Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ರಾತ್ರಿ ಮೂತ್ರ ವಿಸರ್ಜನೆಗೆ ಪದೇ ಪದೇ...

ರಾತ್ರಿ ಮೂತ್ರ ವಿಸರ್ಜನೆಗೆ ಪದೇ ಪದೇ ಏಳುತ್ತಿದ್ದರೆ ಅದಕ್ಕೆ ಕಾರಣಗಳಿಲ್ಲಿವೆ

ವಾರ್ತಾಭಾರತಿವಾರ್ತಾಭಾರತಿ3 May 2019 5:45 PM IST
share
ರಾತ್ರಿ ಮೂತ್ರ ವಿಸರ್ಜನೆಗೆ ಪದೇ ಪದೇ ಏಳುತ್ತಿದ್ದರೆ ಅದಕ್ಕೆ ಕಾರಣಗಳಿಲ್ಲಿವೆ

ರಾತ್ರಿಯಿಡೀ ಮೂತ್ರ ವಿಸರ್ಜನೆಗೆ ತೆರಳುವ ಅನಿವಾರ್ಯತೆಯಿದ್ದಾಗ ಸುಖನಿದ್ರೆ ಕನಸಿನ ಮಾತಾಗುತ್ತದೆ. ದಿ ಜರ್ನಲ್ ಆಫ್‌ ಯುರಾಲಜಿಯಲ್ಲಿ ಪ್ರಕಟಗೊಂಡಿರುವ ಸಂಶೋಧನಾ ವರದಿಯಂತೆ ‘ನೊಕ್ಟರಿಯಾ’ ಎಂದು ಕರೆಯಲಾಗುವ ಈ ಸಮಸ್ಯೆ ಪುರುಷರಿಂತ ಮಹಿಳೆಯರನ್ನೇ ಹೆಚ್ಚಾಗಿ ಕಾಡುತ್ತದೆ. 20ರಿಂದ 40ರ ವಯೋಮಾನದ ಶೇ.44ರಷ್ಟು ಮಹಿಳೆಯರು ರಾತ್ರಿ ಕನಿಷ್ಠ ಒಂದು ಬಾರಿ ಮತ್ತು ಶೇ.18ರಷ್ಟು ಮಹಿಳೆಯರು ಕನಿಷ್ಠ ಎರಡು ಬಾರಿಯಾದರೂ ಮೂತ್ರ ವಿಸರ್ಜನೆಗಾಗಿ ಎದ್ದೇಳುತ್ತಾರೆ.

ರಾತ್ರಿ ನಿದ್ರೆಯಲ್ಲಿದ್ದಾಗ ಮೂತ್ರ ವಿಸರ್ಜನೆಗೆಂದು ಎದ್ದೇಳುವುದು ಯಾರಿಗಾದರೂ ಕಿರಿಕಿರಿಯನ್ನುಂಟು ಮಾಡುವುದಷ್ಟೇ ಅಲ್ಲ,ಅದು ನಿದ್ರೆಯ ಗುಣಮಟ್ಟವನ್ನೂ ಕೆಡಿಸುತ್ತದೆ. ಅದು ಶಕ್ತಿಯ ಮಟ್ಟವನ್ನು ಕುಂದಿಸುತ್ತದೆ ಮತ್ತು ಶರೀರದ ಒಟ್ಟಾರೆ ಆರೋಗ್ಯಕ್ಕೂ ವ್ಯತ್ಯಯವನ್ನುಂಟು ಮಾಡುತ್ತದೆ. ಅಲ್ಲದೆ ಅದು ಶರೀರದಲ್ಲಿಯ ಯಾವುದಾದರೂ ಆರೋಗ್ಯ ಸಮಸ್ಯೆಯ ಲಕ್ಷಣವಾಗಿರಲೂಬಹುದು.

► ನಿಮಗೆ ರಾತ್ರಿ ನಿಜಕ್ಕೂ ಮೂತ್ರ ವಿಸರ್ಜನೆಗೆ ಏಳಲೇಬೇಕೇ?

ಇದಕ್ಕೆ ನೀವು ‘ಹೌದು’ ಎಂದೇ ಉತ್ತರಿಸುತ್ತೀರಿ,ಆದರೆ ಒಂದು ಕ್ಷಣ ಈ ಬಗ್ಗೆ ಯೋಚಿಸಿ. ರಾತ್ರಿ ಆಗಾಗ್ಗೆ ಮೂತ್ರವಿಸರ್ಜನೆಗೆ ತೆರಳುವ ಮಹಿಳೆಯರು ನಿಜಕ್ಕೂ ಅದು ಅಗತ್ಯವಾಗಿದೆ ಎಂದು ನಿದ್ರೆಯಿಂದ ಎಚ್ಚೆತ್ತುಕೊಳ್ಳುವುದಿಲ್ಲ. ನಮ್ಮ ಮಿದುಳಿನಲ್ಲಿರುವ ವ್ಯವಸ್ಥೆಯೊಂದು ಮೂತ್ರ ವಿಸರ್ಜನೆಗಾಗಿ ನಿಮ್ಮ ನಿದ್ರೆಗೆ ಭಂಗ ತರುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುತ್ತದೆ. ಕೆಲವೊಮ್ಮೆ ಮಹಿಳೆಯರು ರಾತ್ರಿ ಸುಮ್ಮನೆ ಏಳುತ್ತಾರೆ ಮತ್ತು ಹೇಗೂ ಎದ್ದಾಗಿದೆಯಲ್ಲ ಎಂದುಕೊಂಡು ಮೂತ್ರ ವಿಸರ್ಜನೆಗೆ ತೆರಳುತ್ತಾರೆ. ಪರಿಸ್ಥಿತಿ ಹೀಗಿದ್ದರೆ ಮೂತ್ರ ನಿಯಂತ್ರಣಕ್ಕಿಂತ ಇನ್‌ಸೋಮ್ನಿಯಾ ಅಥವಾ ನಿದ್ರಾಹೀನತೆ ದೊಡ್ಡ ಸಮಸ್ಯೆಯಾಗಿರಬಹುದು.

ಇನ್ನೊಂದೆಡೆ ರಾತ್ರಿ ನಿದ್ರೆಯಿಂದ ಎದ್ದು ಬಾತ್‌ರೂಮಿಗೆ ತೆರಳಿದಾಗ ಕೆಲವೇ ಹನಿಗಳಷ್ಟು ಮೂತ್ರ ವಿಸರ್ಜನೆ ಯಾಗುತ್ತಿದ್ದರೆ ಅದು ಅತಿ ಕ್ರಿಯಾಶೀಲ ಮೂತ್ರಕೋಶ ಸಮಸ್ಯೆಯನ್ನು ಸೂಚಿಸಬಹುದು. ರಾತ್ರಿ ಮೂತ್ರಕೋಶ ತುಂಬಿದ್ದರೆ ಮಲಗುವ ಸಂದರ್ಭದಲ್ಲಿ ಕೆಫೀನ್ ಅಥವಾ ಮದ್ಯದಂತಹ ಮೂತ್ರವರ್ಧಕಗಳು ಸೇರಿದಂತೆ ಅತಿಯಾದ ದ್ರವ ಸೇವನೆ ಕಾರಣವಾಗಿರಬಹುದು. ಕೆಫೀನ್ ಅತಿ ಕ್ರಿಯಾಶೀಲ ಮೂತ್ರಕೋಶಕ್ಕೆ ಕಾರಣವಾಗುತ್ತದೆ ಮತ್ತು ಇದು ಹಗಲು ಮತ್ತು ರಾತ್ರಿ ಪದೇ ಪದೇ ಮೂತ್ರ ವಿಸರ್ಜನೆಗೆ ಹೋಗುವಂತೆ ಮಾಡುತ್ತದೆ.

ಸಂಜೆ ಆರು ಗಂಟೆಯ ಬಳಿಕ ದ್ರವ ಸೇವನೆಯನ್ನು ಕಡಿಮೆ ಮಾಡಿದರೆ ಮತ್ತು ಬೆಳಗ್ಗಿನವರೆಗೆ ಕೆಫೀನ್ ಸೇವನೆಯನ್ನು ನಿಯಂತ್ರಿಸಿದರೆ ಅದು ಪದೇ ಪದೇ ಮೂತ್ರವಿಸರ್ಜನೆ ಸಮಸ್ಯೆಯಿಂದ ಪಾರಾಗಲು ನೆರವಾಗುತ್ತದೆ. ಆದರೆ ನೊಕ್ಟರಿಯಾಕ್ಕೆ ಇತರ ಹಲವಾರು ಕಾರಣಗಳೂ ಇರುವುದರಿಂದ ಇದೊಂದೇ ಕ್ರಮ ಸಮಸ್ಯೆಯ ಪರಿಹಾರಕ್ಕೆ ಸಾಲದಿರಬಹುದು.

► ಮಧ್ಯರಾತ್ರಿಯ ಮೂತ್ರ ವಿಸರ್ಜನೆ ದೊಡ್ಡ ಸಮಸ್ಯೆಯೇ?

ರಾತ್ರಿ ವೇಳೆ ಸೇರಿದಂತೆ ಪದೇ ಪದೇ ಮೂತ್ರ ವಿಸರ್ಜನೆಗೆ ಕಾರಣಗಳು ಸಾಮಾನ್ಯವಾಗಿ ಮುಗಿಯುವಂಥದ್ದಲ್ಲ. ಆದರೆ ಮಧುಮೇಹ ಮತ್ತು ಹೃದ್ರೋಗ ಈ ಸಮಸ್ಯೆಗೆ ಪ್ರಮುಖ ಕಾರಣಗಳಾಗಿವೆ. ಮಹಿಳೆಯರಲ್ಲಿ ಗರ್ಭಾವಸ್ಥೆಯಲ್ಲಿನ ಮಧುಮೇಹ ಕೂಡ ಪದೇ ಪದೇ ಮೂತ್ರ ವಿಸರ್ಜನೆಗೆ ಕಾರಣವಾಗುತ್ತದೆ.

ಗರ್ಭಕೋಶ ಜಾರುವಿಕೆಯಂತಹ ಮೂತ್ರನಾಳದ ಅಂಗರಚನೆಯನ್ನು ಬದಲಿಸುವ ಸ್ಥಿತಿಗಳ ಜೊತೆಗೆ ಮೂತ್ರನಾಳ ಸೋಂಕು ಮತ್ತು ಶ್ರೋಣಿ ಉರಿಯೂತ ಕಾಯಿಲೆ ಇತ್ಯಾದಿಗಳು ಪದೇ ಪದೇ ಮೂತ್ರ ವಿಸರ್ಜನೆಗೆ ತೆರಳುವಂತೆ ಮಾಡುತ್ತವೆ. ಮೂತ್ರಕೋಶದ ಒಳಪದರದಲ್ಲಿ ಉಂಟಾಗುವ ಉರಿಯೂತ ‘ಇಂಟರ್‌ಸ್ಟಿಷಿಯಲ್ ಸಿಸ್ಟಿಟಿಸ್ ’ ಪದೇ ಪದೇ ಮೂತ್ರ ವಿಸರ್ಜನೆಗೆ ಕಾರಣವಾಗುತ್ತದೆ,ಆದರೆ ಅದು ಉಂಟು ಮಾಡುವ ತೀವ್ರನೋವು ಜನರು ವೈದ್ಯರ ಬಳಿ ಧಾವಿಸುವಂತೆ ಮಾಡುತ್ತದೆ. ಕೆಲವು ಔಷಧಿಗಳೂ ರಾತ್ರಿ ವೇಳೆ ಮೂತ್ರ ವಿಸರ್ಜನೆಗೆ ಏಳುವಂತೆ ಮಾಡುತ್ತವೆ.

ಮಹಿಳೆಯರು ಶ್ರೋಣಿಯ ಸ್ನಾಯುಗಳನ್ನು ಬಲಗೊಳಿಸುವ ಕೀಗಲ್‌ನಂತಹ ಕೆಲವು ಸರಳ ವ್ಯಾಯಾಮಗಳನ್ನು ಮಾಡುವುದರಿಂದ ಪದೇ ಪದೇ ಮೂತ್ರ ವಿಸರ್ಜನೆಯನ್ನು ನಿಯಂತ್ರಿಸಲು ನೆರವಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X