Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯೇ ವಂದೇ ಮಾತರಂ ಘೋಷಣೆ...

ಪ್ರಧಾನಿಯೇ ವಂದೇ ಮಾತರಂ ಘೋಷಣೆ ಕೂಗುವಾಗಲೂ ಸುಮ್ಮನೆ ಕುಳಿತ ನಿತೀಶ್ ಕುಮಾರ್ !

ಇದಕ್ಕೆ ಬಿಜೆಪಿ ನಾಯಕರಿಂದ ಯಾವುದೇ ಆಕ್ಷೇಪ ಇಲ್ಲ

ವಾರ್ತಾಭಾರತಿವಾರ್ತಾಭಾರತಿ1 May 2019 11:20 AM IST
share
ಪ್ರಧಾನಿಯೇ ವಂದೇ ಮಾತರಂ ಘೋಷಣೆ ಕೂಗುವಾಗಲೂ ಸುಮ್ಮನೆ ಕುಳಿತ ನಿತೀಶ್ ಕುಮಾರ್ !

ಹೊಸದಿಲ್ಲಿ, ಮೇ 1 : ಬಿಹಾರದ ದರ್ಭಂಗದಲ್ಲಿ ನಡೆದ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಪ್ರಧಾನಿ ಹಾಗು ವೇದಿಕೆಯಲ್ಲಿದ್ದ ಎಲ್ಲ ನಾಯಕರೂ ವಂದೇ ಮಾತರಂ ಘೋಷಣೆ ಕೂಗುತ್ತಿದ್ದಾಗ ಎನ್ ಡಿ ಎ ಮೈತ್ರಿಕೂಟದ ಪ್ರಮುಖ ಪಕ್ಷ ಜೆಡಿಯು ನಾಯಕ, ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸುಮ್ಮನೆ ಕುಳಿತುಕೊಂಡ ವೀಡಿಯೊ ವೈರಲ್ ಆಗಿದೆ.

ವಂದೇ ಮಾತರಂ ಹೆಸರಲ್ಲಿ ಅಲ್ಪಸಂಖ್ಯಾತರ ಮೇಲೆ ಹರಿಹಾಯುವ ಒಂದೇ ಒಂದು ಅವಕಾಶ ಕೈಬಿಡದ ಬಿಜೆಪಿ ಹಾಗು ಸಂಘ ಪರಿವಾರ ನಿತೀಶ್ ಕುಮಾರ್ ಅವರು ಖುದ್ದು ಪ್ರಧಾನಿಯೇ ವಂದೇ ಮಾತರಂ ಘೋಷಣೆ ಕೂಗುತ್ತಿರುವಾಗ ತನಗೂ ಅದಕ್ಕೂ ಸಂಬಂಧವೇ ಇಲ್ಲ ಎಂಬಂತೆ ಮುಗುಮ್ಮಾಗಿ ಕುಳಿತಿದ್ದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ ಎಂದು ವ್ಯಾಪಕವಾಗಿ ಪ್ರಶ್ನಿಸಲಾಗುತ್ತಿದೆ.

ಬಿಜೆಪಿ, ಜೆಡಿಯು ಜಂಟಿ ಚುನಾವಣಾ ಪ್ರಚಾರ ಸಮಾವೇಶದಲ್ಲಿ ಭಾಷಣ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಭಾರತ್ ಮಾತಾಕಿ ಜೈ ಎಂದು ಬಳಿಕ ವಂದೇ ಮಾತರಂ ಎಂದು ಘೋಷಣೆ ಕೂಗುತ್ತಾರೆ. ಬಳಿಕ ಹಲವಾರು ಬಾರಿ ಪ್ರಧಾನಿ ಮುಷ್ಠಿ ಬಿಗಿಹಿಡಿದು ವಂದೇ ಎಂದು ಘೋಷಣೆ ಕೂಗಿದಾಗ ಎಲ್ಲರೂ ಮಾತರಂ ಎಂದು ಕೂಗುತ್ತಿದ್ದರು. ಆಗ ವೇದಿಕೆಯಲ್ಲಿದ್ದ ಎಲ್ಲ ನಾಯಕರೂ ಅತ್ಯುತ್ಸಾಹದಿಂದ ಪ್ರಧಾನಿ ಜೊತೆ ಮುಷ್ಠಿ ಎತ್ತಿ ಹಿಡಿದು ವಂದೇ ಮಾತರಂ ಘೋಷಣೆಗೆ ಧ್ವನಿಗೂಡಿಸುತ್ತಾರೆ. ಬಿಜೆಪಿ ನಾಯಕರು ಮಾತ್ರವಲ್ಲದೆ ವೇದಿಕೆಯಲ್ಲಿದ್ದ ಎನ್ ಡಿ ಎ ಮಿತ್ರಪಕ್ಷ ಲೋಕಜನಶಕ್ತಿ ಪಕ್ಷದ ನಾಯಕ ರಾಮ್ ವಿಲಾಸ್ ಪಾಸ್ವಾನ್ ಕೂಡ ಇದಕ್ಕೆ ಧ್ವನಿಗೂಡಿಸುತ್ತಾರೆ. ಆದರೆ ಬಿಹಾರ ಮುಖ್ಯಮಂತ್ರಿ ಹಾಗು ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ವೇದಿಕೆಯಲ್ಲಿದ್ದರೂ ಸುಮ್ಮನೆ ಕುಳಿತುಕೊಳ್ಳುತ್ತಾರೆ. ಕೈ ಎತ್ತುವುದೂ ಇಲ್ಲ, ಘೋಷಣೆಗೆ ಧ್ವನಿಗೂಡಿಸುವುದೂ ಇಲ್ಲ. ಕೊನೆಗೆ ಪ್ರಧಾನಿ ಅಲ್ಲಿಂದ ಹೊರಡುವಾಗ ಎದ್ದು ನಿಲ್ಲುವ ಅವರು ಪ್ರಧಾನಿಗೆ ನಮಸ್ಕರಿಸುತ್ತಾರೆ ಅಷ್ಟೇ.

ವಂದೇ ಮಾತರಂ ಘೋಷಣೆ ಕೂಗುವುದು, ಅದನ್ನು ಹಾಡುವುದು ದೇಶಭಕ್ತಿಯ ಸಂಕೇತ, ಅದನ್ನು ಹಾಡದವರು, ಘೋಷಣೆ ಕೂಗದವರು ಭಾರತದಲ್ಲಿ ಇರಲೇಬಾರದು ಎಂದು ಬಿಜೆಪಿ, ಸಂಘ ಪರಿವಾರದ ನಾಯಕರು ಅದೆಷ್ಟೋ ಬಾರಿ ಹೇಳಿದ್ದಾರೆ. ಅದರ ಹೆಸರಲ್ಲಿ ಅದೆಷ್ಟೋ ಗಲಾಟೆ, ಗಲಭೆಗಳಾಗಿವೆ. ಆದರೆ ತಮ್ಮ ಮೈತ್ರಿಕೂಟದ ಅತ್ಯಂತ ಪ್ರಮುಖ ಪಾಲುದಾರ ನಾಯಕ ಪ್ರಧಾನಿ ಇದ್ದ ವೇದಿಕೆಯಲ್ಲೇ, ಪ್ರಧಾನಿಯೇ ಸ್ವತಃ  ವಂದೇ ಮಾತರಂ ಘೋಷಣೆ ಕೂಗುತ್ತಿರುವಾಗ ಅದಕ್ಕೆ ಕಿಮ್ಮತ್ತಿನ ಬೆಲೆ ನೀಡದೆ ಸುಮ್ಮನಿದ್ದ ಬಗ್ಗೆ ಯಾವುದೇ ಬಿಜೆಪಿ ನಾಯಕರು ಈವರೆಗೆ ತಕರಾರು ಕೂಡ ಎತ್ತದೇ ಇರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ರಾಜಕೀಯ ಲಾಭ ನಷ್ಟದ ಲೆಕ್ಕಾಚಾರ ಬಿಜೆಪಿಗೆ ವಂದೇ ಮಾತರಂ ಗಿಂತ ಮುಖ್ಯವೇ ಎಂಬ ಪ್ರಶ್ನೆ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿಬಂದಿದೆ.

ಈ ಬಗ್ಗೆ ಪ್ರಶ್ನಿಸಿರುವ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಒಂದು ವೇಳೆ ಅಝಮ್ ಖಾನ್ ಈ ರೀತಿ ಮಾಡಿದ್ದರೆ ಬಿಜೆಪಿಯ ಪ್ರತಿಕ್ರಿಯೆ ಹೇಗಿರುತ್ತಿತ್ತು ಎಂದು ಕೇಳಿದ್ದಾರೆ . 

ಕಾರ್ಯಕ್ರಮದ ವೀಡಿಯೊ ಇಲ್ಲಿದೆ

ಕೃಪೆ: ndtv

share
ವಾರ್ತಾಭಾರತಿ
ವಾರ್ತಾಭಾರತಿ
Next Story
X