Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುದುಚ್ಚೇರಿ ಲೆಫ್ಟಿನೆಂಟ್ ಗವರ್ನರ್...

ಪುದುಚ್ಚೇರಿ ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರವಾಗಿ ಕಾರ್ಯಾಚರಿಸುವಂತಿಲ್ಲ: ಮದ್ರಾಸ್ ಹೈಕೋರ್ಟ್

ಕಿರಣ್ ಬೇಡಿಗೆ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ30 April 2019 3:07 PM IST
share
ಪುದುಚ್ಚೇರಿ ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರವಾಗಿ ಕಾರ್ಯಾಚರಿಸುವಂತಿಲ್ಲ: ಮದ್ರಾಸ್ ಹೈಕೋರ್ಟ್

ಚೆನ್ನೈ :  ವಿತ್ತ, ಆಡಳಿತ ಹಾಗೂ ಸೇವೆಗಳಿಗೆ ಸಂಬಂಧಿಸಿದಂತೆ ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರವಾಗಿ ಕಾರ್ಯಾಚರಿಸಲು ಸಾಧ್ಯವಿಲ್ಲ, ಬದಲಾಗಿ ಸಚಿವ ಸಂಪುಟದ ಸಲಹೆಯಂತೆ ನಡೆದುಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿರುವುದು ಪುದುಚ್ಚೇರಿಯ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿಗೆ ದೊಡ್ಡ ಹಿನ್ನಡೆಯುಂಟು ಮಾಡಿದೆ.

ವಿವಿಧ ಸೇವೆಗಳಿಗೆ ಸಂಬಂಧಿಸಿದಂತೆ ಸರಕಾರಕ್ಕೆ ಹೆಚ್ಚಿನ ಅಧಿಕಾರವಿದೆ ಎಂದು ಕಾಂಗ್ರೆಸ್ ಶಾಸಕ ಕೆ ಲಕ್ಷ್ಮೀನಾರಾಯಣ ಅವರ  ಅಪೀಲನ್ನು ವಿಚಾರಣೆಗೆ ಸ್ವೀಕರಿಸಿದ ಹೈಕೋರ್ಟಿನ ಮಧುರೈ ಪೀಠ, ತನ್ನ ತೀರ್ಪಿನಲ್ಲಿ  ಹೇಳಿತಲ್ಲದೆ ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರಗಳ ಕುರಿ ತಂತೆ 2017ರಲ್ಲಿ  ಕೇಂದ್ರ  ಹೊರಡಿಸಿದ ಎರಡು ಸ್ಪಷ್ಟೀಕರಣ ಆದೇಶಗಳನ್ನು ರದ್ದುಗೊಳಿಸಿದೆ.

ತೀರ್ಪನ್ನು ಅಧ್ಯಯನ ನಡೆಸಿದ ನಂತರ ಪ್ರತಿಕ್ರಿಯಿಸುವುದಾಗಿ ಕಿರಣ್ ಬೇಡಿ ಹೇಳಿದ್ದಾರೆ.

ಎರಡು ವರ್ಷಗಳ ಹಿಂದೆ ಬೇಡಿ ಅವರೇ ಕೇಳಿದ್ದ ಸ್ಪಷ್ಟೀಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಎರಡು ಆದೇಶಗಳನ್ನು ಹೊರಡಿಸಿ ಲೆಫ್ಟಿನೆಂಟ್ ಗವರ್ನರ್ ಗೆ ಸ್ವತಂತ್ರವಾಗಿ ಕಾರ್ಯಾಚರಿಸಲು ಅಧಿಕಾರವಿದೆ ಹಾಗೂ ಸಚಿವ ಸಂಪುಟಕ್ಕೆ ಬೇಕಾದಂತೆ ಕಾರ್ಯಾಚರಿಸಬೇಕೆಂದೇನೂ ಇಲ್ಲ ಎಂದು ಹೇಳಿತ್ತು.

ಖಾಸಗಿ ವೈದ್ಯಕೀಯ ಕಾಲೇಜು ಪ್ರವೇಶಾತಿ ಹಗರಣದಲ್ಲಿ ಕಿರಣ್ ಬೇಡಿ ಹಸ್ತಕ್ಷೇಪ ನಡೆಸಿ ಹಲವಾರು ವೈದ್ಯಕೀಯ ಕಾಲೇಜುಗಳ ತಪಾಸಣೆ ನಡೆಸಿ ಸರಕಾರಿ ಕಡತಗಳನ್ನು ಪರಿಶೀಲಿಸಿದ  ನಂತರ ಅವರ ಹಾಗೂ ಪುದುಚ್ಚೇರಿ ಸಿಎಂ ವಿ ನಾರಾಯಣಸ್ವಾಮಿ ನಡುವಿನ  ಭಿನ್ನಮತ ತಾರಕಕ್ಕೇರಿದ ಸಂದರ್ಭ ಲಕ್ಷ್ಮೀನಾರಾಯಣ ಕೋರ್ಟ್ ಕದ ತಟ್ಟಿದ್ದರು.

ಕಿರಣ್ ಬೇಡಿ ಪುದುಚ್ಚೆರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಅಧಿಕಾರವನ್ನು 2016ರಲ್ಲಿ ಸ್ವೀಕರಿಸಿದಂದಿನಿಂದ  ಆಕೆ ಮತ್ತು ಅಲ್ಲಿನ ಕಾಂಗ್ರೆಸ್ ಸರಕಾರದ ನಡುವೆ ಜಟಾಪಟಿ ನಡೆಯುತ್ತಿದ್ದು ಆಕೆ ಉದ್ದೇಶಪೂರ್ವಕವಾಗಿ ಕಡತಗಳ ವಿಲೇವಾರಿಯನ್ನು ವಿಳಂಬಿಸುತ್ತಿದ್ದಾರೆ ಹಾಗೂ ಸರಕಾರ ವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಆಕೆಯ ಹಲವು ನಿರ್ಧಾರಗಳನ್ನು ವಿರೋಧಿಸಿ ಸಿಎಂ ನಾರಾಯಣಸ್ವಾಮಿ ಫೆಬ್ರವರಿಯಲ್ಲಿ ಆಕೆಯ ಅಧಿಕೃತ ನಿವಾಸದೆದುರು ಧರಣಿ ಕುಳಿತ್ತಿದ್ದರು.

ಮಾಜಿ ಐಪಿಎಸ್ ಅಧಿಕಾರಿಯಾಗಿರುವ ಕಿರಣ್ ಬೇಡಿ ವಾಟ್ಸ್ಯಾಪ್ ಗ್ರೂಪ್ ರಚಿಸಿ ಪೊಲೀಸರಿಗೆ ಆದೇಶ ನೀಡಲು ಆರಂಭಿಸಿದ್ದರಲ್ಲದೆ ಸರಕಾರಿ ಯೋಜನೆಗಳ ತಪಾಸಣೆ ಕೂಡ ನಿಯಮಿತವಾಗಿ  ನಡೆಸುತ್ತಿದ್ದರು. ಮೂವರು ಬಿಜೆಪಿ ಅಭ್ಯರ್ಥಿಗಳನ್ನು ಕೇಂದ್ರದಿಂದ ನಾಮನಿರ್ದೇಶಿತ ಶಾಸಕರನ್ನಾಗಿ ನೇಮಿಸುವ ಮೂಲಕ ಆಕೆ ಪುದುಚ್ಚೇರಿ ಸ್ಪೀಕರ್ ಅವರ ಕೆಂಗಣ್ಣಿಗೂ ಗುರಿಯಾಗಿದ್ದರು.

ಆಕೆಯ ಕ್ರಮವನ್ನು ಸುಪ್ರೀಂ ಕೋರ್ಟ್ ಒಪ್ಪುವ ತನಕ ನಾಮನಿರ್ದೇಶಿತ ಸದಸ್ಯರನ್ನು ಸದನದೊಳಗೆ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು  ಸ್ಪೀಕರ್ ಪಟ್ಟು ಹಿಡಿದಿದ್ದನ್ನೂ ಇಲ್ಲಿ ಸ್ಮರಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X