Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 5 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು...

5 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಕೇಳಿದ್ದಕ್ಕೆ 'ಭಾರತ್ ಮಾತಾಕಿ ಜೈ' ಎಂದ ಬಿಜೆಪಿ ಸಂಸದ !

ವಾರ್ತಾಭಾರತಿವಾರ್ತಾಭಾರತಿ4 May 2019 5:30 PM IST
share
5 ವರ್ಷಗಳಲ್ಲಿ ಏನು ಮಾಡಿದ್ದೀರಿ ಎಂದು ಕೇಳಿದ್ದಕ್ಕೆ ಭಾರತ್ ಮಾತಾಕಿ ಜೈ ಎಂದ ಬಿಜೆಪಿ ಸಂಸದ !

ಹೊಸದಿಲ್ಲ, ಮೇ 4: ‘ಭಾರತ್ ಮಾತಾ ಕಿ ಜೈ’ ಘೋಷಣೆಯ ಮೂಲಕ ಕಠಿಣ ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಬಹುದಾಗಿದೆ ಎಂದು ಬಿಜೆಪಿ ಅಭ್ಯರ್ಥಿಗಳು ಹಲವು ಬಾರಿ ಸಾಬೀತು ಪಡಿಸಿದ್ದಾರೆ.

ಇದಕ್ಕೆ ಮತ್ತೊಂದು ಉದಾಹರಣೆ ಪಶ್ಚಿಮ ದಿಲ್ಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಪರ್ವೇಶ್ ಸಾಹಿಬ್ ಸಿಂಗ್. ತಮ್ಮ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಅವರು ಪ್ರಚಾರ ಭಾಷಣ ನಡೆಸುತ್ತಿದ್ದಾಗ ಸಭಿಕರಲ್ಲಿದ್ದ ಒಬ್ಬ ಯುವಕ ಎದ್ದು ನಿಂತು ಕಳೆದ ಐದು ವರ್ಷಗಳಲ್ಲಿ ನೀವೇನು ಮಾಡಿದ್ದೀರಿ ಎಂದು ಪರ್ವೇಶ್ ಅವರನ್ನು ಪ್ರಶ್ನಿಸಿದ್ದ. ಈ ಘಟನೆಯ ವೀಡಿಯೋದಲ್ಲಿ ಕಾಣುತ್ತಿರುವಂತೆ ಈ ಪ್ರಶ್ನೆ ಕೇಳಿ ಪರ್ವೇಶ್ ಅರೆ ಕ್ಷಣ ಗಲಿಬಿಲಿಗೊಂಡಿದ್ದರು. ಏನು ಉತ್ತರಿಸಬೇಕೆಂದು ತಿಳಿಯದೆ ಸುಮ್ಮನೆ ಏನನ್ನೋ ಅವರು ಮಾತನಾಡಿದಾಗ ನೆರೆದಿದ್ದ ಜನರು ಉತ್ತರ ಬೇಕೆಂದು ಒತ್ತಾಯಿಸುತ್ತಿದ್ದಂತೆಯೇ ``ಭಾರತ್ ಮಾತಾ ಕಿ ಜೈ'' ಘೋಷಣೆ ಕೂಗುವಂತೆ ಅವರು ಸಭಿಕರಲ್ಲಿ ಹೇಳುತ್ತಾರೆ.

ಉತ್ತರ ನೀಡುವುದನ್ನು ತಪ್ಪಿಸಲು ಬಿಜೆಪಿ ನಾಯಕರು ಈ ರೀತಿ ಮಾಡುತ್ತಿದ್ದಾರೆಂಬುದಕ್ಕೆ ಉದಾಹರಣೆಯಾಗಿ ಹಲವು ಸಾಮಾಜಿಕ ಜಾಲತಾಣಿಗರು ಈ ವೀಡಿಯೋ ಶೇರ್ ಮಾಡಿದ್ದಾರೆ.

ಪ್ರಶ್ನೆಗಳಿಗೆ ಉತ್ತರಿಸುವುದನ್ನು ತಪ್ಪಿಸಲು ಬಿಜೆಪಿಗರು ಭಾರತ್ ಮಾತಾ ಕಿ ಜೈ ಘೋಷಣೆಗೆ ಮೊರೆ ಹೋಗಿರುವುದು ಇದೇ ಮೊದಲ ಬಾರಿಯಲ್ಲ. ಪತ್ನಿ ಕಿರಣ್ ಖೇರ್ ಪರ ಪ್ರಚಾರ ನಡೆಸುತ್ತಿದ್ದ ವೇಳೆ ನಟ ಅನುಪಮ್ ಖೇರ್ ಅವರಲ್ಲಿ ಅವರ ಪತ್ನಿಯ ವಿರುದ್ಧ ಇರುವ ಆರೋಪಗಳ ಬಗ್ಗೆ ಕೇಳಿದಾಗ ಅನುಪಮ್ ಅವರು ಸುಲಭವಾಗಿ ``ಭಾರತ್ ಮಾತಾ ಕಿ ಜೈ'' ಎಂದು ಬಿಟ್ಟಿದ್ದರು.

ದೇಶಪ್ರೇಮವನ್ನು ಸೂಚಿಸಲು ಬರೀ ಘೋಷಣೆಗಳನ್ನು ಕೂಗುವುದರಿಂದ ನಿಜವಾದ ಸಮಸ್ಯೆಗಳನ್ನು ಅಡಗಿಸಿಡಲು ಸಾಧ್ಯವಿಲ್ಲವೆಂಬುದನ್ನು ಬಿಜೆಪಿ ಅರಿತು  ಪ್ರಶ್ನೆಗಳಿಗೆ ಸೂಕ್ತ ಉತ್ತರನೀಡಲು ಪ್ರಯತ್ನಿಸಬೇಕೆಂದು ಹಲವು ಟ್ವಿಟ್ಟರಿಗರು ಆಗ್ರಹಿಸಿದ್ದಾರೆ.

ग्रामवासी 15 साल में ये रोड बना है ओर ये तो गुलाब सिंह ने बनवाया है आपने 5 साल में क्या किया @p_sahibsingh जी -सांसद साहब से कोई जवाब नही बना तो बोले भारत माता की जय-जरूर सुने फेंकू के चेलो को कैसे जनता का विरोध झेलना पड़ रहा है।। pic.twitter.com/0nrCV7FYCA

— Gulab Singh (@GulabMatiala) May 1, 2019
share
ವಾರ್ತಾಭಾರತಿ
ವಾರ್ತಾಭಾರತಿ
Next Story
X