Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎ ಸರಕಾರ ಹಲವು ಸರ್ಜಿಕಲ್...

ಯುಪಿಎ ಸರಕಾರ ಹಲವು ಸರ್ಜಿಕಲ್ ದಾಳಿಗಳನ್ನು ನಡೆಸಿತ್ತು, ಅವುಗಳನ್ನು ಮತ ಗಳಿಕೆಗೆ ಬಳಸಿಕೊಂಡಿಲ್ಲ: ಮನಮೋಹನ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ2 May 2019 11:36 AM IST
share
ಯುಪಿಎ ಸರಕಾರ ಹಲವು ಸರ್ಜಿಕಲ್ ದಾಳಿಗಳನ್ನು ನಡೆಸಿತ್ತು, ಅವುಗಳನ್ನು ಮತ ಗಳಿಕೆಗೆ ಬಳಸಿಕೊಂಡಿಲ್ಲ: ಮನಮೋಹನ್ ಸಿಂಗ್

ಹೊಸದಿಲ್ಲಿ:  ಹಿಂದಿನ ಯುಪಿಎ ಸರಕಾರ ಹಲವಾರು ಸರ್ಜಿಕಲ್ ದಾಳಿಗಳನ್ನು ನಡೆಸಿತ್ತು ಆದರೆ ಯಾವತ್ತೂ ಅವುಗಳನ್ನು ಮತ ಗಳಿಕೆಗಾಗಿ ಬಳಸಿಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.

'ಹಿಂದುಸ್ತಾನ್ ಟೈಮ್ಸ್' ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಸಿಂಗ್ ಅವರು ಆಡಿದ ಈ ಮಾತುಗಳು ಈ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರಕಾರ ರಾಷ್ಟ್ರೀಯ ಭದ್ರತೆಯನ್ನೇ ಪ್ರಮುಖ ವಿಚಾರವನ್ನಾಗಿಸಿದ ಹಿನ್ನೆಲೆಯಲ್ಲಿ ಮಹತ್ವ ಪಡೆದಿದೆ.

"2008ರ ಮುಂಬೈ ದಾಳಿಗಳ ನಂತರ ಮಿಲಿಟರಿ ಕಾರ್ಯಾಚರಣೆಯನ್ನು ಆಯ್ಕೆ ಮಾಡುವ ಬದಲು ನಮ್ಮ ಸರಕಾರ ಪಾಕಿಸ್ತಾನವನ್ನು ಜಗತ್ತಿನಲ್ಲಿ ಏಕಾಂಗಿಯಾಗಿಸಿ ಅದು ಉಗ್ರರ ಕಾರಸ್ಥಾನವೆಂಬ ಅಂಶವನ್ನು ರಾಜತಾಂತ್ರಿಕ ಕ್ರಮಗಳ ಮೂಲಕ ಬಯಲುಗೊಳಿಸಲು ನಿರ್ಧರಿಸಿತ್ತು,'' ಎಂದು ಸಿಂಗ್ ಹೇಳಿದ್ದಾರೆ.

"ಮುಂಬೈ ದಾಳಿಯ 14 ದಿನಗಳೊಳಗಾಗಿ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ನನ್ನು ಜಾಗತಿಕ ಭಯೋತ್ಪಾದಕ ಎಂದು ಘೋಷಿಸಲು ಚೀನಾ ಒಪ್ಪುವಂತೆ ನಾವು ಮಾಡಿದ್ದೆವು,'' ಎಂದು ಅವರು ವಿವರಿಸಿದ್ದಾರೆ.

"ಮುಂಬೈ ದಾಳಿಯ ರೂವಾರಿ ಹಾಗೂ ಪಾಕಿಸ್ತಾನ ಮೂಲದ ಎಲ್‍ಇಟಿ ಮುಖ್ಯಸ್ಥನ ತಲೆಗೆ ಅಮೆರಿಕಾ 10 ಮಿಲಿಯನ್ ಡಾಲರ್ ನಗದು ಬಹುಮಾನ ಘೋಷಿಸುವಂತೆ ಮಾಡಲು ಕೂಡ ನಾವು ಯಶಸ್ವಿಯಾಗಿದ್ದೆವು,'' ಎಂದು ಸಿಂಗ್ ಹೇಳಿದರು.

ಮುಂಬೈ ದಾಳಿಯ ನಂತರ ಕರಾವಳಿ ಪ್ರದೇಶಗಳ ಭದ್ರತೆಯನ್ನು ಇನ್ನಷ್ಟು ಹೆಚ್ಚಿಸಲು ನ್ಯಾಷನಲ್ ಕೌಂಟರ್ ಟೆರರಿಸಂ ಸೆಂಟರ್ ಪ್ರಸ್ತಾವನೆಗೆ ಆಗ ಗುಜರಾತ್ ಸಿಎಂ ಆಗಿದ್ದ ನರೇಂದ್ರ ಮೋದಿ ವಿರೋಧಿಸಿದ್ದರು ಎಂದು ಸಿಂಗ್ ಆರೋಪಿಸಿದರು.

ಹಿಂದಿನ ಪ್ರಧಾನಿಗಳಿಗೆ ಹೋಲಿಸಿದಾಗ ನರೇಂದ್ರ ಮೋದಿ ಓರ್ವ ಶಕ್ತಿಶಾಲಿ ಹಾಗೂ ಕಠಿಣ ನಿರ್ಧಾರಗಳನ್ನು ಕೈಗೊಳ್ಳುವ ನಾಯಕ ಎಂದು ಬಿಜೆಪಿ ಬಿಂಬಿಸುತ್ತಿರುವ ಕುರಿತಾದ ಪ್ರಶ್ನೆಗೆ ಉತ್ತರಿಸಿದ ಸಿಂಗ್, "ಇಂದಿರಾ ಗಾಂಧಿ ಹಾಗೂ ಲಾಲ್ ಬಹಾದ್ದುರ್ ಶಾಸ್ತ್ರಿ  ಕೂಡ ನಿರ್ಣಾಯಕ ಕ್ರಮಗಳನ್ನು ಕೈಗೊಂಡ ನಾಯಕರಾಗಿದ್ದರು,'' ಎಂದರು. "ಅವರಂತಹ ಮಹಾನ್ ನಾಯಕರು ಹಾಗೂ ಈಗಿನ ಆಡಳಿತದ ಸಣ್ಣತನದ ನಡುವೆ ಯಾವುದೇ ಹೋಲಿಕೆ ಸಾಧ್ಯವಿಲ್ಲ, ಇಂದಿರಾ ಗಾಂಧಿ ಅಥವಾ ಅವರಿಗಿಂತ ಹಿಂದೆ ಸೇವೆ ಸಲ್ಲಿಸಿದ್ದ ಪ್ರಧಾನಿಗಳು ನಮ್ಮ ಸೇನಾ ಪಡೆಗಳ ಕಾರ್ಯಾಚರಣೆಯ ಶ್ರೇಯಸ್ಸನ್ನು  ಸೆಳೆದುಕೊಂಡಿರಲಿಲ್ಲ,'' ಎಂದು ಸಿಂಗ್ ಹೇಳಿದರು.

ಆರ್ಥಿಕ ರಂಗದಲ್ಲಿ ನರೇಂದ್ರ ಮೋದಿ ಸರಕಾರದ ಕ್ಷಮಿಸಲಾರದ  ವೈಫಲ್ಯಗಳನ್ನು ಟೀಕಿಸಿದ ಸಿಂಗ್, ಈಗಿನ ಆಡಳಿತವು "ಸೇನಾ ಪಡೆಗಳ ಪರಾಕ್ರಮದ ಹಿಂದೆ ಅಡಗಿಕೊಳ್ಳಲು ಯತ್ನಿಸುತ್ತಿದೆ,'' ಎಂದು ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X