Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಒಪ್ಪಿಗೆ ಪಡೆಯದೆ ವಾಟ್ಸ್ ಆ್ಯಪ್ ಪೇ...

ಒಪ್ಪಿಗೆ ಪಡೆಯದೆ ವಾಟ್ಸ್ ಆ್ಯಪ್ ಪೇ ವ್ಯವಸ್ಥೆ ಆರಂಭಿಸುವಂತಿಲ್ಲ : ಆರ್‌ಬಿಐ

ವಾರ್ತಾಭಾರತಿವಾರ್ತಾಭಾರತಿ3 May 2019 10:05 PM IST
share
ಒಪ್ಪಿಗೆ ಪಡೆಯದೆ ವಾಟ್ಸ್ ಆ್ಯಪ್ ಪೇ ವ್ಯವಸ್ಥೆ ಆರಂಭಿಸುವಂತಿಲ್ಲ : ಆರ್‌ಬಿಐ

ಹೊಸದಿಲ್ಲಿ, ಮೇ 3: ಸಂದೇಶ ಸೇವೆ ನೀಡುವ ವಾಟ್ಸ್ ಆ್ಯಪ್ನಲ್ಲಿ ಸಂಭಾಷಣೆ ಮೂಲಕ ಹಣ ವರ್ಗಾಯಿಸುವ ವ್ಯವಸ್ಥೆ ‘ವಾಟ್ಸ್ ಆ್ಯಪ್ ಪೇ’ಯನ್ನು ತನ್ನ ಒಪ್ಪಿಗೆ ಪಡೆಯದೆ ನಿರ್ವಹಿಸುವಂತಿಲ್ಲ ಮತ್ತು ಇದುವರೆಗೆ ಈ ರೀತಿಯ ಒಪ್ಪಿಗೆ ನೀಡಿಲ್ಲ ಎಂದು ರಿಸರ್ವ್ ಬ್ಯಾಂಕ್ ಸುಪ್ರೀಂಕೋರ್ಟ್‌ಗೆ ತಿಳಿಸಿದೆ. ಆರ್‌ಬಿಐ ಹೊರಡಿಸಿರುವ ಸುತ್ತೋಲೆಯಲ್ಲಿ ವಿವರಿಸಲಾಗಿರುವ ಡೇಟಾ ಸ್ಥಳೀಕರಣ ನಿಯಮವನ್ನು ವಾಟ್ಸ್ ಆ್ಯಪ್ ಪೇ ವ್ಯವಸ್ಥೆ ಅನುಸರಿಸಿಲ್ಲ ಎಂದು ‘ಸೆಂಟರ್ ಫಾರ್ ಅಕೌಂಟೆಬಿಲಿಟಿ ಆ್ಯಂಡ್ ಸಿಸ್ಟಮೆಟಿಕ್ ಚೇಂಜ್(ಸಿಎಎಸ್‌ಸಿ)’ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹೊರಡಿಸಿರುವ ಆದೇಶಕ್ಕೆ ಪ್ರತಿಕ್ರಿಯೆ ನೀಡಿದ ಸಂದರ್ಭ ಆರ್‌ಬಿಐ ಈ ಹೇಳಿಕೆ ನೀಡಿದೆ.

ವಿದೇಶಿ ಸಂಸ್ಥೆಯಾಗಿರುವ ವಾಟ್ಸ್ ಆ್ಯಪ್ಗೆ ಭಾರತದಲ್ಲಿ ಕಚೇರಿ ಅಥವಾ ಸರ್ವರ್‌ಗಳಿಲ್ಲ. ಪಾವತಿ ಸೇವೆ ಆರಂಭಿಸಬೇಕಿದ್ದರೆ ವಾಟ್ಸ್ ಆ್ಯಪ್ ಭಾರತದಲ್ಲಿ ಕಚೇರಿಯನ್ನು ಹೊಂದಿರಬೇಕು . ಅಲ್ಲದೆ ಭಾರತದ ಬಳಕೆದಾರರಿಗೆ ಸಂಬಂಧಿಸಿ ಇಲ್ಲಿ ದೂರು ಅಧಿಕಾರಿ(ಗ್ರಿವೆನ್ಸ್ ಆಫೀಸರ್)ಯನ್ನೂ ಸಂಸ್ಥೆ ಹೊಂದಿರಬೇಕು . ಈ ನಿಯಮ ಉಲ್ಲಂಘಿಸಿದ್ದರೂ ಅವರಿಗೆ ಯಾವುದೇ ಪರಿಶೀಲನೆ ನಡೆಸದೆ ಪಾವತಿ ಮತ್ತಿತರ ಸೇವೆಯನ್ನು ಮುಂದುವರಿಸಲು ಅವಕಾಶ ನೀಡಲಾಗಿದೆ ಎಂದು ಸಿಎಎಸ್‌ಸಿ ಸಲ್ಲಿಸಿದ ಅರ್ಜಿಯಲ್ಲಿ ಹೇಳಲಾಗಿದೆ. ಡೇಟಾ ಸ್ಥಳೀಕರಣ ನಿಯಮದ ಪ್ರಕಾರ ಪಾವತಿ ಸಂಬಂಧಿಸಿದ ಡೇಟಾಗಳನ್ನು ಭಾರತದೊಳಗೆ ಮಾತ್ರ ಸಂಗ್ರಹಿಸಿಡಬೇಕು. ಫೇಸ್‌ಬುಕ್ ಮಾಲಕತ್ವದ ವಾಟ್ಸ್ ಆ್ಯಪ್ಗೆ ಭಾರತದಲ್ಲಿ 200 ಮಿಲಿಯನ್‌ಗೂ ಅಧಿಕ ಬಳಕೆದಾರರಿದ್ದಾರೆ ಎನ್ನಲಾಗಿದೆ. ನೀವು ನಿಯಮ ಪಾಲಿಸುತ್ತಿಲ್ಲ ಎಂದು ಆರ್‌ಬಿಐ ಹೇಳುತ್ತಿದೆ . ಈ ಕುರಿತು ವಿವರಣೆ ನೀಡಿ ಎಂದು ಕಪಿಲ್ ಸಿಬಲ್ ಮತ್ತು ಅರವಿಂದ್ ದಾತಾರ್‌ರನ್ನು ಒಳಗೊಂಡಿರುವ ವಾಟ್ಸ್ ಆ್ಯಪ್ನ ಕಾನೂನು ತಂಡಕ್ಕೆ ನ್ಯಾ. ರೋಹಿಂಟನ್ ನಾರಿಮನ್ ಮತ್ತು ವಿನೀತ್ ಸರನ್ ಅವರಿದ್ದ ನ್ಯಾಯಪೀಠ ಸೂಚಿಸಿತು. ಇದಕ್ಕೆ ಉತ್ತರಿಸಿದ ಸಿಬಲ್, ಡೇಟಾ ಸರ್ವರ್‌ಗಳನ್ನು ಭಾರತದ ಹೊರಗೆ ಸ್ಥಾಪಿಸಲಾಗಿದ್ದು ಈ ವ್ಯವಸ್ಥೆ ಈಗಿನ್ನೂ ಪರೀಕ್ಷಾ ಹಂತದಲ್ಲಿದೆ. ಜುಲೈ ವೇಳೆಗೆ ಅಂತಿಮಗೊಳ್ಳಬಹುದು ಎಂದು ತಿಳಿಸಿದಾಗ , ನಮ್ಮ ಕೈಗಳು ಸಾಕಷ್ಟು ಉದ್ದವಿದೆ ಎಂಬುದನ್ನು ಮರೆಯಬೇಡಿ ಎಂದು ಸುಪ್ರೀಂಕೋರ್ಟ್ ಎಚ್ಚರಿಸಿತು ಹಾಗೂ ಮುಂದಿನ ವಿಚಾರಣೆಯನ್ನು ಜುಲೈಗೆ ನಿಗದಿಗೊಳಿಸಿತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X