Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೇಮಂತ್ ಕರ್ಕರೆ ಕಾರ್ಯನಿರ್ವಹಣೆ...

ಹೇಮಂತ್ ಕರ್ಕರೆ ಕಾರ್ಯನಿರ್ವಹಣೆ ‘ಸಂಶಯಾತೀತವಲ್ಲ’ ಎಂದ ಸುಮಿತ್ರಾ ಮಹಾಜನ್!

ವಾರ್ತಾಭಾರತಿವಾರ್ತಾಭಾರತಿ30 April 2019 1:27 PM IST
share
ಹೇಮಂತ್ ಕರ್ಕರೆ ಕಾರ್ಯನಿರ್ವಹಣೆ ‘ಸಂಶಯಾತೀತವಲ್ಲ’ ಎಂದ ಸುಮಿತ್ರಾ ಮಹಾಜನ್!

ಭೋಪಾಲ್, ಎ.30: ಉಗ್ರರಿಂದ ಹತರಾದ ಮಹಾರಾಷ್ಟ್ರ ಎಟಿಎಸ್ ಮಾಜಿ ಮುಖ್ಯಸ್ಥ ಹೇಮಂತ್ ಕರ್ಕರೆ ಕುರಿತಂತೆ ಭೋಪಾಲದ ಬಿಜೆಪಿ ಅಭ್ಯರ್ಥಿ ಪ್ರಜ್ಞಾ ಸಿಂಗ್ ಠಾಕುರ್ ನೀಡಿದ ಹೇಳಿಕೆಯಿಂದ ಎದ್ದ ವಿವಾದ ತಣ್ಣಗಾಗುವ ಮೊದಲೇ ನಿರ್ಗಮನ ಲೋಕಸಭಾ ಸ್ಪೀಕರ್ ಹಾಗೂ ಇಂದೋರ್ ಕ್ಷೇತ್ರದ ಹಾಲಿ ಸಂಸದೆ ಸುಮಿತ್ರಾ ಮಹಾಜನ್ ಕರ್ಕರೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕರ್ತವ್ಯದ ವೇಳೆ ಹತರಾಗಿದ್ದರಿಂದ ಕರ್ಕರೆ ‘ಹುತಾತ್ಮ’ರೆಂದು ಪರಿಗಣಿತರಾಗಿದ್ದಾರೆ. ಆದರೆ ಮಹಾರಾಷ್ಟ್ರ ಎಟಿಎಸ್ ಮುಖ್ಯಸ್ಥರಾಗಿ ಅವರ ಪಾತ್ರ ‘ಸಂಶಯಾತೀತವಲ್ಲ’ ಎಂದು ಸುಮಿತ್ರಾ ಮಹಾಜನ್ ಹೇಳಿದ್ದಾರೆ.

“ಹೇಮಂತ್ ಕರ್ಕರೆ ಬಗ್ಗೆ ಎರಡು ವಿಚಾರಗಳಿವೆ, ಅವರು ಕರ್ತವ್ಯ ನಿರ್ವಹಿಸುವ ವೇಳೆ ಸಾವಿಗೀಡಾಗಿದ್ದರಿಂದ ಹುತಾತ್ಮರಾಗಿದ್ದಾರೆ. ಆದರೆ ಒಬ್ಬ ಪೊಲೀಸ್ ಅಧಿಕಾರಿಯಾಗಿ ಅವರು ಮಾಡಿದ್ದು ಸರಿಯಲ್ಲವೆಂದರೆ ಅದು ಸರಿಯಲ್ಲ ಎಂದು ನಾವು ಹೇಳುತ್ತೇವೆ'' ಎಂದು ಮಾಧ್ಯಮವೊಂದರ ಜತೆ ಮಾತನಾಡುತ್ತಾ ಸುಮಿತ್ರಾ ಮಹಾಜನ್ ಹೇಳಿದ್ದಾರೆ.

ತಮ್ಮ ಬಳಿ ಯಾವುದೇ ಪುರಾವೆಯಿಲ್ಲವಾದರೂ ಕಾಂಗ್ರೆಸ್ ನಾಯಕ ಹಾಗೂ ಆ ಪಕ್ಷದ ಭೋಪಾಲ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್ ಅವರು ಕರ್ಕರೆಯ ಸ್ನೇಹಿತರಾಗಿದ್ದಾರೆಂದು ತಾವು ಕೇಳಿದ್ದಾಗಿ ತಿಳಿಸಿದ್ದಾರೆ.

“ಸಿಂಗ್ ಅವರು ಮಧ್ಯ ಪ್ರದೇಶ ಸಿಎಂ ಆಗಿದ್ದಾಗ ಆರೆಸ್ಸೆಸ್ ಬಾಂಬ್ ತಯಾರಿಸುತ್ತದೆ ಹಾಗೂ ಉಗ್ರ ಸಂಸ್ಥೆಯಾಗಿದೆ ಎಂದು ಆಗಾಗ ಆರೋಪಿಸುತ್ತಿದ್ದರು. ಮಹಾರಾಷ್ಟ್ರ ಎಟಿಎಸ್ ಇಂದೋರ್ ನಗರದಲ್ಲಿ ನಡೆಸಿದ ಬಂಧನಗಳು ಮಾಜಿ ಸಿಎಂ ಸಿಂಗ್ ಅವರ ಅಣತಿಯಂತೆ ನಡೆದಿತ್ತು” ಎಂದು ಮಹಾಜನ್ ಆರೋಪಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ದಿಗ್ವಿಜಯ ಸಿಂಗ್, “ನೀವು ಅಶೋಕ ಚಕ್ರ ಪ್ರಶಸ್ತಿ ಪುರಸ್ಕೃತ ಹೇಮಂತ್ ಕರ್ಕರೆ ಜತೆ ನನಗೆ ನಂಟು ಕಲ್ಪಿಸಿದ್ದಕ್ಕೆ ಹೆಮ್ಮೆಯಿದೆ. ನಿಮ್ಮ ಸಮೀಪವರ್ತಿಗಳು ಅವರನ್ನು ಅವಮಾನಿಸಿರಬಹುದು. ಆದರೆ ದೇಶದ ಹಿತಾಸಕ್ತಿ ಹಾಗೂ ಏಕತೆಯ ಬಗ್ಗೆ ಮಾತನಾಡುವವರನ್ನು ನಾನು ಯಾವತ್ತೂ ಬೆಂಬಲಿಸಿದ್ದೇನೆ'' ಎಂದು ಟ್ವೀಟ್ ಮಾಡಿದ್ದಾರೆ.

“ಪೊಲೀಸ್ ಕಸ್ಟಡಿಯಲ್ಲಿ ಹಿಂಸೆಗೊಳಗಾದವರು ಪ್ರಜ್ಞಾ ಠಾಕುರ್ ಒಬ್ಬರೇ ಅಲ್ಲ'' ಎಂದ ಮಹಾಜನ್, ಇಂದೋರ್ ನಗರದಿಂದ ನವೆಂಬರ್ 2008ರಲ್ಲಿ ವಿಚಾರಣೆಗಾಗಿ ಮಹಾರಾಷ್ಟ್ರ ಎಟಿಎಸ್ ನಿಂದ ವಶಕ್ಕೆ ಪಡೆಯಲಾಗಿದ್ದ ದಿಲೀಪ್ ಪಟಿದಾರ್   ಉದಾಹರಣೆಯನ್ನೂ ನೀಡಿದರು. “ಪಟಿದಾರ್ ಹಿಂದಿರುಗಲೇ ಇಲ್ಲ, ಅವರ ನಾಪತ್ತೆ ವಿಚಾರವನ್ನು ಲೋಕಸಭೆಯಲ್ಲಿ ಹಾಗೂ ನ್ಯಾಯಾಲಯಗಳಲ್ಲೂ ಎತ್ತಲಾಗಿತ್ತು. ಆತನನ್ನು ಕಸ್ಟಡಿಯಲ್ಲಿ ಕೊಲ್ಲಲಾಗಿದೆ. ಇದು ಸತ್ಯ, ಯಾರಾದರೂ ಉತ್ತರಗಳನ್ನು ನೀಡಲೇಬೇಕು'' ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X