Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚಾಮರಾಜನಗರ: ಮಳೆಹಾನಿ ಪ್ರದೇಶಗಳಿಗೆ...

ಚಾಮರಾಜನಗರ: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ, ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ3 May 2019 5:46 PM IST
share
ಚಾಮರಾಜನಗರ: ಮಳೆಹಾನಿ ಪ್ರದೇಶಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಭೇಟಿ, ಪರಿಶೀಲನೆ

ಚಾಮರಾಜನಗರ, ಮೇ 3: ಗಾಳಿ, ಮಳೆಯಿಂದ ಬೆಳೆ ಹಾನಿ ಸಂಭವಿಸಿರುವ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ, ಅಧಿಕಾರಿಗಳೊಂದಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚೆಗೆ ಸುರಿದ ಭಾರಿ ಗಾಳಿ ಸಹಿತ ಮಳೆಯಿಂದ ಬೆಳೆ ಹಾನಿ ಉಂಟಾಗಿರುವ ತಾಲೂಕಿನ ಕಿಲಗೆರೆ, ಯಾನಗನಹಳ್ಳಿ, ಮಾದಲವಾಡಿ ಹಾಗೂ ಬೇಲುಕುಪ್ಪೆ, ಮಾಯನಾಯಕನಪುರ ಗ್ರಾಮಗಳಲ್ಲಿರುವ ಜಮೀನುಗಳಿಗೆ ಭೇಟಿ ನೀಡಿ, ಬೆಳೆ ಹಾನಿಯನ್ನು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ವೀಕ್ಷಿಸಿದರು.

ಇದೇ ವೇಳೆ ಜಿಲ್ಲಾಧಿಕಾರಿ ಅವರು ಮಳೆಯಿಂದ ನಾಶವಾಗಿರುವ ಬೆಳೆಯ ಮಾಹಿತಿ ಸಂಗ್ರಹಿಸಿ ನಿಖರ ವರದಿಯನ್ನು ಶೀಘ್ರವೇ ನೀಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ರೈತರು ಬೆಳೆದು ಹಾನಿಗೊಳಗಾಗಿರುವ ಬೆಳೆ ಎಷ್ಟು ಎಕರೆ ಪ್ರದೇಶದಲ್ಲಿ ಬೆಳೆ ಹಾನಿಗೀಡಾಗಿದೆ ಯಾವ ಯಾವ ಬೆಳೆಗಳು ನಾಶವಾಗಿವೆ ಎಂಬ ಬಗ್ಗೆ ತುರ್ತಾಗಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದರು.

ಮಳೆ ಹಾಗೂ ಗಾಳಿಯಿಂದ ಹಾನಿಗೊಳಗಾಗಿರುವ ಬಾಳೆ, ಕಬ್ಬು, ತೆಂಗು ಬೆಳೆಗಳನ್ನು ಜಿಲ್ಲಾಧಿಕಾರಿ ಅವರು ಪರಿಶೀಲಿಸಿದರು. ಇದೇ ವೇಳೆ ರೈತರು ಮಳೆ-ಗಾಳಿಯಿಂದ ಹಾನಿಗೆ ಒಳಗಾಗಿರುವ ಬೆಳೆಗಳ ಕುರಿತು ಮಾಹಿತಿ ನೀಡಿ ತಮ್ಮ ಅಹವಾಲು ಸಲ್ಲಿಸಿದರು. 

ಬೆಳೆ ಹಾನಿ ಪರಿಹಾರವನ್ನು ಶೀಘ್ರವೇ ಹಾಗೂ ಸರಿಯಾದ ಪ್ರಮಾಣದಲ್ಲಿ ವಿತರಿಸಬೇಕೆಂದು ಮನವಿ ಮಾಡಿದರು. ತಾವು ಬೆಳೆದ ಬೆಳೆಯು ಇನ್ನೊಂದು ತಿಂಗಳಲ್ಲಿ ಕೈ ಸೇರಬೇಕಿತ್ತು. ಈ ಹಂತದಲ್ಲಿ ಮಳೆಯಿಂದ ನಾವು ಬೆಳೆದ ಬೆಳೆ ನಾಶವಾಗಿದೆ. ನಾವು ತೀರಾ ಸಂಕಷ್ಟದಲ್ಲಿದ್ದೇವೆ. ನಮ್ಮ ಬೆಳೆಗೆ ಅನುಗುಣವಾಗಿ ಪರಿಹಾರ ಕೊಡಿಸಬೇಕೆಂದು ಜಿಲ್ಲಾಧಿಕಾರಿಯವರಲ್ಲಿ ರೈತರು, ಬೆಳೆಗಾರರು ಮನವಿ ಮಾಡಿಕೊಂಡರು. 

ಇದೇ ವೇಳೆ ಜಿಲ್ಲಾಧಿಕಾರಿಯವರು ಮಾತನಾಡಿ, ಬೆಳೆ ಹಾನಿಯ ಕುರಿತು ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು. ಸೂಕ್ತ ಹಾಗೂ ಸಮರ್ಪಕ ಪರಿಹಾರಕ್ಕಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದೆಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅವರು ತಿಳಿಸಿದರು.

ತಹಶೀಲ್ದಾರ್ ಯೋಗಾನಂದ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಗುರುಸ್ವಾಮಿ, ಶಿವಲಿಂಗಪ್ಪ, ಸಹಾಯಕ ನಿರ್ದೇಶಕ ನಾಗೇಶ್, ಸಹಾಯಕ ತೋಟಗಾರಿಕೆ ಅಧಿಕಾರಿ ನಂಜುಂಡಯ್ಯ, ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X