Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಾನು ಮತ್ತು ಬಿಜೆಪಿ ಸದಸ್ಯರು...

ತಾನು ಮತ್ತು ಬಿಜೆಪಿ ಸದಸ್ಯರು ಆರೋಪಿಗಳಿಗೆ ಆರ್ಥಿಕ ಸಹಾಯ ನೀಡಿದ್ದೆವು ಎಂದ ಕೇಂದ್ರ ಸಚಿವ ಜಯಂತ್ ಸಿನ್ಹಾ

ಜಾರ್ಖಂಡ್ ಗುಂಪು ಥಳಿತ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ3 May 2019 12:49 PM IST
share
ತಾನು ಮತ್ತು ಬಿಜೆಪಿ ಸದಸ್ಯರು ಆರೋಪಿಗಳಿಗೆ ಆರ್ಥಿಕ ಸಹಾಯ ನೀಡಿದ್ದೆವು ಎಂದ ಕೇಂದ್ರ ಸಚಿವ ಜಯಂತ್ ಸಿನ್ಹಾ

ಹೊಸದಿಲ್ಲಿ :  ಜಾರ್ಖಂಡ್  ಗುಂಪು ಥಳಿತ ಪ್ರಕರಣದ ಆರೋಪಿಗಳು  ಕಾನೂನು ಸೇವೆ  ಪಡೆಯಲು ಅಗತ್ಯ ಶುಲ್ಕವನ್ನು ಪಾವತಿಸಲು  ತಾವು ಮತ್ತು ಇತರ ಬಿಜೆಪಿ ಸದಸ್ಯರು ಅವರಿಗೆ ಆರ್ಥಿಕ ಸಹಾಯ ನೀಡಿದ್ದಾಗಿ ಕೇಂದ್ರ ಸಚಿವ ಜಯಂತ್ ಸಿನ್ಹಾ ಮಾಧ್ಯಮ ಸಂಸ್ಥೆ ಬಿಬಿಸಿಗೆ ತಿಳಿಸಿದ್ದಾರೆ.

ದನಗಳ ವರ್ತಕನಾಗಿದ್ದ ಅಲೀಮುದ್ದೀನ್ ಅನ್ಸಾರಿಯನ್ನು ಜಾರ್ಖಂಡ್ ನಲ್ಲಿ 2017ರಲ್ಲಿ ಥಳಿಸಿದ  ಆರೋಪಿಗಳಿಗೆ ಮಾಲಾರ್ಪಣೆ ಮಾಡಿದ್ದಕ್ಕೆ ತಾವು ಟೀಕೆಗೊಳಗಾದ ಘಟನೆಯ ಕುರಿತಂತೆ ತಮ್ಮ ನಿಲುವನ್ನು ಸ್ಪಷ್ಟ ಪಡಿಸುವ ಸಂದರ್ಭ  ಸಿನ್ಹಾ ಮೇಲಿನಂತೆ ಹೇಳಿದ್ದಾರೆ.

ಥಳಿತ ಪ್ರಕರಣವನ್ನು ಖಂಡಿಸಿದ ಹಝಾರಿಬಾಗ್ ಬಿಜೆಪಿ ಸಂಸದರಾಗಿರುವ ಸಿನ್ಹಾ, ಅದೇ ಸಮಯ ಆರೋಪಿಗಳು ನಿರಪರಾಧಿಗಳೆಂದು ಹೇಳಿದರಲ್ಲದೆ ಅರನ್ನು ಅನ್ಯಾಯವಾಗಿ ಒಂದು ವರ್ಷ ಜೈಲಿನಲ್ಲಿರುವಂತೆ ಮಾಡಲಾಯಿತು ಎಂದಿದ್ದಾರೆ.

``ನನಗೆ ಸಂತ್ರಸ್ತ ಅಲೀಮುದ್ದೀನ್ ಅನ್ಸಾರಿ ಹಾಗೂ ಆತನ ವಿಧವೆ ಪತ್ನಿ ಮರಿಯಂ ಖಾತೂನ್ ಬಗ್ಗೆ ಪರಿತಾಪವಿದೆ. ಆದರೆ ನನ್ನ ಮನೆಗೆ ಬಂದ ಜನರು ನಿರಪರಾಧಿಗಳಾಗಿದ್ದರು ಹಾಗೂ ಬಡವರಾಗಿದ್ದರು. ಅದೊಂದು ಖಾಸಗಿ   ಭೇಟಿಯಾಗಿತ್ತು. ಅವರು (ಆರೋಪಿ ಮತ್ತಾತನ ಕುಟುಂಬ) ನನ್ನ ಮನೆಗೆ ಬಂದು ನಾನು ಅವರಿಗೆ ಹೊಸ ಜನ್ಮ ನೀಡಿದ್ದಾಗಿ ಹೇಳಿದರು ಹಾಗೂ ಆತನಿಗೆ ಮಾಲಾರ್ಪಣೆ ಮಾಡುವಂತೆ ನನ್ನನ್ನು ಕೇಳಿಕೊಂಡರು. ನಾನು ಒಪ್ಪಿದೆ,'' ಎಂದರು.

ಆದರೆ ಈ ಘಟನೆಯ ವೀಡಿಯೋವನ್ನು ಯಾರೋ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿದ್ದು ಮಾಧ್ಯಮ ಅದನ್ನು ಹೆಕ್ಕಿಕೊಂಡು ವಿವಾದವೇರ್ಪಡುಂತೆ ಮಾಡಿತು ಎಂದರು.

ತಮ್ಮ ಕಾರ್ಯ ಅನುಚಿತವಲ್ಲ ಎಂದ ಸಿನ್ಹಾ ಕೆಲ ಮಾಧ್ಯಮಗಳು ತಾರತಮ್ಯ ನಿಲುವು ಹೊಂದಿವೆ ಎಂದರು.

``ಸಂತ್ರಸ್ತನಿಗೆ ನ್ಯಾಯ ದೊರಕಬೇಕು, ಅದೇ ಸಮಯ  ಅನಗತ್ಯವಾಗಿ ಒಂದು ವರ್ಷ ಜೈಲು ಶಿಕ್ಷೆಗೊಳಗಾದವರಿಗೂ  ನ್ಯಾಯ ಸಿಗಬೇಕು,'' ಎಂದರು.

ಮೃತನ ಕುಟುಂಬಕ್ಕೆ ಸಹಾಯ ಮಾಡುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಿನ್ಹಾ, ``ಮರಿಯಂ ಖಾತೂನ್ ನನ್ನ ಮನೆಗೆ ಬಂದರೆ ಅಥವಾ ಬೇರ್ಯಾರಾದರೂ ಬಂದು ಸಹಾಯ ಯಾಚಿಸಿದರೆ ಖಂಡಿತವಾಗಿಯೂ ಸಹಾಯ ಮಾಡುತ್ತೇನೆ,'' ಎಂದರು.

 ತರುವಾಯ ಸಂತ್ರಸ್ತನ ಪತ್ನಿ ಖಾತೂನ್ ಮಾತನಾಡುತ್ತಾ ತನ್ನ ಪುತ್ರನಿಗೆ ಉದ್ಯೋಗ ದೊರಕಿಸಿ ಕೊಟ್ಟರೆ ಮಾತ್ರ ಸರಕಾರ ತಮಗೆ ಸಹಾಯ ಮಾಡಲು ಸಿದ್ಧವಿದೆ ಎಂಬುದನ್ನು ತಾವು ನಂಬುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X