Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸೆಸೆಲ್ಸಿ ಪರೀಕ್ಷೆ: ಚಿಕ್ಕಮಗಳೂರು...

ಎಸೆಸೆಲ್ಸಿ ಪರೀಕ್ಷೆ: ಚಿಕ್ಕಮಗಳೂರು ಜಿಲ್ಲೆಗೆ ಶೇ.82 ಫಲಿತಾಂಶ; ರಾಜ್ಯದಲ್ಲಿ 14ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ30 April 2019 11:52 PM IST
share

ಚಿಕ್ಕಮಗಳೂರು, ಎ.30: ಕಳೆದ ಮಾರ್ಚ್‍ನಲ್ಲಿ ನಡೆದ ಎಸೆಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಶೇ.82.76 ಫಲಿತಾಂಶ ಲಭಿಸಿದ್ದು, ಕಳೆದ ವರ್ಷ 26ನೇ ಸ್ಥಾನದಲ್ಲಿದ್ದ ಜಿಲ್ಲೆ ಈ ಬಾರಿ ರಾಜ್ಯದಲ್ಲಿ 14ನೇ ಸ್ಥಾನದಲಿದೆ. ಜಿಲ್ಲೆಯಲ್ಲಿ ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ಕಳೆದ ಸಾಲಿಗಿಂತ ಶೇ.10.29ರಷ್ಟು ಫಲಿತಾಂಶ ಹೆಚ್ಚಳವಾಗಿರುವುದು ಉತ್ತಮ ಬೆಳವಣಿಗೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು  5,993 ಬಾಲಕರು ಮತ್ತು 6112 ಬಾಲಕಿಯರು ಸೇರಿದಂತೆ ಒಟ್ಟು 12,105 ವಿದ್ಯಾರ್ಥಿಗಳು ಕುಳಿತಿದ್ದು, ಇವರಲ್ಲಿ 4,895 ಬಾಲಕರು ಹಾಗೂ 5238 ಬಾಲಕಿಯರು ಸೇರಿದಂತೆ ಒಟ್ಟು 10,133 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇ.82.76% ರಷ್ಟು ಫಲಿತಾಂಶ ದೊರೆತಿದೆ. ಕಳೆದ ವರ್ಷ ಜಿಲ್ಲೆಯು ರಾಜ್ಯದಲ್ಲಿ 26ನೇ ಸ್ಥಾನ ಹೊಂದಿತ್ತು. ಜಿಲ್ಲೆಯಲ್ಲಿ ಶೇ.90.96ರಷ್ಟು ಫಲಿತಾಂಶ ಪಡೆದು ಶೃಂಗೇರಿ ಬ್ಲಾಕ್ ಪ್ರಥಮ ಸ್ಥಾನದಲ್ಲಿದ್ದು, ಶೇ.74.06ರಷ್ಟು ಫಲಿತಾಂಶ ಪಡೆದು 8ನೇ ಸ್ಥಾನದಲ್ಲಿರುವ ಚಿಕ್ಕಮಗಳೂರು ಬ್ಲಾಕ್ ಕಡೆಯ ಸ್ಥಾನದಲ್ಲಿದೆ.

ಬ್ಲಾಕ್‍ವಾರು ಫಲಿತಾಂಶದ ವಿವರದನ್ವಯ ಬೀರೂರು ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತಿದ್ದ ಒಟ್ಟು 1361 ವಿದ್ಯಾರ್ಥಿಗಳ ಪೈಕಿ 1104 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇಕಡ 81.12ರಷ್ಟು ಫಲಿತಾಂಶ ಪಡೆದು ಐದನೇ ಸ್ಥಾನದಲ್ಲಿದೆ. ಚಿಕ್ಕಮಗಳೂರು ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತ್ತಿದ್ದ ಒಟ್ಟು 3740 ವಿದ್ಯಾರ್ಥಿಗಳ ಪೈಕಿ 2770 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ, ಶೇ.74.06 ಫಲಿತಾಂಶ ಪಡೆದು ಜಿಲ್ಲೆಯಲ್ಲಿ ಎಂಟನೇ ಸ್ಥಾನದಲ್ಲಿದೆ. ಕಡೂರು ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತಿದ್ದ ಒಟ್ಟು 2455 ವಿದ್ಯಾರ್ಥಿಗಳ ಪೈಕಿ 1917 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.78.09 ರಷ್ಟು ಫಲಿತಾಂಶ ಪಡೆದು ಆರನೇ ಸ್ಥಾನದಲ್ಲಿದೆ. ತರೀಕೆರೆ ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತಿದ್ದ ಒಟ್ಟು 1951 ವಿದ್ಯಾರ್ಥಿಗಳ ಪೈಕಿ 1493 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.76.52 ರಷ್ಟು ಫಲಿತಾಂಶ ಪಡೆದು ಏಳನೇ ಸ್ಥಾನದಲ್ಲಿದೆ. ನರಸಿಂಹರಾಜಪುರ ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತ್ತಿದ್ದ ಒಟ್ಟು 1004 ವಿದ್ಯಾರ್ಥಿಗಳ ಪೈಕಿ 820 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇ.72.84ರಷ್ಟು ಫಲಿತಾಂಶ ಪಡೆದು ನಾಲ್ಕನೇ ಸ್ಥಾನದಲ್ಲಿದೆ. 

ಕೊಪ್ಪ ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತಿದ್ದ 1026  ವಿದ್ಯಾರ್ಥಿಗಳ ಪೈಕಿ 881 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.85.87 ರಷ್ಟು ಫಲಿತಾಂಶ ಪಡೆದು ಎರಡನೇ ಸ್ಥಾನದಲ್ಲಿದೆ.  ಶೃಂಗೇರಿ ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತಿದ್ದ ಒಟ್ಟು 575  ವಿದ್ಯಾರ್ಥಿಗಳ ಪೈಕಿ 523 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇಕಡ 90.96 ರಷ್ಟು ಫಲಿತಾಂಶ ಪಡೆದು ಒಂದನೇ ಸ್ಥಾನದಲ್ಲಿದೆ. ಮೂಡಿಗೆರೆ ಬ್ಲಾಕ್‍ನಲ್ಲಿ ಪರೀಕ್ಷೆಗೆ ಕುಳಿತಿದ್ದ ಒಟ್ಟು 1317 ವಿದ್ಯಾರ್ಥಿಗಳ ಪೈಕಿ 1087 ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಶೇ.82.54 ರಷ್ಟು ಫಲಿತಾಂಶ ದೊರೆತು ಮೂರನೇ ಸ್ಥಾನದಲ್ಲಿದೆ.  
ಜಿಲ್ಲೆಯಲ್ಲಿ 61 ಪ್ರೌಢಶಾಲೆಗಳು ಶೇ.100ಕ್ಕೆ 100ರಷ್ಟು ಫಲಿತಾಂಶ ಪಡೆದಿವೆ.

ಚಿಕ್ಕಮಗಳೂರು ತಾಲೂಕಿನ ಸಂತಮೇರಿಸ್ ಪ್ರೌಢಶಾಲೆಯ ಯುಕ್ತ.ಜಿ.ಸ್ವಾಮಿ ರವರು 622 ಅಂಕಗಳನ್ನು ಪಡೆದು ಜಿಲ್ಲೆಗೆ ಮೊದಲ ಸ್ಥಾನವಿದ್ದರೆ, ಚಿಕ್ಕಮಗಳೂರು ತಾಲೂಕಿನ ಸಂತಮೇರಿಸ್ ಪ್ರೌಢಶಾಲೆಯ ಭೂಮಿಕ ನಾಯ್ಡು.ಸಿ.ಆರ್ ಹಾಗೂ ಎನ್.ಆರ್.ಪುರದ ಸರ್ಕಾರಿ ಪ್ರೌಢಶಾಲೆಯ ತನುಶ್ರೀ ಸಮಾನವಾಗಿ 621 ಅಂಕಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಹಾಗೂ ಎನ್.ಆರ್.ಪುರ ತಾಲೂಕಿನ ಡಿ.ಸಿ.ಎಂ.ಸಿ ಮೆಮೋರಿಯಲ್ ಪ್ರೌಢಶಾಲೆಯ ಪರೀಕ್ಷಿತ್.ಕೆ.ಕೆ ಮತ್ತು ಪೂರ್ಣಪ್ರಜ್ಞ ಪ್ರೌಢಶಾಲೆಯ ಘೋದಾ ರಮೇಶ್ ಸಮಾನವಾಗಿ 619 ಅಂಕಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ. ಚಿಕ್ಕಮಗಳೂರಿನ ಆದಿಚುಂಚನಗಿರಿ ಶಾಲೆಯ ಸಹನ ಎ.ಎಸ್ 618 ಸ್ಥಾನ ಪಡೆದು ನಾಲ್ಕನೇ ಸ್ಥಾನದಲ್ಲಿದ್ದರೆ. ಮೂಡಿಗೆರೆ ಬೇಥನಿ ಪ್ರೌಢಶಾಲೆಯ ಸಾಧನಾ.ಕೆ.ಎಸ್, ಶೃಂಗೇರಿಯ ದರ್ಶಿನಿ ಪ್ರೌಢಶಾಲೆಯ ಸಂಜನ ಹೆಚ್.ಕೆ ಹಾಗೂ ಚಿಕ್ಕಮಗಳೂರು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಚೈತನ್ಯ.ಬಿ. ರವರುಗಳು ಸಮಾನವಾಗಿ 617 ಅಂಕಗಳನ್ನು ಗಳಿಸಿ ಐದನೇ ಸ್ಥಾನದಗಳಲ್ಲಿದ್ದರೆ, ಎಂ.ಇ.ಎಸ್ ಪ್ರಯೋಗಿಕ ಪ್ರೌಢಶಾಲೆಯ ಸುಮಿತ ಚಂದ್ರ 616 ಅಂಕಗಳು ಪಡೆದು ಆರನೇ ಸ್ಥಾನದಲ್ಲಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X