Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾರುವೇಷದಲ್ಲಿ ಕಲ್ಲು ಗಣಿಗಾರಿಕೆ ಸ್ಥಳದ...

ಮಾರುವೇಷದಲ್ಲಿ ಕಲ್ಲು ಗಣಿಗಾರಿಕೆ ಸ್ಥಳದ ಮೇಲೆ ದಾಳಿ ನಡೆಸಿದ ಶಿವಮೊಗ್ಗ ತಹಶೀಲ್ದಾರ್ !

ವಾರ್ತಾಭಾರತಿವಾರ್ತಾಭಾರತಿ30 April 2019 8:24 PM IST
share
ಮಾರುವೇಷದಲ್ಲಿ ಕಲ್ಲು ಗಣಿಗಾರಿಕೆ ಸ್ಥಳದ ಮೇಲೆ ದಾಳಿ ನಡೆಸಿದ ಶಿವಮೊಗ್ಗ ತಹಶೀಲ್ದಾರ್ !

ಶಿವಮೊಗ್ಗ, ಎ. 30: ಅನದಿಕೃತ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳವೊಂದರ ಮೇಲೆ ಶಿವಮೊಗ್ಗ ತಹಶೀಲ್ದಾರ್ ಬಿ.ಎನ್.ಗಿರೀಶ್‍ರವರು ಮಾರುವೇಷದಲ್ಲಿ ದಾಳಿ ನಡೆಸಿ, ಅಕ್ರಮ ಪತ್ತೆ ಹಚ್ಚಿರುವ ಘಟನೆ ಮಂಗಳವಾರ ನಡೆದಿದೆ. 

ನಗರದ ಹೊರವಲಯ ಗೆಜ್ಜೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಾಳಿಯ ವೇಳೆ ಎರಡು ಟ್ರ್ಯಾಕ್ಟರ್ ಹಾಗೂ ಒಂದು ಜೆಸಿಬಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪರಿಶೀಲನಾ ಕಾರ್ಯ ಮುಂದುವರಿಸಿದ್ದಾರೆ. 

ಕಳೆದ ಹಲವು ದಿನಗಳಿಂದ ಗೆಜ್ಜೇನಹಳ್ಳಿ ಗ್ರಾಮದ ಕೃಷಿ ಜಮೀನೊಂದರಲ್ಲಿ ಸರ್ಕಾರದ ಅನುಮತಿಯಿಲ್ಲದೆ, ಕೆಲವರು ಕಾನೂನುಬಾಹಿರವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದರು. 

ಈ ಸಂಬಂಧ ಸಾರ್ವಜನಿಕರು ತಹಶೀಲ್ದಾರ್ ರಿಗೆ ಮಾಹಿತಿ ನೀಡಿದ್ದರು. ಇದರ ಆಧಾರದ ಮೇಲೆ ಬಿ.ಎನ್.ಗಿರೀಶ್‍ರವರು ಎರಡು ಬಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದರು. ಅವರ ಆಗಮನದ ವಿಷಯದ ಮಾಹಿತಿಯನ್ನು ಹೇಗೋ ಕಲೆ ಹಾಕುತ್ತಿದ್ದ ಆರೋಪಿಗಳು, ವಾಹನ ಸಮೇತ ಸ್ಥಳದಿಂದ ಪರಾರಿಯಾಗುತ್ತಿದ್ದರು. ಇದರಿಂದ ತಹಶೀಲ್ದಾರ್ ವರು ಬರಿಗೈಯಲ್ಲಿ ವಾಪಾಸ್ಸಾಗುವಂತಾಗಿತ್ತು. 

ಮಂಗಳವಾರ ಗ್ರಾಮ ಲೆಕ್ಕಿಗ ಪ್ರಭು ಎಂಬುವರೊಂದಿಗೆ ತಹಶೀಲ್ದಾರ್ ಬಿ.ಎನ್.ಗಿರೀಶ್‍ರವರು ತಮ್ಮ ಗುರುತು ಪತ್ತೆಯಾಗದಂತೆ, ತಲೆಗೆ ಟವೆಲ್ ಸುತ್ತಿಕೊಂಡು ಬೈಕ್‍ನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ಮೂಲಕ ಸ್ಥಳದಲ್ಲಿ ಕಾರ್ಯಾಚರಿಸುತ್ತಿದ್ದ ಮೂರು ವಾಹನಗಳನ್ನು ವಶಕ್ಕೆ ಪಡೆಯುವ ಮೂಲಕ, ದಂಧೆಕೋರರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಿದ್ದಾರೆ.

'ಸರ್ಕಾರಿ ಜಾಗವಾಗಿ ಘೋಷಣೆ' : ತಹಶೀಲ್ದಾರ್ ಎಚ್ಚರಿಕೆ
ಖಾಸಗಿ ಕೃಷಿ ಜಮೀನುಗಳಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಕಲ್ಲು, ಮರಳು ಗಣಿಗಾರಿಕೆಯಂತಹ ಕೃತ್ಯಗಳಿಗೆ ಬಳಸಿದ್ದು ಕಂಡುಬಂದರೆ ಅಂತಹ ಜಮೀನುಗಳನ್ನು ಸರ್ಕಾರಿ ಜಾಗವಾಗಿ ಘೋಷಣೆ ಮಾಡಲಾಗುವುದು. ಇದಕ್ಕೆ ಕಾನೂನಿನಲ್ಲಿ ಅವಕಾಶವಿದೆ. ಈ ಕಾರಣದಿಂದ ಜಮೀನು ಮಾಲೀಕರು ಎಚ್ಚರಿಕೆಯಿಂದಿರಬೇಕು. ಯಾವುದೇ ಕಾರಣಕ್ಕೂ ತಮ್ಮ ಜಮೀನುಗಳಲ್ಲಿ ಕಾನೂನುಬಾಹಿರ ಕೃತ್ಯಗಳಿಗೆ ಅವಕಾಶ ನೀಡಬಾರದು ಎಂದು ತಹಶೀಲ್ದಾರ್ ಬಿ.ಎನ್.ಗಿರೀಶ್‍ರವರು ತಿಳಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X