Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾತೀಯತೆಯ ವಿಷ ಬೀಜ ಬಿತ್ತುವ ಪಟ್ಟಭದ್ರರು...

ಜಾತೀಯತೆಯ ವಿಷ ಬೀಜ ಬಿತ್ತುವ ಪಟ್ಟಭದ್ರರು ಹೆಚ್ಚುತ್ತಿದ್ದಾರೆ: ತಪ್ಪೇರುದ್ರಪ್ಪ ವಿಷಾದ

ವಾರ್ತಾಭಾರತಿವಾರ್ತಾಭಾರತಿ30 April 2019 8:08 PM IST
share
ಜಾತೀಯತೆಯ ವಿಷ ಬೀಜ ಬಿತ್ತುವ ಪಟ್ಟಭದ್ರರು ಹೆಚ್ಚುತ್ತಿದ್ದಾರೆ: ತಪ್ಪೇರುದ್ರಪ್ಪ ವಿಷಾದ

ಚಿಕ್ಕಮಗಳೂರು, ಎ.30: ದೇಶದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಸಂವಿಧಾನ ಬದಲಾವಣೆಯ ಬಗ್ಗೆ ಧ್ವನಿ ಎತ್ತಿರುವ ಕಾರಣಕ್ಕೆ ದೇಶಾದ್ಯಂತ 128ನೇ ಅಂಬೇಡ್ಕರ್ ರವರ ಜನ್ಮದಿನಾಚರಣೆ ಪ್ರಾಮುಖ್ಯತೆ ಪಡೆದುಕೊಳ್ಳುತ್ತಿದೆ ಎಂದು ಹಿರಿಯ ಪತ್ರಕರ್ತ ಬಿ. ತಿಪ್ಪೇರುದ್ರಪ್ಪ ಹೇಳಿದರು.

ನಗರದ ಶಂಕರಪುರ ಬಡಾವಣೆಯ ಪೌರಸೇವಾ ನೌಕರ ಕಾಲನಿಯ ರಾಮಮಂದಿರ ರಸ್ತೆಯಲ್ಲಿ ಅಂಬೇಡ್ಕರ್ ಯುವಕರ ಬಳಗ ಮತ್ತು ಗ್ರಾಮಸ್ಥರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಅಂಬೇಡ್ಕರ್ ರವರ 128ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷಗಳು ಕಳೆದಿದ್ದರೂ ಇಂದಿಗೂ ಸಮಾಜದಲ್ಲಿ ಅಸ್ಪಶ್ರ್ಯತೆ ಜೀವಂತವಿದ್ದು, ಜಾತೀಯತೆಯ ವಿಷಬೀಜ ಇನ್ನೂ ವ್ಯಾಪಕವಾಗಿ ಬಿತ್ತಲಾಗುತ್ತಿರುವುದು ವಿಷಾದನೀಯ ಎಂದರು.

ಪರಿಶಿಷ್ಟ ಜಾತಿ ವರ್ಗಗಳವರು ಹಿಂದೂಗಳಲ್ಲಿಯೇ  ಅಲ್ಪಸಂಖ್ಯಾತರಾಗಿ ಶೋಷಣೆಗೊಳಗಾಗಿ ಊರಿನ ಹೊರಗೆ ಅಸ್ಪಶ್ರ್ಯರಾಗಿಯೇ ಉಳಿದುಕೊಂಡಿದ್ದಾರೆ ಎಂದ ಅವರು ಶೋಷಿತ ಸಮುದಾಯದವರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಹೇಳಿದರು.

ಅಂಬೇಡ್ಕರ್ ರವರು ರಚಿಸಿರುವ ಸಂವಿಧಾನ ಕೇವಲ ದಲಿತರಷ್ಟೇ ಮೀಸಲಾಗದೇ ಸಮಾಜದ ಎಲ್ಲಾ ವರ್ಗ ಜನಾಂಗದ ಶೋಷಿತರಿಗೂ ಸಮಾನ ಅವಕಾಶ ಕಲ್ಪಿಸುವ ಆಶಯಗಳನ್ನು ಹೊಂದಿದೆಯಾದರೂ ಕೆಲವರ ಅಪಪ್ರಚಾರದಿಂದ ಸಂವಿಧಾನ ದಲಿತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂಬ ಆರೋಪಕ್ಕೊಳಗಾಗಿದೆ ಎಂದು ಹೇಳಿದರು.

ಹಿಂದೂ ಧರ್ಮದಲ್ಲಿನ ಅಸಮಾನತೆ, ಅಸ್ಪೃಶ್ಯತೆ, ಅಂಧಾನುಕರಣೆಗಳಿಂದ ನೊಂದ ಡಾ.ಬಿ.ಆರ್.ಅಂಬೇಡ್ಕರ್ ತಾರತಮ್ಯವಿಲ್ಲದ, ಜಾತಿ ಬೇಧವಿಲ್ಲದ, ಸಮಸಮಾಜದ ಪರಿಕಲ್ಪನೆಯಿರುವ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು ಎಂದು ಹೇಳಿದರು.
ಗೃಹ ರಕ್ಷಕ ದಳದ ಸಮಾದೇಷ್ಠ, ವಕೀಲ ಅನೀಲ್‍ಕುಮಾರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಮ್ಮ ಹಕ್ಕುಗಳಿಗಾಗಿ ಸಂಘಟಿತರಾಗಿ ಹೋರಾಟ ನಡೆಸಬೇಕಾಗಿದ್ದ ದಲಿತ ಸಂಘಟನೆಗಳು ಆಂತರೀಕ ಕಲಹದಿಂದ ತಮ್ಮ ಹೋರಾಟದ ಶಕ್ತಿಯನ್ನು ಕಳೆದುಕೊಳ್ಳುತ್ತಿವೆ. ದಲಿತರು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮುಂದುವರೆಯಬೇಕಿದೆ ಎಂದ ಅವರು ಸ್ವಾಭಿಮಾನದ ಬದುಕಿಗಾಗಿ ಡಾ.ಬಿ.ಆರ್.ಅಂಬೇಡ್ಕರ್‍ರವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕಿದೆ ಎಂದರು.

ಸ್ಥಳೀಯ ಮುಖಂಡ ಡಿ.ನಾಗರಾಜ್ ಮಾತನಾಡಿ, ಇತ್ತೀಚಿನ ಯುವಪೀಳಿಗೆ ಮೊಬೈಲ್‍ಗೀಳಿಗೆ ಬಿದ್ದು ದಿನದ ಹೆಚ್ಚು ಸಮಯವನ್ನು ಫೇಸ್‍ಬುಕ್, ಟ್ವೀಟರ್, ವಾಟ್ಸಾಪ್‍ಗಳಲ್ಲಿ ಕಾಲ ಕಳೆಯುತ್ತಾ ತಮ್ಮ ನಿಜವಾದ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದರು.

ಡಿ.ಎಸ್.ಎಸ್ ಕೆ.ಕುಮಾರ್ ಮಾತನಾಡಿ, ದಲಿತರು, ಹಿಂದುಳಿದ ವರ್ಗದ ಯುವ ಜನತೆ ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸುವ ಬದಲು ಕೋಮುವಾದಿ ಶಕ್ತಿಗಳ ಬಾಲಬುಡಕರಾಗಿ ಓಡಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಈ ಕಾರ್ಯಕ್ರಮದಲ್ಲಿ   ಕೂದುವಳ್ಳಿ ಮಂಜು ಮತ್ತು ಸಂಗಡಿಗರು  ಕ್ರಾಂತಿಗೀತೆಗಳನ್ನು ಹಾಡಿ ರಂಜಿಸಿದರು.ಸ್ಥಳೀಯ ಯುವಕರಾದ ಕಿರಣ್, ದೇವೇಂದ್ರ, ವೆಂಕಟರಾಮ್, ವೆಂಕಟೇಶ್, ಕೀರ್ತಿಕುಮಾರ್, ಪ್ರವೀಣ್, ಪ್ರತಾಪ್, ಓಬಳೇಶ್, ರವಿ, ಶಿವು ಸೇರಿದಂತೆ ಹಲವರಿದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಆವರಣದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್‍ರವರ ಪುತ್ಥಳಿಗೆ ಯುವಕಸಂಘದ ಮುಖಂಡರೊಂದಿಗೆ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶದವತಿರವರು ಮಾಲಾರ್ಪಣೆ ಮಾಡಿ ಗೌರವ ಸೂಚಿಸಿದರು. ನಂತರ ನಗರದ ತಾಲೂಕು ಕಚೇರಿ ಆವರಣದಿಂದ ಅಂಬೇಡ್ಕರರ ಭಾವಚಿತ್ರದೊಂದಿಗೆ ರಾಜಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X