Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಬಾಡಗೆ ಗಾಯದ ಸಮಸ್ಯೆ

ರಬಾಡಗೆ ಗಾಯದ ಸಮಸ್ಯೆ

ವಾರ್ತಾಭಾರತಿವಾರ್ತಾಭಾರತಿ2 May 2019 11:17 PM IST
share
ರಬಾಡಗೆ ಗಾಯದ ಸಮಸ್ಯೆ

ಹೊಸದಿಲ್ಲಿ, ಮೇ 2: ದಕ್ಷಿಣ ಆಫ್ರಿಕದ ಪ್ರಮುಖ ವೇಗದ ಬೌಲರ್ ಕಾಗಿಸೊ ರಬಾಡ ಐಪಿಎಲ್ ಟೂರ್ನಿ ಅಂತಿಮ ಹಂತ ತಲುಪಿದ ಸಮಯದಲ್ಲೇ ಗಾಯದ ಸಮಸ್ಯೆಗೆ ಸಿಲುಕಿರುವುದು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿಗೆ ಚಿಂತೆಯಾಗಿ ಕಾಡಲಾರಂಭಿಸಿದೆ. ಮಾತ್ರವಲ್ಲ ವಿಶ್ವಕಪ್‌ಗೆ ಕೆಲವೇ ದಿನಗಳಿರುವಾಗ ದಕ್ಷಿಣ ಆಫ್ರಿಕ ತಂಡಕ್ಕೂ ಈ ಸುದ್ದಿ ಆಘಾತ ತಂದಿದೆ.

ಬುಧವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂದ್ಯದ ವೇಳೆ ಡೆಲ್ಲಿ ತಂಡ ರಬಾಡ ಸೇವೆಯಿಂದ ವಂಚಿತವಾಗಿದ್ದು ಆ ಪಂದ್ಯವನ್ನು ಡೆಲ್ಲಿ 80 ರನ್‌ಗಳಿಂದ ಸೋತಿತ್ತು. ಈ ಋತುವಿನಲ್ಲಿ ಮೊದಲ ಬಾರಿ ರಬಾಡ ಐಪಿಎಲ್ ಪಂದ್ಯವನ್ನು ತಪ್ಪಿಸಿಕೊಂಡಿದ್ದರು. ‘‘ಮುನ್ನ್ನೆಚ್ಚರಿಕೆಯ ಕ್ರಮವಾಗಿ ತಂಡದ ಆಡಳಿತ ವರ್ಗ ರಬಾಡಗೆ ವಿಶ್ರಾಂತಿ ನೀಡಲು ನಿರ್ಧರಿಸಿತು. ಅವರ ಸಾಮ್ಯರ್ಥವೇನೆಂದು ನಮಗೆ ಗೊತ್ತಿತ್ತು. ಸ್ಲಾಗ್ ಓವರ್‌ಗಳಲ್ಲಿ ಅವರು ಅಮೋಘ ಬೌಲಿಂಗ್ ಮಾಡುತ್ತಿದ್ದರು. ಖಂಡಿತವಾಗಿಯೂ ನಾವು ಅವರಿಂದ ವಂಚಿತರಾಗಿದ್ದೇವೆ. ಅವರು ಬೆನ್ನುನೋವಿನ ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಅವರಿಗೆ ವಿಶ್ರಾಂತಿ ಪಡೆಯುವುದು ಉತ್ತಮ’’ ಎಂದು ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಹಿರಿಯ ವೇಗದ ಬೌಲರ್ ಡೇಲ್ ಸ್ಟೇಯ್ನ ಕೂಡ ಗಾಯಗೊಂಡಿರುವ ಕಾರಣ ರಬಾಡ ಅವರ ಗಾಯದ ಸಮಸ್ಯೆ ದ.ಆಫ್ರಿಕಕ್ಕೆ ತಲೆನೋವು ತಂದಿದೆ. ಸ್ಟೇಯ್ನೆ ಈ ವರ್ಷದ ಐಪಿಎಲ್‌ನಲ್ಲಿ ಕೇವಲ 2 ಪಂದ್ಯ ಆಡಿದ್ದರು. ವಿಶ್ವಕಪ್‌ಗೆ ದಿನಗಣನೆಗೆ ಆರಂಭವಾಗಿರುವ ಕಾರಣ ಎಲ್ಲ ರಾಷ್ಟ್ರೀಯ ತಂಡಗಳ ಫಿಸಿಯೋಗಳು ಎಲ್ಲ 8 ಫ್ರಾಂಚೈಸಿಗಳಲ್ಲಿರುವ ತಮಗೆ ಸಂಬಂಧಿತ ಆಟಗಾರರ ನಿರಂತರ ಸಂಪರ್ಕದಲ್ಲಿದ್ದು ಅವರ ಕೆಲಸದ ಒತ್ತಡದ ಮೇಲೆ ನಿಗಾವಹಿಸಿದ್ದಾರೆ.

ರಬಾಡ ಈ ಹಿಂದೆಯೂ ಬೆನ್ನುನೋವಿನ ಸಮಸ್ಯೆ ಎದುರಿಸಿದ್ದರು. ಕಳೆದ ವರ್ಷ ಮೂರು ತಿಂಗಳ ಕಾಲ ಸಕ್ರಿಯ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಅವರು ಐಪಿಎಲ್‌ನಿಂದ ಹೊರಗುಳಿದ್ದರು.

ಪ್ರಸ್ತುತ ಅವರು ಐಪಿಎಲ್‌ನಲ್ಲಿ ಗರಿಷ್ಠ ವಿಕೆಟ್‌ಗಳನ್ನು ಪಡೆದಿದ್ದಾರೆ. 14.72ರ ಸರಾಸರಿಯಲ್ಲಿ 12 ಪಂದ್ಯಗಳಲ್ಲಿ 25 ವಿಕೆಟ್‌ಗಳನ್ನು ಉರುಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X