Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರ್ಜಿಕಲ್ ದಾಳಿಯನ್ನು ವೀಡಿಯೊ ಗೇಮ್ ಎಂದ...

ಸರ್ಜಿಕಲ್ ದಾಳಿಯನ್ನು ವೀಡಿಯೊ ಗೇಮ್ ಎಂದ ಮೋದಿಯಿಂದ ಸೇನೆಗೆ ಅವಮಾನ: ರಾಹುಲ್

ವಾರ್ತಾಭಾರತಿವಾರ್ತಾಭಾರತಿ4 May 2019 8:48 PM IST
share
ಸರ್ಜಿಕಲ್ ದಾಳಿಯನ್ನು ವೀಡಿಯೊ ಗೇಮ್ ಎಂದ ಮೋದಿಯಿಂದ ಸೇನೆಗೆ ಅವಮಾನ: ರಾಹುಲ್

ಹೊಸದಿಲ್ಲಿ, ಮೇ 4: ಯುಪಿಎ ಆಡಳಿತ ಅವಧಿಯಲ್ಲಿ ನಡೆದ ಸರ್ಜಿಕಲ್ ದಾಳಿ ಬಗ್ಗೆ ಸಂಶಯ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮೋದಿ ಅವರು ಹೀಗೆ ಹೇಳುವ ಮೂಲಕ ಸೇನೆಗೆ ಅವಮಾನ ಮಾಡಿದ್ದಾರೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಭೂಸೇನೆ, ನೌಕಾಪಡೆ ಹಾಗೂ ವಾಯು ಪಡೆ ನರೇಂದ್ರ ಮೋದಿಜಿ ಅವರ ವೈಯಕ್ತಿಕ ಸೊತ್ತಲ್ಲ. ಯುಪಿಎ ಆಡಳಿತ ಅವಧಿಯಲ್ಲಿ ನಡೆದ ಸರ್ಜಿಕಲ್ ದಾಳಿಯನ್ನು ಅವರು ವೀಡಿಯೊ ಗೇಮ್ ಎಂದು ಹೇಳಿದ್ದಾರೆ. ಈ ಹೇಳಿಕೆ ಮೂಲಕ ಅವರು ಕಾಂಗ್ರೆಸ್ ಅನ್ನು ಮಾತ್ರವಲ್ಲದೆ, ಸೇನೆಯನ್ನು ಕೂಡ ಅವಮಾನಿಸಿದ್ದಾರೆ. ಈ ದಾಳಿಗಳನ್ನು ನಡೆಸಿರುವುದು ಸೇನೆ. ಇದನ್ನು ನಾವು ರಾಜಕೀಯಗೊಳಿಸಬಾರದು. ಪ್ರಧಾನಿ ಅವರು ಸೇನೆಗೆ ಅವಮಾನ ಮಾಡಬಾರದು ಎಂದರು. ರಫೇಲ್ ಪ್ರಕರಣದ ವಿಚಾರಣೆ ಪ್ರಕ್ರಿಯೆ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದೆ.

ರಫೇಲ್ ಒಪ್ಪಂದದ ಕುರಿತು ಸುಪ್ರೀಂ ಕೋರ್ಟ್ ಹೇಳಿದೆ ಎಂದು ನಾನು ಹೇಳಿಕೆ ನೀಡಿದ್ದೆ. ಆದುದರಿಂದ ನಾನು ಕ್ಷಮೆ ಯಾಚಿಸಿದ್ದೇನೆ. ನಾನು ಬಿಜೆಪಿ ಅಥವಾ ಮೋದಿಜಿ ಅವರ ಕ್ಷಮೆ ಕೇಳಿಲ್ಲ. ‘ಚೌಕಿದಾರ ಚೋರ’ ಎಂಬ ನಮ್ಮ ಘೋಷಣೆ ಇನ್ನು ಕೂಡ ಹಾಗೆಯೇ ಮುಂದುವರಿಯಲಿದೆ ಎಂದು ಅವರು ಹೇಳಿದರು.

ಮಸೂದ್ ಅಝರ್ ಬಿಡುಗಡೆ ವಿಷಯದ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಮಸೂದ್ ಅಝರ್ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಆದರೆ, ಆತನನ್ನು ಪಾಕಿಸ್ತಾನಕ್ಕೆ ಹಿಂದೆ ಕಳುಹಿಸಿದವರು ಯಾರು ?, ಭಯೋತ್ಪಾದನೆಗೆ ತಲೆ ಬಾಗಿಸಿದವರು ಯಾರು ಹಾಗೂ ಆತನನ್ನು ಬಿಡುಗಡೆ ಮಾಡಿದವರು ಯಾರು ? ಕಾಂಗ್ರೆಸ್ ಅಲ್ಲ. ಬದಲಾಗಿ ಬಿಜೆಪಿ ಸರಕಾರ ಎಂದರು.

ಚುನಾವಣೆ ಪ್ರಕ್ರಿಯೆಯ ಅರ್ಧಕ್ಕಿಂತ ಹೆಚ್ಚು ಭಾಗ ಮುಗಿದಿದೆ. ಮೋದಿ ಜಿ ಅವರು ಸೋಲುಣ್ಣುತ್ತಾರೆ ಎಂಬುದು ಸ್ಪಷ್ಟವಾಗಿದೆ. ನಮ್ಮ ಸಾಮಾನ್ಯ ಅಂದಾಜಿನ ಪ್ರಕಾರ ಈ ಚುನಾವಣೆಯಲ್ಲಿ ಬಿಜೆಪಿ ಸೋತು ಹೋಗಲಿದೆ ಎಂದು ಅವರು ಹೇಳಿದರು. ಪ್ರಸ್ತುತ ದೇಶ ಎದುರಿಸುತ್ತಿರುವ ಅತಿ ದೊಡ್ಡ ಸಮಸ್ಯೆ ನಿರುದ್ಯೋಗ. 2 ಕೋಟಿ ಉದ್ಯೋಗದ ಭರವಸೆಯನ್ನು ಯಾಕೆ ಈಡೇರಿಸಿಲ್ಲ ಎಂದು ದೇಶ ಮೋದಿ ಅವರನ್ನು ಪ್ರಶ್ನಿಸುತ್ತಿದೆ. ಅವರು ಉದ್ಯೋಗ, ರೈತರ ಬಗ್ಗೆ ಒಂದು ಮಾತನ್ನು ಕೂಡ ಆಡುತ್ತಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X