Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಗೌತಮ್ ಗಂಭೀರ್ ವ್ಯಕ್ತಿತ್ವವೇ ಇಲ್ಲದ...

ಗೌತಮ್ ಗಂಭೀರ್ ವ್ಯಕ್ತಿತ್ವವೇ ಇಲ್ಲದ ಜಗಳಗಂಟ

ಆತ್ಮಚರಿತ್ರೆ ಪುಸ್ತಕದಲ್ಲಿ ಶಾಹಿದ್ ಅಫ್ರಿದಿ ಟೀಕೆ

ವಾರ್ತಾಭಾರತಿವಾರ್ತಾಭಾರತಿ3 May 2019 11:33 PM IST
share
ಗೌತಮ್ ಗಂಭೀರ್ ವ್ಯಕ್ತಿತ್ವವೇ ಇಲ್ಲದ ಜಗಳಗಂಟ

ಇಸ್ಲಾಮಾಬಾದ್, ಮೇ 3: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಇತ್ತೀಚೆಗೆ ಬಿಡುಗಡೆಗೊಳಿಸಿರುವ ಆತ್ಮಚರಿತ್ರೆ ‘ಗೇಮ್ ಚೇಂಜರ್’ ಪುಸ್ತಕದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಬಗ್ಗೆ ತೀವ್ರ ಟೀಕಾಪ್ರಹಾರ ನಡೆಸಿದ್ದು, ಗಂಭೀರ್ ವ್ಯಕ್ತಿತ್ವವೇ ಇಲ್ಲದ ಜಗಳಗಂಟ ಎಂದು ಹೇಳಿದ್ದಾರೆ. ಕೆಲವು ಪೈಪೋಟಿಗಳು ವೈಯಕ್ತಿಕವಾಗಿರುತ್ತವೆ ಮತ್ತು ಕೆಲವು ವೃತ್ತಿಪರವಾಗಿರುತ್ತವೆ. ಗೌತಮ್ ವರ್ತನೆಯೇ ಸರಿಯಿಲ್ಲ.

ಆತನಿಗೆ ವ್ಯಕ್ತಿತ್ವವೇ ಇಲ್ಲ. ಕ್ರಿಕೆಟ್ ಎಂಬ ಮಹಾನ್ ವ್ಯವಸ್ಥೆಯಲ್ಲಿ ಆತ ಕೇವಲ ಒಂದು ಪಾತ್ರ ಮಾತ್ರ. ಆತನ ಹೆಸರಲ್ಲಿ ಯಾವುದೇ ಮಹಾನ್ ದಾಖಲೆಗಳಿಲ್ಲ. ಆದರೆ ಆತ ಮಹಾ ಜಗಳಗಂಟ. ತಾನು ಡಾನ್ ಬ್ರಾಡ್ಮನ್ ಮತ್ತು ಜೇಮ್ಸ್ ಬಾಂಡ್ ಅವರ ಮಿಶ್ರಣ ಎಂಬ ರೀತಿ ಆತ ವರ್ತಿಸುತ್ತಾನೆ ಎಂದು ಅಫ್ರಿದಿ ಟೀಕಿಸಿದ್ದಾರೆ. ಖುಷಿಯಾಗಿರುವ, ಸಕಾರಾತ್ಮಕವಾಗಿ ಯೋಚಿಸುವ ಜನರನ್ನು ನಾನು ಇಷ್ಟಪಡುತ್ತೇನೆ. ಅವರು ಆಕ್ರಮಣಕಾರಿ ಅಥವಾ ಸ್ಫರ್ಧಾತ್ಮಕ ಮನೋಭಾವ ಹೊಂದಿರಲಿ ಅದರಿಂದ ಯಾವುದೇ ಸಮಸ್ಯೆಯಿಲ್ಲ. ಆದರೆ ನಿಮ್ಮಲ್ಲಿ ಸಕಾರಾತ್ಮಕ ಮನೋಭಾವ ಇರಬೇಕು. ಆದರೆ ಗಂಭೀರ್ ಇದನ್ನು ಹೊಂದಿಲ್ಲ ಎಂದವರು ತಮ್ಮ ಪುಸ್ತಕದಲ್ಲಿ ಬರೆದಿದ್ದಾರೆ. 2007ರಲ್ಲಿ ಕಾನ್ಪುರದಲ್ಲಿ ಭಾರತ- ಪಾಕ್ ಮಧ್ಯೆ ನಡೆದ ಏಕದಿನ ಪಂದ್ಯದಲ್ಲಿ ಅಫ್ರಿದಿ ಹಾಗೂ ಗಂಭೀರ್ ಮಧ್ಯೆ ತಿಕ್ಕಾಟ ನಡೆದಿತ್ತು. ಇಬ್ಬರ ಮೇಲೂ ಐಸಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪ ದಾಖಲಾಗಿತ್ತು. ಈ ಘಟನೆಯನ್ನು ಸ್ಮರಿಸಿಕೊಂಡಿರುವ ಅಫ್ರಿದಿ ಹೀಗೆ ಹೇಳುತ್ತಾರೆ:

2007ರಲ್ಲಿ ನಡೆದ ಏಶ್ಯಾ ಕಪ್ ಟೂರ್ನಿಯ ಪಂದ್ಯವದು. ನನ್ನ ಬೌಲಿಂಗ್‌ನಲ್ಲಿ ಒಂದು ರನ್ ಗಳಿಸಿದ ಆತ ನನ್ನತ್ತಲೇ ನುಗ್ಗಿ ಬಂದ. ಆಗ ಅಂಪೈರ್ ಅಥವಾ ನಾನು ಈ ಘಟನೆಗೆ ಮುಕ್ತಾಯ ಹೇಳಬೇಕಿತ್ತು. ಆಗ ನಾವಿಬ್ಬರೂ ನೇರವಾಗಿ ನಮ್ಮಿಬ್ಬರ ಗರ್ಲ್‌ಫ್ರೆಂಡ್‌ಗಳ ಬಗ್ಗೆ ಮಾತನ್ನು ವಿನಿಮಯ ಮಾಡಿಕೊಂಡಿದ್ದೆವು ಎಂದು ಹೇಳಿದ್ದಾರೆ. ಇದೇ ಕೃತಿಯಲ್ಲಿ ಅಫ್ರಿದಿ ತಮ್ಮ ನೈಜ ವಯಸ್ಸನ್ನೂ ಬಹಿರಂಗಪಡಿಸಿದ್ದಾರೆ. ಕ್ರಿಕೆಟ್‌ನ ದಾಖಲೆಗಳಲ್ಲಿ ಅಫ್ರಿದಿ 1980ರಲ್ಲಿ ಜನಿಸಿರುವುದಾಗಿ ದಾಖಲಾಗಿದೆ. ಆದರೆ ತಾನು ಹುಟ್ಟಿದ್ದು 1975ರಲ್ಲಿ. ಅಧಿಕಾರಿಗಳು ತನ್ನ ವಯಸ್ಸನ್ನು ತಪ್ಪಾಗಿ ನಮೂದಿಸಿದ್ದರು ಎಂದು ಅಫ್ರಿದಿ ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X