ್ರಭೂಷಣ್ ಕುಮಾರ್, ಪ್ರತೀ ಬಾರಿ ಚುನಾವಣೆಯಲ್ಲಿ ಬಳಸುವ ಮುನ್ನ ಈ ಶಾಯಿಗಳನ್ನು ಸಿಎಸ್‌ಐಆರ್ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಸಾಮಾನ್ಯವಾಗಿ ಶಾಯಿ ಗುರುತನ್ನು ತಕ್ಷಣ ಅಳಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಚುನಾವಣಾ ಆಯೋಗವು 2019ರ ಲೋಕಸಭಾ ಚುನಾವಣೆಯಲ್ಲಿ ಬಳಸಲು 33 ಕೋಟಿ ರೂ. ವೆಚ್ಚದಲ್ಲಿ 26 ಲಕ್ಷ ಬಾಟಲಿ ಶಾಯಿ ಪೂರೈಸಲು ಕೋರಿಕೆ ಸಲ್ಲಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X