Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊಪ್ಪ: ಉಮಾ ಮಹೇಶ್ವರಿ ದೇವಾಲಯಕ್ಕೆ...

ಕೊಪ್ಪ: ಉಮಾ ಮಹೇಶ್ವರಿ ದೇವಾಲಯಕ್ಕೆ ದೇವೇಗೌಡ ಕುಟುಂಬ ಭೇಟಿ

ಪೊಲೀಸ್ ಸರ್ಪಗಾವಲಿನಲ್ಲಿ ಹೋಮ, ಯಾಗ

ವಾರ್ತಾಭಾರತಿವಾರ್ತಾಭಾರತಿ3 May 2019 9:43 PM IST
share
ಕೊಪ್ಪ: ಉಮಾ ಮಹೇಶ್ವರಿ ದೇವಾಲಯಕ್ಕೆ ದೇವೇಗೌಡ ಕುಟುಂಬ ಭೇಟಿ

ಚಿಕ್ಕಮಗಳೂರು, ಮೇ 3: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬ ವರ್ಗದವರು ಶುಕ್ರವಾರ ಜಿಲ್ಲೆ ಕುಡ್ನಳ್ಳಿ ಗ್ರಾಮದಲ್ಲಿರುವ ಉಮಾಮಹೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ್ದು, ಸಿಎಂ ಕುಟುಂಬದವರು ಹಾಗೂ ಕೆಲವೇ ಕೆಲವು ಸಿಎಂ ಆಪ್ತರ ಸಮ್ಮುಖದಲ್ಲಿ ದೇವಾಲಯದ ಆವರಣದಲ್ಲಿ ನಡೆದ ಹೋಮ, ಯಾಗದಲ್ಲಿ ಸಿಎಂ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಭಾಗಿಯಾಗಿದ್ದರು.

ಶುಕ್ರವಾರ ಮಧ್ಯಾಹ್ನದ ವೇಳೆ ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಕುಡ್ನಳ್ಳಿ ಗ್ರಾಮಕ್ಕೆ ಆಗಮಿಸಿದ ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಗ್ರಾಮದಲ್ಲಿರುವ ಉಮಾಮಹೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದರು. ಸಿಎಂ ಭೇಟಿ ಹಿನ್ನೆಲೆಯಲ್ಲಿ ದೇವಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಸರ್ಪಗಾವಲನ್ನು ನಿಯೋಜಿಸಲಾಗಿತ್ತು. ಸಿಎಂ ಭೇಟಿ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿತ್ತು. ದೇವಾಲಯದ ಸುತ್ತಮುತ್ತ 200 ಅಡಿ ದೂರದವರೆಗೆ ಪ್ರವೇಶ ನಿಷೇಧಿಸಿದ್ದರಿಂದ ದೇವಾಲಯದ ಮಾರ್ಗವಾಗಿ ಅಕ್ಕಪಕ್ಕದ ಗ್ರಾಮಗಳಿಗೆ ತೆರಳಬೇಕಿದ್ದ ಗ್ರಾಮಸ್ಥರು ತೊಂದರೆ ಅನುಭವಿಸಿದರು. ದೇವಾಲಯದ ಎದುರಿನ ರಸ್ತೆಯ ಎರಡೂ ಬದಿಗಳಲ್ಲಿ ಪೊಲೀಸರು ನೆರೆದಿದ್ದ ಪರಿಣಾಮ ವಾಹನ ಸಂಚಾರ, ಸಾರ್ವಜನಿಕರ ಓಡಾಟವೂ ಬಂದ್ ಆಗಿತ್ತು. ಸಿಎಂ, ದೇವೇಗೌಡರನ್ನು ನೋಡಲು ಈ ವೇಳೆ ದೇವಾಲಯದ ಸಮೀಪದ ರಸ್ತೆಗಳಲ್ಲಿ ನೆರೆದಿದ್ದ ಜನರನ್ನು ದೂರಕ್ಕೆ ಕಳಸುತ್ತಿದ್ದ ದೃಶ್ಯಗಳು ಕಂಡುಬಂದವು. ಭದ್ರತೆ ನೆಪದಲ್ಲಿ ಪೊಲೀಸರು ತೊಂದರೆ ನೀಡಿದ್ದಕ್ಕೆ ಸಾರ್ವಜನಿಕರು, ಕುಮಾರಸ್ವಾಮಿ ಅಭಿಮಾನಿಗಳು ಸ್ಥಳದಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದುದು ಕಂಡು ಬಂತು.

ದೇವಾಲಯಕ್ಕೆ ಭೇಟಿ ನೀಡಿದ ವೇಳೆ ಸಿಎಂ ಕುಮಾರಸ್ವಾಮಿ ದೇವಾಲಯದ ಮುಖ್ಯಸ್ಥ ಗಣೇಶ್ ಸೋಮಯಾಜಿ ಅವರೊಂದಿಗೆ ಕೆಲಹೊತ್ತು ಮಾತುಕತೆ ನಡೆಸಿದರು. ನಂತರ ಸಿಎಂ ಹಾಗೂ ಎಚ್.ಡಿ.ದೇವೇಗೌಡ ದೇವಾಲಯದ ಆವರಣದಲ್ಲಿ ನಡೆದ ಮಹಾರುದ್ರಯಾಗ ಹಾಗೂ ಗಣಪತಿ ಹೋಮದಲ್ಲಿ ಪಾಲ್ಗೊಂಡರು. ಹೋಮ, ಯಾಗ ಪೂರ್ಣಗೊಳ್ಳುವ ಮುನ್ನ ದೇವೇಗೌಡ ವಿಶ್ರಾಂತಿಗಾಗಿ ದೇವಾಲಯದಿಂದ ಹಿಂದಿರುಗಿದರು. ಸಿಎಂ ಕುಮಾರಸ್ವಾಮಿ ಹಾಗೂ ಕುಟುಂಬದವರು ಹೋಮ, ಯಾಗದಲ್ಲಿ ಪಾಲ್ಗೊಂಡರು. ಈ ವೇಳೆ ಕೆಲವೇ ಸ್ಥಳೀಯ ಜೆಡಿಎಸ್ ಮುಖಂಡರು, ಸಿಎಂ ಆಪ್ತರನ್ನು ದೇವಾಲಯದ ಒಳಗೆ ಬಿಡಲಾಗಿತ್ತು. ದೇವಾಲಯದ ಆವರಣದಲ್ಲಿ ನಾಳೆ ಪೂರ್ಣಹುತಿ ಯಾಗ ನಡೆಯಲಿದ್ದು, ಸಿಎಂ ಕುಟುಂಬದವರು ಈ ಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X