Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರದ್ದುಗೊಳಿಸಿದ ಬಳಿಕವೂ ಕೃಷಿ ಕಲ್ಯಾಣ...

ರದ್ದುಗೊಳಿಸಿದ ಬಳಿಕವೂ ಕೃಷಿ ಕಲ್ಯಾಣ ಸೆಸ್‌ನಿಂದ 1,300 ಕೋಟಿ ಸಂಗ್ರಹಿಸಿದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ3 May 2019 10:10 PM IST
share
ರದ್ದುಗೊಳಿಸಿದ ಬಳಿಕವೂ ಕೃಷಿ ಕಲ್ಯಾಣ ಸೆಸ್‌ನಿಂದ 1,300 ಕೋಟಿ ಸಂಗ್ರಹಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ, ಮೇ 3: ಕೃಷಿ ಕಲ್ಯಾಣ ಸೆಸ್(ಕೆಕೆಸಿ) ರದ್ದುಗೊಳಿಸಿದ್ದರೂ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 1,300 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ ಎಂದು ಮಾಹಿತಿ ಹಕ್ಕು ಕಾಯ್ದೆಯಡಿ ಸಲ್ಲಿಸಿದ ಅರ್ಜಿಯಿಂದ ತಿಳಿದುಬಂದಿದೆ. ಜಿಎಸ್‌ಟಿ ಅನುಷ್ಠಾನಗೊಳಿಸಿದ ಬಳಿಕ ವಿತ್ತ ಸಚಿವಾಲಯ ಕ್ರಮೇಣ ಹಲವಾರು ಉಪಕರಗಳನ್ನು (ಸೆಸ್) ರದ್ದುಗೊಳಿಸಿದ್ದು 2017ರ ಜುಲೈ 1ರಂದು ಕೃಷಿ ಕಲ್ಯಾಣ ಸೆಸ್ ಅನ್ನು ರದ್ದುಗೊಳಿಸಲಾಗಿದೆ. ಆದರೂ, ಕೃಷಿ ಕಲ್ಯಾಣ ಸೆಸ್‌ನಡಿ 1,340.55 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ)ಯಡಿ ಸಲ್ಲಿಸಿರುವ ಅರ್ಜಿಗೆ ವಿತ್ತ ಸಚಿವಾಲಯದ ಕಂದಾಯ ವಿಭಾಗದ ಪ್ರಧಾನ ನಿರ್ದೇಶಕರು ನೀಡಿರುವ ಉತ್ತರದಲ್ಲಿ ತಿಳಿಸಲಾಗಿದೆ. ಅಸ್ತಿತ್ವದಲ್ಲಿರದ ತೆರಿಗೆಯ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿರುವ ಪ್ರಕ್ರಿಯೆ ಸರಕಾರದ ಉದ್ದೇಶದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಅರ್ಜಿದಾರರು ಪ್ರತಿಕ್ರಿಯಿಸಿದ್ದಾರೆ. 2017ರ ಜುಲೈ 1ರಿಂದ ಸ್ವಚ್ಛ ಭಾರತ್ ಸೆಸ್ ಹಾಗೂ ಕೆಕೆಸಿಯನ್ನು ರದ್ದುಗೊಳಿಸಲಾಗಿದೆ ಎಂದು 2018ರ ಮಾರ್ಚ್ 6ರಂದು ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿತ್ತ ಇಲಾಖೆಯ ಸಹಾಯಕ ಸಚಿವ ಶಿವಪ್ರತಾಪ್ ಶುಕ್ಲ ತಿಳಿಸಿದ್ದರು. ಜೊತೆಗೆ, 2017ರ ಜೂನ್ 7ರಂದು ವಿತ್ತ ಇಲಾಖೆ ಹೊರಡಿಸಿದ್ದ ಪತ್ರಿಕಾ ಹೇಳಿಕೆಯಲ್ಲಿ , ಜಿಎಸ್‌ಟಿ ಜಾರಿಗೊಳಿಸುವ ಸಲುವಾಗಿ ಕೆಕೆಸಿ ಸೇರಿದಂತೆ ಹಲವು ಉಪತೆರಿಗೆಗಳನ್ನು 2017ರ ಜುಲೈ 1ರಿಂದ ರದ್ದುಗೊಳಿಸುವುದಾಗಿ ತಿಳಿಸಲಾಗಿತ್ತು. ಆದರೆ ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಉತ್ತರದಲ್ಲಿ 2017ರ ಜುಲೈ 1ರಿಂದ 2019ರ ಜನವರಿವರೆಗಿನ ಅವಧಿಯಲ್ಲಿ ಕೆಕೆಸಿಯಡಿ 1,340.55 ಕೋಟಿ ರೂ. ಸಂಗ್ರಹಿಸಿರುವುದು ತಿಳಿದು ಬಂದಿದೆ.

2016ರಲ್ಲಿ ಜಾರಿಗೊಳಿಸಲಾಗಿರುವ ಕೆಕೆಸಿಯಡಿ ತೆರಿಗೆಗೆ ಅರ್ಹವಾಗಿರುವ ಎಲ್ಲಾ ಸೇವೆಗಳ ಮೇಲೆ 0.5% ಕೃಷಿ ಕಲ್ಯಾಣ ಮೇಲ್‌ತೆರಿಗೆ ಸಂಗ್ರಹಿಸಲಾಗುತ್ತದೆ. ಕೃಷಿ ಸುಧಾರಣೆಯ ನಿಟ್ಟಿನಲ್ಲಿ ನಡೆಸುವ ಉಪಕ್ರಮಗಳಿಗೆ ಕೆಕೆಸಿಯ ಹಣವನ್ನು ಬಳಸಲು ಯೋಜನೆ ರೂಪಿಸಲಾಗಿತ್ತು. 2016ರಿಂದ ಕೆಕೆಸಿಯಡಿ ಒಟ್ಟು 10,502.34 ಕೋಟಿ ರೂ. ಸಂಗ್ರಹಿಸಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಪಡೆದ ಉತ್ತರದಿಂದ ತಿಳಿದು ಬಂದಿದೆ. 2016-17ರಲ್ಲಿ 7,572.08 ಕೋಟಿ ರೂ, 2017-18ರಲ್ಲಿ 2,779.79 ಕೋಟಿ ರೂ, 2018-19ರಲ್ಲಿ (2019ರ ಜನವರಿವರೆಗೆ) 150.48 ಕೋಟಿ ರೂ. ಸಂಗ್ರಹಿಸಲಾಗಿದೆ. ಇದೇ ರೀತಿಯ ತೆರಿಗೆಯನ್ನು ಸ್ವಚ್ಛ ಭಾರತ ಸೆಸ್‌ನ ಹೆಸರಿನಲ್ಲಿ ಸಂಗ್ರಹಿಸಲಾಗುತ್ತಿದ್ದು (ಇದನ್ನೂ ರದ್ದುಗೊಳಿಸಲಾಗಿದೆ), ರದ್ದಾದ ಬಳಿಕವೂ ಈ ವಿಭಾಗದಡಿ 2,100 ಕೋಟಿ ರೂ. ಸಂಗ್ರಹಿಸಲಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ಅಸ್ತಿತ್ವದಲ್ಲಿ ಇರದ ಮೇಲ್‌ತೆರಿಗೆಯ ಹೆಸರಿನಲ್ಲಿ ಸಂಗ್ರಹಿಸಿರುವ ಹಣವನ್ನು ಹೇಗೆ ವಿನಿಯೋಗಿಸಲಾಗುತ್ತದೆ ಎಂಬ ಬಗ್ಗೆ ಸರಕಾರ ಯಾವುದೇ ಮಾಹಿತಿ ನೀಡದಿರುವುದು ಕುತೂಹಲಕಾರಿಯಾಗಿದೆ.

ಕೆಕೆಸಿ ಹಣ ಹೇಗೆ ಖರ್ಚು ಮಾಡಲಾಗಿದೆ ?

 ಕೆಕೆಸಿಯಡಿ 2016-17 ಮತ್ತು 2017-18ರಲ್ಲಿ ಸಂಗ್ರಹಿಸಲಾಗಿರುವ ಹಣವನ್ನು ಸರಕಾರದ ಬೆಳೆ ವಿಮೆ ಯೋಜನೆ, ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ(ಪಿಎಂಎಫ್‌ಬಿವೈ) ಹಾಗೂ ರೈತರ ಸಾಲಕ್ಕೆ ಸಬ್ಸಿಡಿ ನೀಡಲು ವಿನಿಯೋಗಿಸಲಾಗಿದೆ ಎಂದು ಕೃಷಿ ಇಲಾಖೆ ಹೇಳಿಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆ ಅರ್ಜಿಗೆ ಉತ್ತರಿಸಿದ್ದ ಕೃಷಿ ಇಲಾಖೆ, 2016-17 ಮತ್ತು 2017-18ರ ಮಧ್ಯೆ ಪಿಎಂಎಫ್‌ಬಿವೈಗೆ 12,512.67 ಕೋಟಿ ರೂ. ಬಳಸಲಾಗಿದೆ ಎಂದು ತಿಳಿಸಿದೆ. ಆದರೆ ಈ ಅವಧಿಯಲ್ಲಿ ಸಂಗ್ರಹವಾಗಿರುವ ತೆರಿಗೆ 10,502.34 ಕೋಟಿ ರೂ. ಮಾತ್ರ ಎಂಬುದು ಗಮನಾರ್ಹವಾಗಿದೆ. ಅಲ್ಲದೆ, ರದ್ದುಗೊಂಡ ಬಳಿಕವೂ ಕೆಕೆಸಿಯಡಿ ಸಂಗ್ರಹಿಸಿದ ಹಣವನ್ನು ಹೇಗೆ ವೆಚ್ಚ ಮಾಡಲಾಗಿದೆ ಎಂಬ ಕುರಿತು ಕೃಷಿ ಇಲಾಖೆ ಯಾವ ಮಾಹಿತಿಯನ್ನೂ ಒದಗಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X